Homeಅಂತರಾಷ್ಟ್ರೀಯಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ಮೂಲದ ಮಹಿಳೆಯೊಬ್ಬರು ಮೊದಲ ಬಾರಿಗೆ ಅಮೆರಿಕಾ ಉಪಾಧ್ಯಕ್ಷರಾಗಿ ಶ್ವೇತಭವನದೊಳಗೆ ಹೆಜ್ಜೆ ಹಾಕಲಿದ್ದಾರೆ ಎಂಬ ಅಂಶದ ಹೊರತಾಗಿಯೂ, ಬೈಡೆನ್-ಹ್ಯಾರಿಸ್ ಗೆಲುವು ಮತ್ತೊಂದು ಕಾರಣಕ್ಕಾಗಿ ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಶುಭ ಸುದ್ದಿಯಾಗಿದೆ.

ಹೌದು, ಟ್ರಂಪ್ ನಿರ್ಗಮನದ ನಂತರ ಆರಂಭವಾಗಲಿರುವ ಹೊಸ ಆಡಳಿತವು ಎಚ್ -1ಬಿ ವೀಸಾ ಸೇರಿದಂತೆ, ಕೆಲವು ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹೊಸ ನಿಯಮದಲ್ಲಿ ವೀಸಾಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜಿಸಿದರೆ ಸಾವಿರಾರು ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಅನುಕೂಲವಾಗುತ್ತದೆ.

ಇದು ಸಮಗ್ರ ವಲಸೆ ಸುಧಾರಣೆಯ ಒಂದು ಭಾಗವಾಗಿದ್ದು, ಬೈಡೆನ್ ಆಡಳಿತವು ಒಂದೇ ಬಾರಿಗೆ ಅಥವಾ ಪ್ರತ್ಯೇಕವಾಗಿ ಈ ಕೆಲಸ ಮಾಡಲು ಯೋಜಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಉಲ್ಬಣಗೊಂಡಿರುವ ನಿರುದ್ಯೋಗದಿಂದ ಅಮೆರಿಕಾದ ಉದ್ಯೋಗಿಗಳನ್ನು ರಕ್ಷಿಸಲು ಟ್ರಂಪ್ 2020 ರ ಜೂನ್ ಅಂತ್ಯದವರೆಗೆ ಎಚ್ -1 ಬಿ ವೀಸಾಗಳ ಜೊತೆಗೆ ಇತರ ರೀತಿಯ ವಿದೇಶಿ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಎಚ್ -1 ಬಿ ವಲಸೆರಹಿತ ವೀಸಾ ಕಾರ್ಯಕ್ರಮದ ಮೇಲೆ ಟ್ರಂಪ್ ಆಡಳಿತವು ಅಕ್ಟೋಬರ್‌ನಲ್ಲಿ ಹೊಸ ನಿರ್ಬಂಧಗಳನ್ನು ಘೋಷಿಸಿತ್ತು. ಈ ನಿರ್ಬಂಧಗಳು ಈಗಾಗಲೇ ಅಮೆರಿಕಾದಲ್ಲಿರುವವರಿಗೆ ಅನ್ವಯಿಸುವುದಿಲ್ಲ, ಆದರೆ ಅಮೆರಿಕಾಗೆ ಹೋಗುವ ಹೊಸ ವೀಸಾ ಹೊಂದಿರುವವರಿಗೆ ಮಾತ್ರ ಅನ್ವಯಿಸುತ್ತಿತ್ತು.

ನಗರಗಳು ಮತ್ತು ಜಿಲ್ಲಾ ಪ್ರದೇಶಗಳ ಬೆಳವಣಿಗೆಯನ್ನು ಬೈಡನ್ ಆಡಳಿತ ಬೆಂಬಲಿಸುವ ಕಾರಣ, ವಲಸಿಗರಿಗೆ ಅರ್ಜಿ ಸಲ್ಲಿಸಲು ಆಡಳಿತವು ಹೊಸ ವೀಸಾ ವರ್ಗವನ್ನು ರಚಿಸಲು ಯೋಜಿಸಿದೆ ಎಂದು ತಿಳಿದು ಬಂದಿದೆ.  ಅಲ್ಲದೆ ಪ್ರತಿ ವರ್ಷ ಕನಿಷ್ಠ 95 ಸಾವಿರ ವಲಸಿಗರು ಅಮೆರಿಕದಲ್ಲಿ ಪ್ರವೇಶ ಪಡೆಯುವ ಬಗ್ಗೆಯೂ ಕಾರ್ಯಕ್ರಮ ರೂಪಿಸಲಿದ್ದಾರೆ ಎಂದು ಬೈಡನ್‌ ಪ್ರಚಾರ ಕಾರ್ಯ ತಂಡವು ಬಿಡುಗಡೆ ಮಾಡಿರುವ ನೀತಿ ನಿರೂಪಣಾ ದಾಖಲೆಗಳಲ್ಲಿ ಹೇಳಲಾಗಿದೆ.

ತಂತ್ರಜ್ಞಾನ ಆಧಾರಿತ ಕಂಪನಿಗಳು ಎಚ್ -1 ಬಿ ವೀಸಾಗಳನ್ನು ಅವಲಂಬಿಸಿವೆ. ಇದು ಭಾರತೀಯರಿಗೆ ಮತ್ತು ಚೀನಾದಂತಹ ದೇಶಗಳಿಂದ ಪ್ರತಿವರ್ಷ ಸಾವಿರಾರು ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಗ್ರೀನ್ ಕಾರ್ಡ್‌ಗಳು ಎಂದೂ ಕರೆಯಲ್ಪಡುವ ಉದ್ಯೋಗ ಆಧಾರಿತ ವೀಸಾಗಳು, ನುರಿತ ಕೆಲಸದಲ್ಲಿ ತೊಡಗಿಸಿಕೊಳ್ಳಲು ವಲಸಿಗರಿಗೆ ಅಮೆರಿಕಾದನಲ್ಲಿ ಕಾನೂನುಬದ್ಧವಾಗಿ ಶಾಶ್ವತ ನೆಲೆಯೂರಲು ಅವಕಾಶ ನೀಡುತ್ತದೆ.

ಕುಟುಂಬ ಆಧಾರಿತ ವಲಸೆಗೆ ಬೈಡನ್‌ ಆಡಳಿತ ಬೆಂಬಲ ನೀಡಲಿದೆ. ಅವಿಭಕ್ತ ಕುಟುಂಬದ ಹಿತಾಸಕ್ತಿ ಕಾಪಾಡುವುದು ಅಮೆರಿಕದ ಪ್ರಮುಖ ನೀತಿ ಆಗಿರಲಿದೆ’ ಎಂದು ದಾಖಲೆ ಹೇಳಿದೆ. ಪ್ರಸ್ತುತ, ಉದ್ಯೋಗ ಆಧಾರಿತ ವೀಸಾಗಳ ಸಂಖ್ಯೆಯನ್ನು ಪ್ರತಿವರ್ಷ 1,40,000 ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಅಮೆರಿಕಾ ಚುನಾವಣೆ: ಜೋ ಬೈಡನ್‌ಗೆ ಗೆಲುವು; ಟ್ರಂಪ್‌ಗೆ ಮುಖಭಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...