Homeಅಂತರಾಷ್ಟ್ರೀಯಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ಮೂಲದ ಮಹಿಳೆಯೊಬ್ಬರು ಮೊದಲ ಬಾರಿಗೆ ಅಮೆರಿಕಾ ಉಪಾಧ್ಯಕ್ಷರಾಗಿ ಶ್ವೇತಭವನದೊಳಗೆ ಹೆಜ್ಜೆ ಹಾಕಲಿದ್ದಾರೆ ಎಂಬ ಅಂಶದ ಹೊರತಾಗಿಯೂ, ಬೈಡೆನ್-ಹ್ಯಾರಿಸ್ ಗೆಲುವು ಮತ್ತೊಂದು ಕಾರಣಕ್ಕಾಗಿ ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಶುಭ ಸುದ್ದಿಯಾಗಿದೆ.

ಹೌದು, ಟ್ರಂಪ್ ನಿರ್ಗಮನದ ನಂತರ ಆರಂಭವಾಗಲಿರುವ ಹೊಸ ಆಡಳಿತವು ಎಚ್ -1ಬಿ ವೀಸಾ ಸೇರಿದಂತೆ, ಕೆಲವು ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹೊಸ ನಿಯಮದಲ್ಲಿ ವೀಸಾಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜಿಸಿದರೆ ಸಾವಿರಾರು ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಅನುಕೂಲವಾಗುತ್ತದೆ.

ಇದು ಸಮಗ್ರ ವಲಸೆ ಸುಧಾರಣೆಯ ಒಂದು ಭಾಗವಾಗಿದ್ದು, ಬೈಡೆನ್ ಆಡಳಿತವು ಒಂದೇ ಬಾರಿಗೆ ಅಥವಾ ಪ್ರತ್ಯೇಕವಾಗಿ ಈ ಕೆಲಸ ಮಾಡಲು ಯೋಜಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಉಲ್ಬಣಗೊಂಡಿರುವ ನಿರುದ್ಯೋಗದಿಂದ ಅಮೆರಿಕಾದ ಉದ್ಯೋಗಿಗಳನ್ನು ರಕ್ಷಿಸಲು ಟ್ರಂಪ್ 2020 ರ ಜೂನ್ ಅಂತ್ಯದವರೆಗೆ ಎಚ್ -1 ಬಿ ವೀಸಾಗಳ ಜೊತೆಗೆ ಇತರ ರೀತಿಯ ವಿದೇಶಿ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಎಚ್ -1 ಬಿ ವಲಸೆರಹಿತ ವೀಸಾ ಕಾರ್ಯಕ್ರಮದ ಮೇಲೆ ಟ್ರಂಪ್ ಆಡಳಿತವು ಅಕ್ಟೋಬರ್‌ನಲ್ಲಿ ಹೊಸ ನಿರ್ಬಂಧಗಳನ್ನು ಘೋಷಿಸಿತ್ತು. ಈ ನಿರ್ಬಂಧಗಳು ಈಗಾಗಲೇ ಅಮೆರಿಕಾದಲ್ಲಿರುವವರಿಗೆ ಅನ್ವಯಿಸುವುದಿಲ್ಲ, ಆದರೆ ಅಮೆರಿಕಾಗೆ ಹೋಗುವ ಹೊಸ ವೀಸಾ ಹೊಂದಿರುವವರಿಗೆ ಮಾತ್ರ ಅನ್ವಯಿಸುತ್ತಿತ್ತು.

ನಗರಗಳು ಮತ್ತು ಜಿಲ್ಲಾ ಪ್ರದೇಶಗಳ ಬೆಳವಣಿಗೆಯನ್ನು ಬೈಡನ್ ಆಡಳಿತ ಬೆಂಬಲಿಸುವ ಕಾರಣ, ವಲಸಿಗರಿಗೆ ಅರ್ಜಿ ಸಲ್ಲಿಸಲು ಆಡಳಿತವು ಹೊಸ ವೀಸಾ ವರ್ಗವನ್ನು ರಚಿಸಲು ಯೋಜಿಸಿದೆ ಎಂದು ತಿಳಿದು ಬಂದಿದೆ.  ಅಲ್ಲದೆ ಪ್ರತಿ ವರ್ಷ ಕನಿಷ್ಠ 95 ಸಾವಿರ ವಲಸಿಗರು ಅಮೆರಿಕದಲ್ಲಿ ಪ್ರವೇಶ ಪಡೆಯುವ ಬಗ್ಗೆಯೂ ಕಾರ್ಯಕ್ರಮ ರೂಪಿಸಲಿದ್ದಾರೆ ಎಂದು ಬೈಡನ್‌ ಪ್ರಚಾರ ಕಾರ್ಯ ತಂಡವು ಬಿಡುಗಡೆ ಮಾಡಿರುವ ನೀತಿ ನಿರೂಪಣಾ ದಾಖಲೆಗಳಲ್ಲಿ ಹೇಳಲಾಗಿದೆ.

ತಂತ್ರಜ್ಞಾನ ಆಧಾರಿತ ಕಂಪನಿಗಳು ಎಚ್ -1 ಬಿ ವೀಸಾಗಳನ್ನು ಅವಲಂಬಿಸಿವೆ. ಇದು ಭಾರತೀಯರಿಗೆ ಮತ್ತು ಚೀನಾದಂತಹ ದೇಶಗಳಿಂದ ಪ್ರತಿವರ್ಷ ಸಾವಿರಾರು ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಗ್ರೀನ್ ಕಾರ್ಡ್‌ಗಳು ಎಂದೂ ಕರೆಯಲ್ಪಡುವ ಉದ್ಯೋಗ ಆಧಾರಿತ ವೀಸಾಗಳು, ನುರಿತ ಕೆಲಸದಲ್ಲಿ ತೊಡಗಿಸಿಕೊಳ್ಳಲು ವಲಸಿಗರಿಗೆ ಅಮೆರಿಕಾದನಲ್ಲಿ ಕಾನೂನುಬದ್ಧವಾಗಿ ಶಾಶ್ವತ ನೆಲೆಯೂರಲು ಅವಕಾಶ ನೀಡುತ್ತದೆ.

ಕುಟುಂಬ ಆಧಾರಿತ ವಲಸೆಗೆ ಬೈಡನ್‌ ಆಡಳಿತ ಬೆಂಬಲ ನೀಡಲಿದೆ. ಅವಿಭಕ್ತ ಕುಟುಂಬದ ಹಿತಾಸಕ್ತಿ ಕಾಪಾಡುವುದು ಅಮೆರಿಕದ ಪ್ರಮುಖ ನೀತಿ ಆಗಿರಲಿದೆ’ ಎಂದು ದಾಖಲೆ ಹೇಳಿದೆ. ಪ್ರಸ್ತುತ, ಉದ್ಯೋಗ ಆಧಾರಿತ ವೀಸಾಗಳ ಸಂಖ್ಯೆಯನ್ನು ಪ್ರತಿವರ್ಷ 1,40,000 ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಅಮೆರಿಕಾ ಚುನಾವಣೆ: ಜೋ ಬೈಡನ್‌ಗೆ ಗೆಲುವು; ಟ್ರಂಪ್‌ಗೆ ಮುಖಭಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...