Homeಅಂತರಾಷ್ಟ್ರೀಯಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ಮೂಲದ ಮಹಿಳೆಯೊಬ್ಬರು ಮೊದಲ ಬಾರಿಗೆ ಅಮೆರಿಕಾ ಉಪಾಧ್ಯಕ್ಷರಾಗಿ ಶ್ವೇತಭವನದೊಳಗೆ ಹೆಜ್ಜೆ ಹಾಕಲಿದ್ದಾರೆ ಎಂಬ ಅಂಶದ ಹೊರತಾಗಿಯೂ, ಬೈಡೆನ್-ಹ್ಯಾರಿಸ್ ಗೆಲುವು ಮತ್ತೊಂದು ಕಾರಣಕ್ಕಾಗಿ ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಶುಭ ಸುದ್ದಿಯಾಗಿದೆ.

ಹೌದು, ಟ್ರಂಪ್ ನಿರ್ಗಮನದ ನಂತರ ಆರಂಭವಾಗಲಿರುವ ಹೊಸ ಆಡಳಿತವು ಎಚ್ -1ಬಿ ವೀಸಾ ಸೇರಿದಂತೆ, ಕೆಲವು ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹೊಸ ನಿಯಮದಲ್ಲಿ ವೀಸಾಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜಿಸಿದರೆ ಸಾವಿರಾರು ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಅನುಕೂಲವಾಗುತ್ತದೆ.

ಇದು ಸಮಗ್ರ ವಲಸೆ ಸುಧಾರಣೆಯ ಒಂದು ಭಾಗವಾಗಿದ್ದು, ಬೈಡೆನ್ ಆಡಳಿತವು ಒಂದೇ ಬಾರಿಗೆ ಅಥವಾ ಪ್ರತ್ಯೇಕವಾಗಿ ಈ ಕೆಲಸ ಮಾಡಲು ಯೋಜಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಉಲ್ಬಣಗೊಂಡಿರುವ ನಿರುದ್ಯೋಗದಿಂದ ಅಮೆರಿಕಾದ ಉದ್ಯೋಗಿಗಳನ್ನು ರಕ್ಷಿಸಲು ಟ್ರಂಪ್ 2020 ರ ಜೂನ್ ಅಂತ್ಯದವರೆಗೆ ಎಚ್ -1 ಬಿ ವೀಸಾಗಳ ಜೊತೆಗೆ ಇತರ ರೀತಿಯ ವಿದೇಶಿ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಎಚ್ -1 ಬಿ ವಲಸೆರಹಿತ ವೀಸಾ ಕಾರ್ಯಕ್ರಮದ ಮೇಲೆ ಟ್ರಂಪ್ ಆಡಳಿತವು ಅಕ್ಟೋಬರ್‌ನಲ್ಲಿ ಹೊಸ ನಿರ್ಬಂಧಗಳನ್ನು ಘೋಷಿಸಿತ್ತು. ಈ ನಿರ್ಬಂಧಗಳು ಈಗಾಗಲೇ ಅಮೆರಿಕಾದಲ್ಲಿರುವವರಿಗೆ ಅನ್ವಯಿಸುವುದಿಲ್ಲ, ಆದರೆ ಅಮೆರಿಕಾಗೆ ಹೋಗುವ ಹೊಸ ವೀಸಾ ಹೊಂದಿರುವವರಿಗೆ ಮಾತ್ರ ಅನ್ವಯಿಸುತ್ತಿತ್ತು.

ನಗರಗಳು ಮತ್ತು ಜಿಲ್ಲಾ ಪ್ರದೇಶಗಳ ಬೆಳವಣಿಗೆಯನ್ನು ಬೈಡನ್ ಆಡಳಿತ ಬೆಂಬಲಿಸುವ ಕಾರಣ, ವಲಸಿಗರಿಗೆ ಅರ್ಜಿ ಸಲ್ಲಿಸಲು ಆಡಳಿತವು ಹೊಸ ವೀಸಾ ವರ್ಗವನ್ನು ರಚಿಸಲು ಯೋಜಿಸಿದೆ ಎಂದು ತಿಳಿದು ಬಂದಿದೆ.  ಅಲ್ಲದೆ ಪ್ರತಿ ವರ್ಷ ಕನಿಷ್ಠ 95 ಸಾವಿರ ವಲಸಿಗರು ಅಮೆರಿಕದಲ್ಲಿ ಪ್ರವೇಶ ಪಡೆಯುವ ಬಗ್ಗೆಯೂ ಕಾರ್ಯಕ್ರಮ ರೂಪಿಸಲಿದ್ದಾರೆ ಎಂದು ಬೈಡನ್‌ ಪ್ರಚಾರ ಕಾರ್ಯ ತಂಡವು ಬಿಡುಗಡೆ ಮಾಡಿರುವ ನೀತಿ ನಿರೂಪಣಾ ದಾಖಲೆಗಳಲ್ಲಿ ಹೇಳಲಾಗಿದೆ.

ತಂತ್ರಜ್ಞಾನ ಆಧಾರಿತ ಕಂಪನಿಗಳು ಎಚ್ -1 ಬಿ ವೀಸಾಗಳನ್ನು ಅವಲಂಬಿಸಿವೆ. ಇದು ಭಾರತೀಯರಿಗೆ ಮತ್ತು ಚೀನಾದಂತಹ ದೇಶಗಳಿಂದ ಪ್ರತಿವರ್ಷ ಸಾವಿರಾರು ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಗ್ರೀನ್ ಕಾರ್ಡ್‌ಗಳು ಎಂದೂ ಕರೆಯಲ್ಪಡುವ ಉದ್ಯೋಗ ಆಧಾರಿತ ವೀಸಾಗಳು, ನುರಿತ ಕೆಲಸದಲ್ಲಿ ತೊಡಗಿಸಿಕೊಳ್ಳಲು ವಲಸಿಗರಿಗೆ ಅಮೆರಿಕಾದನಲ್ಲಿ ಕಾನೂನುಬದ್ಧವಾಗಿ ಶಾಶ್ವತ ನೆಲೆಯೂರಲು ಅವಕಾಶ ನೀಡುತ್ತದೆ.

ಕುಟುಂಬ ಆಧಾರಿತ ವಲಸೆಗೆ ಬೈಡನ್‌ ಆಡಳಿತ ಬೆಂಬಲ ನೀಡಲಿದೆ. ಅವಿಭಕ್ತ ಕುಟುಂಬದ ಹಿತಾಸಕ್ತಿ ಕಾಪಾಡುವುದು ಅಮೆರಿಕದ ಪ್ರಮುಖ ನೀತಿ ಆಗಿರಲಿದೆ’ ಎಂದು ದಾಖಲೆ ಹೇಳಿದೆ. ಪ್ರಸ್ತುತ, ಉದ್ಯೋಗ ಆಧಾರಿತ ವೀಸಾಗಳ ಸಂಖ್ಯೆಯನ್ನು ಪ್ರತಿವರ್ಷ 1,40,000 ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಅಮೆರಿಕಾ ಚುನಾವಣೆ: ಜೋ ಬೈಡನ್‌ಗೆ ಗೆಲುವು; ಟ್ರಂಪ್‌ಗೆ ಮುಖಭಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...