Homeಅಂತರಾಷ್ಟ್ರೀಯಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ಮೂಲದ ಮಹಿಳೆಯೊಬ್ಬರು ಮೊದಲ ಬಾರಿಗೆ ಅಮೆರಿಕಾ ಉಪಾಧ್ಯಕ್ಷರಾಗಿ ಶ್ವೇತಭವನದೊಳಗೆ ಹೆಜ್ಜೆ ಹಾಕಲಿದ್ದಾರೆ ಎಂಬ ಅಂಶದ ಹೊರತಾಗಿಯೂ, ಬೈಡೆನ್-ಹ್ಯಾರಿಸ್ ಗೆಲುವು ಮತ್ತೊಂದು ಕಾರಣಕ್ಕಾಗಿ ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಶುಭ ಸುದ್ದಿಯಾಗಿದೆ.

ಹೌದು, ಟ್ರಂಪ್ ನಿರ್ಗಮನದ ನಂತರ ಆರಂಭವಾಗಲಿರುವ ಹೊಸ ಆಡಳಿತವು ಎಚ್ -1ಬಿ ವೀಸಾ ಸೇರಿದಂತೆ, ಕೆಲವು ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹೊಸ ನಿಯಮದಲ್ಲಿ ವೀಸಾಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜಿಸಿದರೆ ಸಾವಿರಾರು ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಅನುಕೂಲವಾಗುತ್ತದೆ.

ಇದು ಸಮಗ್ರ ವಲಸೆ ಸುಧಾರಣೆಯ ಒಂದು ಭಾಗವಾಗಿದ್ದು, ಬೈಡೆನ್ ಆಡಳಿತವು ಒಂದೇ ಬಾರಿಗೆ ಅಥವಾ ಪ್ರತ್ಯೇಕವಾಗಿ ಈ ಕೆಲಸ ಮಾಡಲು ಯೋಜಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಉಲ್ಬಣಗೊಂಡಿರುವ ನಿರುದ್ಯೋಗದಿಂದ ಅಮೆರಿಕಾದ ಉದ್ಯೋಗಿಗಳನ್ನು ರಕ್ಷಿಸಲು ಟ್ರಂಪ್ 2020 ರ ಜೂನ್ ಅಂತ್ಯದವರೆಗೆ ಎಚ್ -1 ಬಿ ವೀಸಾಗಳ ಜೊತೆಗೆ ಇತರ ರೀತಿಯ ವಿದೇಶಿ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಎಚ್ -1 ಬಿ ವಲಸೆರಹಿತ ವೀಸಾ ಕಾರ್ಯಕ್ರಮದ ಮೇಲೆ ಟ್ರಂಪ್ ಆಡಳಿತವು ಅಕ್ಟೋಬರ್‌ನಲ್ಲಿ ಹೊಸ ನಿರ್ಬಂಧಗಳನ್ನು ಘೋಷಿಸಿತ್ತು. ಈ ನಿರ್ಬಂಧಗಳು ಈಗಾಗಲೇ ಅಮೆರಿಕಾದಲ್ಲಿರುವವರಿಗೆ ಅನ್ವಯಿಸುವುದಿಲ್ಲ, ಆದರೆ ಅಮೆರಿಕಾಗೆ ಹೋಗುವ ಹೊಸ ವೀಸಾ ಹೊಂದಿರುವವರಿಗೆ ಮಾತ್ರ ಅನ್ವಯಿಸುತ್ತಿತ್ತು.

ನಗರಗಳು ಮತ್ತು ಜಿಲ್ಲಾ ಪ್ರದೇಶಗಳ ಬೆಳವಣಿಗೆಯನ್ನು ಬೈಡನ್ ಆಡಳಿತ ಬೆಂಬಲಿಸುವ ಕಾರಣ, ವಲಸಿಗರಿಗೆ ಅರ್ಜಿ ಸಲ್ಲಿಸಲು ಆಡಳಿತವು ಹೊಸ ವೀಸಾ ವರ್ಗವನ್ನು ರಚಿಸಲು ಯೋಜಿಸಿದೆ ಎಂದು ತಿಳಿದು ಬಂದಿದೆ.  ಅಲ್ಲದೆ ಪ್ರತಿ ವರ್ಷ ಕನಿಷ್ಠ 95 ಸಾವಿರ ವಲಸಿಗರು ಅಮೆರಿಕದಲ್ಲಿ ಪ್ರವೇಶ ಪಡೆಯುವ ಬಗ್ಗೆಯೂ ಕಾರ್ಯಕ್ರಮ ರೂಪಿಸಲಿದ್ದಾರೆ ಎಂದು ಬೈಡನ್‌ ಪ್ರಚಾರ ಕಾರ್ಯ ತಂಡವು ಬಿಡುಗಡೆ ಮಾಡಿರುವ ನೀತಿ ನಿರೂಪಣಾ ದಾಖಲೆಗಳಲ್ಲಿ ಹೇಳಲಾಗಿದೆ.

ತಂತ್ರಜ್ಞಾನ ಆಧಾರಿತ ಕಂಪನಿಗಳು ಎಚ್ -1 ಬಿ ವೀಸಾಗಳನ್ನು ಅವಲಂಬಿಸಿವೆ. ಇದು ಭಾರತೀಯರಿಗೆ ಮತ್ತು ಚೀನಾದಂತಹ ದೇಶಗಳಿಂದ ಪ್ರತಿವರ್ಷ ಸಾವಿರಾರು ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಗ್ರೀನ್ ಕಾರ್ಡ್‌ಗಳು ಎಂದೂ ಕರೆಯಲ್ಪಡುವ ಉದ್ಯೋಗ ಆಧಾರಿತ ವೀಸಾಗಳು, ನುರಿತ ಕೆಲಸದಲ್ಲಿ ತೊಡಗಿಸಿಕೊಳ್ಳಲು ವಲಸಿಗರಿಗೆ ಅಮೆರಿಕಾದನಲ್ಲಿ ಕಾನೂನುಬದ್ಧವಾಗಿ ಶಾಶ್ವತ ನೆಲೆಯೂರಲು ಅವಕಾಶ ನೀಡುತ್ತದೆ.

ಕುಟುಂಬ ಆಧಾರಿತ ವಲಸೆಗೆ ಬೈಡನ್‌ ಆಡಳಿತ ಬೆಂಬಲ ನೀಡಲಿದೆ. ಅವಿಭಕ್ತ ಕುಟುಂಬದ ಹಿತಾಸಕ್ತಿ ಕಾಪಾಡುವುದು ಅಮೆರಿಕದ ಪ್ರಮುಖ ನೀತಿ ಆಗಿರಲಿದೆ’ ಎಂದು ದಾಖಲೆ ಹೇಳಿದೆ. ಪ್ರಸ್ತುತ, ಉದ್ಯೋಗ ಆಧಾರಿತ ವೀಸಾಗಳ ಸಂಖ್ಯೆಯನ್ನು ಪ್ರತಿವರ್ಷ 1,40,000 ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಅಮೆರಿಕಾ ಚುನಾವಣೆ: ಜೋ ಬೈಡನ್‌ಗೆ ಗೆಲುವು; ಟ್ರಂಪ್‌ಗೆ ಮುಖಭಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...