Homeಮುಖಪುಟವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

- Advertisement -
- Advertisement -

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿಯ ದರ 2,078.50 ರೂ.ಗೆ ತಲುಪಿದೆ.

ಮಾರ್ಚ್ 1 ರಂದು 19 ಕೆಜಿ ಸಿಲಿಂಡರ್‌ ಬೆಲೆಯನ್ನು 114.5 ರೂ. ಹೆಚ್ಚಿಸಲಾಗಿತ್ತು. ಒಂದು ತಿಂಗಳ ಅಂತರದಲ್ಲಿ ಇದೀಗ ಮತ್ತೆ ಬೆಲೆ ಏರಿಕೆ ಮಾಡಲಾಗಿದೆ.

ಬೆಲೆ ಏರಿಕೆ ಬಳಿಕ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ದರವು ಭಾರೀ ಏರಿಕೆ ಕಂಡಿದ್ದು, 2,161 ರೂ.ಗೆ ತಲುಪಿದೆ. ಇಂಧನ ಮತ್ತು ಅನಿಲ ದರ ಏರಿಕೆಯಿಂದಾಗಿ ನಗರದಲ್ಲಿ ಪೆಟ್ರೋಲ್ ಪಂಪ್‌ಗಳ ಕಾರ್ಯಾಚರಣೆಯ ಮೇಲೂ ಪರಿಣಾಮ ಬೀರುತ್ತಿದ್ದು, ಆಟೋರಿಕ್ಷಾಗಳ ಸೇವೆ ವ್ಯತ್ಯಯವಾಗುವ ಆತಂಕ ಎದುರಾಗಿದೆ. ಇದರಿಂದಾಗಿ ಪ್ರಯಾಣಿಕರು ಆಟೋಗಾಗಿ ಕಾಯುವ ಸಮಯ ಹೆಚ್ಚಾಗುವ ಸಾಧ್ಯತೆಯಿದೆ.

ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ತೈಲ ಪೂರೈಕೆ ರಹದಾರಿ ಹಾರ್ಮುಝ್ ಜಲಸಂಧಿಯಲ್ಲಿ ಇಂಧನ ಹಡಗುಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಣಾಮ ಭಾರತದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರ ಲಾಭ ಪಡೆದ ಹೋಟೆಲ್ ಮಾಲೀಕರು ಆಹಾರದ ಬೆಲೆಯನ್ನು ಇಷ್ಟ ಬಂದಂತೆ ಏರಿಕೆ ಮಾಡಿದ್ದಾರೆ.

ಜನ ಸಾಮಾನ್ಯರಿಗೆ ಮನೆಯಲ್ಲಿ ಆಹಾರ ತಯಾರಿಸಲು ಎಲ್‌ಪಿಜಿ ಸಿಲಿಂಡರ್ ಸರಿಯಾಗಿ ಸಿಗುತ್ತಿಲ್ಲ. ಹೋಟೆಲ್‌ಗೆ ಹೋಗಿ ತಿನ್ನೋಣ ಎಂದರೆ ಬೆಲೆ ದುಪ್ಪಟ್ಟಾಗಿದೆ. ಇದೀಗ ವಾಣಿಜ್ಯ ಎಲ್‌ಪಿಜಿ ದರ ಮತ್ತೆ ಏರಿಕೆಯಾಗಿರುವುದರಿಂದ ಹೋಟೆಲ್ ಮಾಲೀಕರು ದರವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ. ಹಾಗಾಗಿ, ಇದು ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಲಿದೆ.

ಗ್ಯಾಸ್ ಸಿಲಿಂಡರ್ ಸರಿಯಾಗಿ ಪೂರೈಕೆಯಾಗದ ಕಾರಣ ವಿಶೇಷವಾಗಿ ನಗರ ಪ್ರದೇಶದ ಜನರು ವಿದ್ಯುತ್ ಒಲೆಗಳ ಮೊರೆ ಹೋಗುತ್ತಿದ್ದಾರೆ. ಹಠಾತ್ ಬೇಡಿಕೆ ಹೆಚ್ಚಾದ ಕಾರಣ, ವಿದ್ಯುತ್ ಒಲೆ ಮಾರಾಟ ಕಂಪನಿಗಳು ಕೂಡ ಭಾರೀ ಬೆಲೆ ಏರಿಕೆ ಮಾಡಿವೆ. ಜನವರಿಯ ಹೊತ್ತಿಗೆ 2 ಸಾವಿರ ರೂಪಾಯಿಗೆ ಸಿಗುತ್ತಿದ್ದ ವಿದ್ಯುತ್ ಒಲೆಗಳ ಬೆಲೆ ಈಗ 4ರಿಂದ 5 ಸಾವಿರಕ್ಕೆ ಏರಿಕೆಯಾಗಿದೆ.

ಮಾರ್ಚ್ 7ರಂದು 14.2 ಕೆಜಿಯ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ. ಹೆಚ್ಚಿಸಲಾಗಿತ್ತು. ಆ ಬಳಿಕ ದರ ಹೆಚ್ಚಳವಾಗಿಲ್ಲ. ಪ್ರಸ್ತುತ ದೆಹಲಿಯಲ್ಲಿ ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆ 913 ರೂ. ಇದೆ.

ಸರ್ಕಾರಿ ಸ್ವಾಮ್ಯದ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಎಟಿಎಫ್ ಮತ್ತು ಎಲ್‌ಪಿಜಿ ದರಗಳನ್ನು ಸರಿ ಹೊಂದಿಸುತ್ತವೆ. ಇದು ಜಾಗತಿಕ ಬೆಲೆ ಪ್ರವೃತ್ತಿಗಳು ಮತ್ತು ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಳ್ಳುತ್ತದೆ.

ಪಶ್ಚಿಮ ಏಷ್ಯಾ ಸಂಘರ್ಷದಿಂದ ಇಂಧನ ಪೂರೈಕೆ ಸರಪಳಿಗೆ ಅಡಚಣೆ ಉಂಟಾಗಿದೆ. ಪರಿಣಾಮ ಜಾಗತಿಕ ತೈಲ ಬೆಲೆಗಳು ಸುಮಾರು ಶೇಕಡ 50ರಷ್ಟು ಹೆಚ್ಚಾಗಿದೆ.

ಕಳೆದ ವರ್ಷ ಮಾರ್ಚ್‌ನಲ್ಲಿ ಲೀಟರ್‌ಗೆ 2 ರೂ. ಇಳಿಕೆಯಾದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹಾಗೆಯೇ ಮುಂದುವರೆದಿವೆ. ದೆಹಲಿಯಲ್ಲಿ ಪ್ರಸ್ತುತ ಪೆಟ್ರೋಲ್ ಬೆಲೆ ಲೀಟರ್‌ಗೆ 94.72 ರೂ. ಮತ್ತು ಡೀಸೆಲ್ 87.62 ರೂ. ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...