Homeಮುಖಪುಟಐಐಸಿಸಿ ಅಧ್ಯಕ್ಷರಾಗಿ ಸಲ್ಮಾನ್ ಖುರ್ಷಿದ್ ಆಯ್ಕೆ : ಆರ್‌ಎಸ್‌ಎಸ್‌ಗೆ ಮುಖಭಂಗ

ಐಐಸಿಸಿ ಅಧ್ಯಕ್ಷರಾಗಿ ಸಲ್ಮಾನ್ ಖುರ್ಷಿದ್ ಆಯ್ಕೆ : ಆರ್‌ಎಸ್‌ಎಸ್‌ಗೆ ಮುಖಭಂಗ

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಖ್ಯಾತ ವಕೀಲ ಸಲ್ಮಾನ್ ಖುರ್ಷಿದ್ ಅವರು ರಾಷ್ಟ್ರ ರಾಜಧಾನಿ ಪ್ರತಿಷ್ಠಿತ ಅಲ್ಪಸಂಖ್ಯಾತ ಸಂಸ್ಥೆ ಇಂಡಿಯಾ ಇಸ್ಲಾಮಿಕ್ ಕಲ್ಚರ್ ಸೆಂಟರ್ (ಐಐಸಿಸಿ) ಯ ಅಧ್ಯಕ್ಷರಾಗಿ ಬುಧವಾರ ಆಯ್ಕೆಯಾಗಿದ್ದಾರೆ.

ಇದರಿಂದ ಈ ಪ್ರಾತಿನಿಧಿಕ ಸಾಂಸ್ಕೃತಿಕ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ತನ್ನ ಅಸ್ತಿತ್ವ ಸ್ಥಾಪಿಸಲು ಹೊರಟಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕ್ಕೆ ಮುಖಭಂಗವಾಗಿದೆ. ಖುರ್ಷಿದ್ ಅವರು 721 ಮತಗಳನ್ನು ಪಡೆದು ಜಯಭೇರಿ ಸಾಧಿಸಿದ್ದಾರೆ.

ಆರ್‌ಎಸ್‌ಎಸ್‌ ಬೆಂಬಲಿತ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ)ನ ಸಂಚಾಲಕ ಮತ್ತು ಖ್ಯಾತ ಕ್ಯಾನ್ಸರ್ ತಜ್ಞ ಡಾ.ಮಜೀದ್ ಅಹ್ಮದ್ ತಾಳಿಕೋಟಿ ಸಂಸ್ಥೆಯ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿದ್ದರು. ಐಐಸಿಸಿ ಮಾಜಿ ಅಧ್ಯಕ್ಷ ಸಿರಾಜುದ್ದೀನ್ ಖುರೇಷಿ ಅವರ ಬೆಂಬಲವೂ ತಾಳಿಕೋಟಿಯವರಿಗಿತ್ತು. ಆದರೆ, ಅವರು ಕೇವಲ 227 ಮತಗಳನ್ನಷ್ಟೇ ಪಡೆಯಲು ಸಾಧ್ಯವಾಯಿತು. ಖುರ್ಷಿದ್ ಬಳಿಕ ಉದ್ಯಮಿ ದಾನಿ ಆಸೀಫ್ ಹಬೂಬ್ 278 ಮತ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಒಟ್ಟು 13 ಸದಸ್ಯರ ಆಡಳಿತ ಮಂಡಳಿಯಲ್ಲಿ ಕನಿಷ್ಠ ಎಂಟು ಮಂದಿ ಖುರ್ಷಿದ್ ಬೆಂಬಲಿಗರು ಆಯ್ಕೆಯಾಗಿದ್ದಾರೆ. “ಐಐಸಿಸಿ ಅಧ್ಯಕ್ಷ ಹುದ್ದೆಗೆ ಆಯ್ಕೆಯಾಗಿರುವುದು ನನಗೆ ಸಂದ ಅತಿದೊಡ್ಡ ಗೌರವ. ವಿಶ್ವಾಸ ಮತ್ತು ಬೆಂಬಲಕ್ಕಾಗಿ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲಾ ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಐಐಸಿಸಿ ಮೌಲ್ಯಗಳನ್ನು ಉಳಿಸಿ ಬೆಳೆಸಲು ಎಲ್ಲರೂ ಜೊತೆಯಾಗಿ ಕಾರ್ಯ ನಿರ್ವಹಿಸೋಣ” ಎಂದು ಖುರ್ಷಿದ್ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಆಗಸ್ಟ್ 11ರಂದು ಐಐಸಿಸಿ ಚುನಾವಣೆ ನಡೆದಿದ್ದು, ಮೂರು ದಿನಗಳ ಮತ ಎಣಿಕೆ ಬಳಿಕ ಬುಧವಾರ ಫಲಿತಾಂಶ ಪ್ರಕಟಿಸಲಾಗಿದೆ. ನಿವೃತ್ತ ಉನ್ನತಾಧಿಕಾರಿ ಅಬ್ರಾರ್ ಅಹ್ಮದ್ ಹಾಗೂ ಹಬೀಬ್ ಕಣಕ್ಕೆ ಇಳಿಯುವ ಮೂಲಕ ಅಧ್ಯಕ್ಷ ಹುದ್ದೆಗೆ ಬಹುಮುಖಿ ಸ್ಪರ್ಧೆ ಇತ್ತು.

ಐಐಸಿಸಿ ಜನರಲ್ಲಿ ಪರಸ್ಪರ ತಿಳುವಳಿಕೆ ಮತ್ತು ಸೌಹಾರ್ದತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಇಸ್ಲಾಂನ ನಿಜವಾದ ಸಂದೇಶವನ್ನು ಅತ್ಯಂತ ಸಹಿಷ್ಣು, ಉದಾರ, ಪ್ರಗತಿಪರ ಮತ್ತು ತರ್ಕಬದ್ಧವಾಗಿ ತಲುಪಿಸುವ ಕೆಲಸವನ್ನೂ ಈ ಸಂಸ್ಥೆ ಮಾಡುತ್ತದೆ. ಲೋಧಿ ರಸ್ತೆಯಲ್ಲಿ ಸರ್ಕಾರ ಮಂಜೂರು ಮಾಡಿರುವ ಜಮೀನಿನಲ್ಲಿ ಈ ಕೇಂದ್ರ ತಲೆ ಎತ್ತಿ ನಿಂತಿದೆ. ಐಐಸಿಸಿಯ ಆಡಳಿತ ಮಂಡಳಿಗೆ ಪ್ರತಿ ಐದು ವರ್ಷಗಳಿಗೊಮ್ಮೆ ಚುನಾವಣೆ ನಡೆಯುತ್ತದೆ.

ಈ ಸಂಸ್ಥೆಯು ಎಲ್ಲಾ ವರ್ಗಗಳ 4,000 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ. ಆದರೆ, ಇತ್ತೀಚಿನ ಚುನಾವಣೆಯಲ್ಲಿ ಸುಮಾರು 2,000 ಜನರು ಮಾತ್ರ ಮತ ಚಲಾಯಿಸಲು ಅರ್ಹರಾಗಿದ್ದರು. ಐಐಸಿಸಿಯ ಚುನಾವಣೆಗೆ ಆರ್‌ಎಸ್‌ಎಸ್ ಬೆಂಬಲಿತ ತಾಳಿಕೋಟಿಯ ಪ್ರವೇಶವನ್ನು ಮುಸ್ಲಿಂ ಸಂಸ್ಥೆಗಳ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವ ಬಲಪಂಥೀಯ ಪ್ರಯತ್ನವೆಂದು ಬಣ್ಣಿಸಲಾಗಿದೆ.

ಇದನ್ನೂ ಓದಿ : ಮಾರಣಾಂತಿಕ ‘ಎಂಪಾಕ್ಸ್’ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...