Homeಮುಖಪುಟಐಐಸಿಸಿ ಅಧ್ಯಕ್ಷರಾಗಿ ಸಲ್ಮಾನ್ ಖುರ್ಷಿದ್ ಆಯ್ಕೆ : ಆರ್‌ಎಸ್‌ಎಸ್‌ಗೆ ಮುಖಭಂಗ

ಐಐಸಿಸಿ ಅಧ್ಯಕ್ಷರಾಗಿ ಸಲ್ಮಾನ್ ಖುರ್ಷಿದ್ ಆಯ್ಕೆ : ಆರ್‌ಎಸ್‌ಎಸ್‌ಗೆ ಮುಖಭಂಗ

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಖ್ಯಾತ ವಕೀಲ ಸಲ್ಮಾನ್ ಖುರ್ಷಿದ್ ಅವರು ರಾಷ್ಟ್ರ ರಾಜಧಾನಿ ಪ್ರತಿಷ್ಠಿತ ಅಲ್ಪಸಂಖ್ಯಾತ ಸಂಸ್ಥೆ ಇಂಡಿಯಾ ಇಸ್ಲಾಮಿಕ್ ಕಲ್ಚರ್ ಸೆಂಟರ್ (ಐಐಸಿಸಿ) ಯ ಅಧ್ಯಕ್ಷರಾಗಿ ಬುಧವಾರ ಆಯ್ಕೆಯಾಗಿದ್ದಾರೆ.

ಇದರಿಂದ ಈ ಪ್ರಾತಿನಿಧಿಕ ಸಾಂಸ್ಕೃತಿಕ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ತನ್ನ ಅಸ್ತಿತ್ವ ಸ್ಥಾಪಿಸಲು ಹೊರಟಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕ್ಕೆ ಮುಖಭಂಗವಾಗಿದೆ. ಖುರ್ಷಿದ್ ಅವರು 721 ಮತಗಳನ್ನು ಪಡೆದು ಜಯಭೇರಿ ಸಾಧಿಸಿದ್ದಾರೆ.

ಆರ್‌ಎಸ್‌ಎಸ್‌ ಬೆಂಬಲಿತ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ)ನ ಸಂಚಾಲಕ ಮತ್ತು ಖ್ಯಾತ ಕ್ಯಾನ್ಸರ್ ತಜ್ಞ ಡಾ.ಮಜೀದ್ ಅಹ್ಮದ್ ತಾಳಿಕೋಟಿ ಸಂಸ್ಥೆಯ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿದ್ದರು. ಐಐಸಿಸಿ ಮಾಜಿ ಅಧ್ಯಕ್ಷ ಸಿರಾಜುದ್ದೀನ್ ಖುರೇಷಿ ಅವರ ಬೆಂಬಲವೂ ತಾಳಿಕೋಟಿಯವರಿಗಿತ್ತು. ಆದರೆ, ಅವರು ಕೇವಲ 227 ಮತಗಳನ್ನಷ್ಟೇ ಪಡೆಯಲು ಸಾಧ್ಯವಾಯಿತು. ಖುರ್ಷಿದ್ ಬಳಿಕ ಉದ್ಯಮಿ ದಾನಿ ಆಸೀಫ್ ಹಬೂಬ್ 278 ಮತ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಒಟ್ಟು 13 ಸದಸ್ಯರ ಆಡಳಿತ ಮಂಡಳಿಯಲ್ಲಿ ಕನಿಷ್ಠ ಎಂಟು ಮಂದಿ ಖುರ್ಷಿದ್ ಬೆಂಬಲಿಗರು ಆಯ್ಕೆಯಾಗಿದ್ದಾರೆ. “ಐಐಸಿಸಿ ಅಧ್ಯಕ್ಷ ಹುದ್ದೆಗೆ ಆಯ್ಕೆಯಾಗಿರುವುದು ನನಗೆ ಸಂದ ಅತಿದೊಡ್ಡ ಗೌರವ. ವಿಶ್ವಾಸ ಮತ್ತು ಬೆಂಬಲಕ್ಕಾಗಿ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲಾ ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಐಐಸಿಸಿ ಮೌಲ್ಯಗಳನ್ನು ಉಳಿಸಿ ಬೆಳೆಸಲು ಎಲ್ಲರೂ ಜೊತೆಯಾಗಿ ಕಾರ್ಯ ನಿರ್ವಹಿಸೋಣ” ಎಂದು ಖುರ್ಷಿದ್ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಆಗಸ್ಟ್ 11ರಂದು ಐಐಸಿಸಿ ಚುನಾವಣೆ ನಡೆದಿದ್ದು, ಮೂರು ದಿನಗಳ ಮತ ಎಣಿಕೆ ಬಳಿಕ ಬುಧವಾರ ಫಲಿತಾಂಶ ಪ್ರಕಟಿಸಲಾಗಿದೆ. ನಿವೃತ್ತ ಉನ್ನತಾಧಿಕಾರಿ ಅಬ್ರಾರ್ ಅಹ್ಮದ್ ಹಾಗೂ ಹಬೀಬ್ ಕಣಕ್ಕೆ ಇಳಿಯುವ ಮೂಲಕ ಅಧ್ಯಕ್ಷ ಹುದ್ದೆಗೆ ಬಹುಮುಖಿ ಸ್ಪರ್ಧೆ ಇತ್ತು.

ಐಐಸಿಸಿ ಜನರಲ್ಲಿ ಪರಸ್ಪರ ತಿಳುವಳಿಕೆ ಮತ್ತು ಸೌಹಾರ್ದತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಇಸ್ಲಾಂನ ನಿಜವಾದ ಸಂದೇಶವನ್ನು ಅತ್ಯಂತ ಸಹಿಷ್ಣು, ಉದಾರ, ಪ್ರಗತಿಪರ ಮತ್ತು ತರ್ಕಬದ್ಧವಾಗಿ ತಲುಪಿಸುವ ಕೆಲಸವನ್ನೂ ಈ ಸಂಸ್ಥೆ ಮಾಡುತ್ತದೆ. ಲೋಧಿ ರಸ್ತೆಯಲ್ಲಿ ಸರ್ಕಾರ ಮಂಜೂರು ಮಾಡಿರುವ ಜಮೀನಿನಲ್ಲಿ ಈ ಕೇಂದ್ರ ತಲೆ ಎತ್ತಿ ನಿಂತಿದೆ. ಐಐಸಿಸಿಯ ಆಡಳಿತ ಮಂಡಳಿಗೆ ಪ್ರತಿ ಐದು ವರ್ಷಗಳಿಗೊಮ್ಮೆ ಚುನಾವಣೆ ನಡೆಯುತ್ತದೆ.

ಈ ಸಂಸ್ಥೆಯು ಎಲ್ಲಾ ವರ್ಗಗಳ 4,000 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ. ಆದರೆ, ಇತ್ತೀಚಿನ ಚುನಾವಣೆಯಲ್ಲಿ ಸುಮಾರು 2,000 ಜನರು ಮಾತ್ರ ಮತ ಚಲಾಯಿಸಲು ಅರ್ಹರಾಗಿದ್ದರು. ಐಐಸಿಸಿಯ ಚುನಾವಣೆಗೆ ಆರ್‌ಎಸ್‌ಎಸ್ ಬೆಂಬಲಿತ ತಾಳಿಕೋಟಿಯ ಪ್ರವೇಶವನ್ನು ಮುಸ್ಲಿಂ ಸಂಸ್ಥೆಗಳ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವ ಬಲಪಂಥೀಯ ಪ್ರಯತ್ನವೆಂದು ಬಣ್ಣಿಸಲಾಗಿದೆ.

ಇದನ್ನೂ ಓದಿ : ಮಾರಣಾಂತಿಕ ‘ಎಂಪಾಕ್ಸ್’ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...