Homeಮುಖಪುಟಐಐಸಿಸಿ ಅಧ್ಯಕ್ಷರಾಗಿ ಸಲ್ಮಾನ್ ಖುರ್ಷಿದ್ ಆಯ್ಕೆ : ಆರ್‌ಎಸ್‌ಎಸ್‌ಗೆ ಮುಖಭಂಗ

ಐಐಸಿಸಿ ಅಧ್ಯಕ್ಷರಾಗಿ ಸಲ್ಮಾನ್ ಖುರ್ಷಿದ್ ಆಯ್ಕೆ : ಆರ್‌ಎಸ್‌ಎಸ್‌ಗೆ ಮುಖಭಂಗ

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಖ್ಯಾತ ವಕೀಲ ಸಲ್ಮಾನ್ ಖುರ್ಷಿದ್ ಅವರು ರಾಷ್ಟ್ರ ರಾಜಧಾನಿ ಪ್ರತಿಷ್ಠಿತ ಅಲ್ಪಸಂಖ್ಯಾತ ಸಂಸ್ಥೆ ಇಂಡಿಯಾ ಇಸ್ಲಾಮಿಕ್ ಕಲ್ಚರ್ ಸೆಂಟರ್ (ಐಐಸಿಸಿ) ಯ ಅಧ್ಯಕ್ಷರಾಗಿ ಬುಧವಾರ ಆಯ್ಕೆಯಾಗಿದ್ದಾರೆ.

ಇದರಿಂದ ಈ ಪ್ರಾತಿನಿಧಿಕ ಸಾಂಸ್ಕೃತಿಕ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ತನ್ನ ಅಸ್ತಿತ್ವ ಸ್ಥಾಪಿಸಲು ಹೊರಟಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕ್ಕೆ ಮುಖಭಂಗವಾಗಿದೆ. ಖುರ್ಷಿದ್ ಅವರು 721 ಮತಗಳನ್ನು ಪಡೆದು ಜಯಭೇರಿ ಸಾಧಿಸಿದ್ದಾರೆ.

ಆರ್‌ಎಸ್‌ಎಸ್‌ ಬೆಂಬಲಿತ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ)ನ ಸಂಚಾಲಕ ಮತ್ತು ಖ್ಯಾತ ಕ್ಯಾನ್ಸರ್ ತಜ್ಞ ಡಾ.ಮಜೀದ್ ಅಹ್ಮದ್ ತಾಳಿಕೋಟಿ ಸಂಸ್ಥೆಯ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿದ್ದರು. ಐಐಸಿಸಿ ಮಾಜಿ ಅಧ್ಯಕ್ಷ ಸಿರಾಜುದ್ದೀನ್ ಖುರೇಷಿ ಅವರ ಬೆಂಬಲವೂ ತಾಳಿಕೋಟಿಯವರಿಗಿತ್ತು. ಆದರೆ, ಅವರು ಕೇವಲ 227 ಮತಗಳನ್ನಷ್ಟೇ ಪಡೆಯಲು ಸಾಧ್ಯವಾಯಿತು. ಖುರ್ಷಿದ್ ಬಳಿಕ ಉದ್ಯಮಿ ದಾನಿ ಆಸೀಫ್ ಹಬೂಬ್ 278 ಮತ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಒಟ್ಟು 13 ಸದಸ್ಯರ ಆಡಳಿತ ಮಂಡಳಿಯಲ್ಲಿ ಕನಿಷ್ಠ ಎಂಟು ಮಂದಿ ಖುರ್ಷಿದ್ ಬೆಂಬಲಿಗರು ಆಯ್ಕೆಯಾಗಿದ್ದಾರೆ. “ಐಐಸಿಸಿ ಅಧ್ಯಕ್ಷ ಹುದ್ದೆಗೆ ಆಯ್ಕೆಯಾಗಿರುವುದು ನನಗೆ ಸಂದ ಅತಿದೊಡ್ಡ ಗೌರವ. ವಿಶ್ವಾಸ ಮತ್ತು ಬೆಂಬಲಕ್ಕಾಗಿ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲಾ ಚುನಾಯಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಐಐಸಿಸಿ ಮೌಲ್ಯಗಳನ್ನು ಉಳಿಸಿ ಬೆಳೆಸಲು ಎಲ್ಲರೂ ಜೊತೆಯಾಗಿ ಕಾರ್ಯ ನಿರ್ವಹಿಸೋಣ” ಎಂದು ಖುರ್ಷಿದ್ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಆಗಸ್ಟ್ 11ರಂದು ಐಐಸಿಸಿ ಚುನಾವಣೆ ನಡೆದಿದ್ದು, ಮೂರು ದಿನಗಳ ಮತ ಎಣಿಕೆ ಬಳಿಕ ಬುಧವಾರ ಫಲಿತಾಂಶ ಪ್ರಕಟಿಸಲಾಗಿದೆ. ನಿವೃತ್ತ ಉನ್ನತಾಧಿಕಾರಿ ಅಬ್ರಾರ್ ಅಹ್ಮದ್ ಹಾಗೂ ಹಬೀಬ್ ಕಣಕ್ಕೆ ಇಳಿಯುವ ಮೂಲಕ ಅಧ್ಯಕ್ಷ ಹುದ್ದೆಗೆ ಬಹುಮುಖಿ ಸ್ಪರ್ಧೆ ಇತ್ತು.

ಐಐಸಿಸಿ ಜನರಲ್ಲಿ ಪರಸ್ಪರ ತಿಳುವಳಿಕೆ ಮತ್ತು ಸೌಹಾರ್ದತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಇಸ್ಲಾಂನ ನಿಜವಾದ ಸಂದೇಶವನ್ನು ಅತ್ಯಂತ ಸಹಿಷ್ಣು, ಉದಾರ, ಪ್ರಗತಿಪರ ಮತ್ತು ತರ್ಕಬದ್ಧವಾಗಿ ತಲುಪಿಸುವ ಕೆಲಸವನ್ನೂ ಈ ಸಂಸ್ಥೆ ಮಾಡುತ್ತದೆ. ಲೋಧಿ ರಸ್ತೆಯಲ್ಲಿ ಸರ್ಕಾರ ಮಂಜೂರು ಮಾಡಿರುವ ಜಮೀನಿನಲ್ಲಿ ಈ ಕೇಂದ್ರ ತಲೆ ಎತ್ತಿ ನಿಂತಿದೆ. ಐಐಸಿಸಿಯ ಆಡಳಿತ ಮಂಡಳಿಗೆ ಪ್ರತಿ ಐದು ವರ್ಷಗಳಿಗೊಮ್ಮೆ ಚುನಾವಣೆ ನಡೆಯುತ್ತದೆ.

ಈ ಸಂಸ್ಥೆಯು ಎಲ್ಲಾ ವರ್ಗಗಳ 4,000 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ. ಆದರೆ, ಇತ್ತೀಚಿನ ಚುನಾವಣೆಯಲ್ಲಿ ಸುಮಾರು 2,000 ಜನರು ಮಾತ್ರ ಮತ ಚಲಾಯಿಸಲು ಅರ್ಹರಾಗಿದ್ದರು. ಐಐಸಿಸಿಯ ಚುನಾವಣೆಗೆ ಆರ್‌ಎಸ್‌ಎಸ್ ಬೆಂಬಲಿತ ತಾಳಿಕೋಟಿಯ ಪ್ರವೇಶವನ್ನು ಮುಸ್ಲಿಂ ಸಂಸ್ಥೆಗಳ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವ ಬಲಪಂಥೀಯ ಪ್ರಯತ್ನವೆಂದು ಬಣ್ಣಿಸಲಾಗಿದೆ.

ಇದನ್ನೂ ಓದಿ : ಮಾರಣಾಂತಿಕ ‘ಎಂಪಾಕ್ಸ್’ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದ ವಿಶ್ವ ಆರೋಗ್ಯ ಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...