Homeಮುಖಪುಟಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು?

ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು?

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದು ವರ್ಷವಾಗುತ್ತಾ ಬರುತ್ತಿದೆ. ಆದರೂ, ಭಿನ್ನಮತೀಯರ ರಾಗ ಮಾತ್ರ ಈವರೆಗೆ ತಣ್ಣಗಾಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಇಡೀ ರಾಜ್ಯ ಒಟ್ಟಾಗಿ ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿರುವ ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಉಮೇಶ್‌ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್‌, ಮುರುಗೇಶ್‌ ನಿರಾಣಿ ಸೇರಿದಂತೆ ಅನೇಕರು ಮತ್ತೆ ಸಚಿವ ಸ್ಥಾನಕ್ಕಾಗಿ ಎರಡನೇ ಸುತ್ತಿನ ಹೋರಾಟಕ್ಕೆ ಅಣಿಯಾಗಿದ್ದಾರೆ. ಅಲ್ಲದೆ, ಬಿಎಸ್‌ವೈ ತಲೆದಂಡಕ್ಕೂ ತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ.

ಅಸಲಿಗೆ ಇಡೀ ದೇಶಕ್ಕೆ ಕೊರೋನಾ ಮತ್ತು ಲಾಕ್‌ಡೌನ್ ವಕ್ಕರಿಸಿದ್ದ ಏಕೈಕ ಕಾರಣಕ್ಕೆ ಈ ಎಲ್ಲಾ ನಾಯಕರು ಇಷ್ಟು ದಿನ ತಮ್ಮ ಸಚಿವ ಸ್ಥಾನದ ಹೋರಾಟವನ್ನು ಪಕ್ಕಕಿಟ್ಟು ತಣ್ಣಗಿದ್ದರು. ಆದರೆ, ಲಾಕ್‌ಡೌನ್‌ ಸಡಿಲವಾಗುತ್ತಿದ್ದಂತೆ ಬಿಜೆಪಿಯಲ್ಲಿ ಮತ್ತೆ ಸಚಿವ ಸಂಪುಟದ ವಿಸ್ತರಣೆಯ ಕೂಗು ಕೇಳಿ ಬರುತ್ತಿದೆ. ಇದರ ಬೆನ್ನಿಗೆ ಅತೃಪ್ತ ಶಾಸಕರು ಗುರುವಾರ ಔತಣ ಕೂಟದ ನೆಪದಲ್ಲಿ ಸಭೆ ಸೇರಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನೇ ಸಿಎಂ ಸ್ಥಾನದಿಂದ ಇಳಿಸಲು ಯೋಜನೆ ರೂಪಿಸಿದ್ದು, ಇದಕ್ಕೆ ಉತ್ತರ ಕರ್ನಾಟಕ ಭಾಗದ ಅನೇಕ ಶಾಸಕರ ಬೆಂಬಲ ಇದೆ ಎನ್ನಲಾಗುತ್ತಿದೆ.

ಉಮೇಶ್ ಕತ್ತಿ ನಡೆಸಿದರಾ ರಹಸ್ಯ ಸಭೆ?

ಜೂನ್ ಅಂತ್ಯದ ವೇಳೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ, ಅರವಿಂದ ಲಿಂಬಾವಳಿ, ರಾಮದಾಸ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ನಾಲ್ವರಿಗೆ ಸಚಿವ ಸ್ಥಾನ ಸಿಗುವುದು ಪಕ್ಕ ಎಂದು ಸ್ವತಃ ಸಿಎಂ ಯಡಿಯೂರಪ್ಪ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಬಿಜೆಪಿಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಅಸಮಾಧಾನ ಮತ್ತೊಮ್ಮೆ ಭುಗಿಲೆದ್ದಿದೆ. ಏಕೆಂದರೆ, ಉಮೇಶ್ ಕತ್ತಿ ಉತ್ತರ ಕರ್ನಾಟಕದ ಪ್ರಬಲ ನಾಯಕರಲ್ಲಿ ಒಬ್ಬರು, ಬಸನಗೌಡ ಪಾಟೀಲ್ ಈ ಹಿಂದೆ ಕೇಂದ್ರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದ ಹಿರಿಯ ವ್ಯಕ್ತಿ. ಇನ್ನೂ ಪ್ರಬಲ ಪಂಚಮ ಸಾಲಿ ಲಿಂಗಾಯತ ಕೋಮಿಗೆ ಸೇರಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವಾರು ನಾಯಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಆದರೆ, ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಲುವಾಗಿ ಈ ಎಲ್ಲಾ ಮೂಲ ಬಿಜೆಪಿಗರಿಗೆ ಸಚಿವ ಸ್ಥಾನವನ್ನು ನಿರಾಕರಿಸಲಾಗಿತ್ತು. ಹೀಗಾಗಿ ಈ ತಂಡ ಕಳೆದ ಹಲವು ತಿಂಗಳಿನಿಂದ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರನ್ನೇ ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಕಷ್ಟು ಶ್ರಮಿ ವಹಿಸಿತ್ತು. ಆದರೆ, ಕೊರೋನಾ ಕಾರಣಕ್ಕೆ ಇವರ ಪ್ರಯತ್ನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿತ್ತು. ಆದರೆ, ಈ ತಂಡ ಮತ್ತೆ ತನ್ನ ಕೆಲಸವನ್ನು ಆರಂಭಿಸಿದೆ.

ಈ ಕೆಲಸದ ಭಾಗವಾಗಿ ಔತಣ ಕೂಟದ ನೆಪದಲ್ಲಿ ಬಿಜೆಪಿ ಪಕ್ಷದ ಸುಮಾರು 10 ಕ್ಕೂ ಹೆಚ್ಚು ಜನ ಶಾಸಕರು ಗುರುವಾರ ಬೆಂಗಳೂರಿನಲ್ಲಿ ಖಾಸಗಿ ಅಪಾರ್ಟ್‌‌ಮೆಂಟ್‌ ಒಂದರಲ್ಲಿ ಸಭೆ ನಡೆಸಿದ್ದಾರೆ.

ಉಮೇಶ್‌ ಕತ್ತಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್, ಅರವಿಂದ್ ಬೆಲ್ಲದ್, ಅಭಯ್ ಪಾಟೀಲ್, ನಿರಾಣಿ ಸೇರಿದಂತೆ ಗುಲ್ಬರ್ಗ ಜಿಲ್ಲೆಯ ಕೆಲ ಶಾಸಕರು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.
ಮೂರು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ , ರಾಜ್ಯ ರಾಜಕೀಯ ವಿಚಾರ, ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಸಂಪುಟ ವಿಸ್ತರಣೆ, ರಾಜ್ಯ ನಾಯಕತ್ವ ವಿಚಾರ ಸೇರಿದಂತೆ ಅನೇಕ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ. ಅಲ್ಲದೆ, ರಾಜ್ಯ ಬಿಜೆಪಿ ಮತ್ತು ಸರ್ಕಾರದ ಸಂಬಂಧದ ಕುರಿತು ಕೆಲ ವಿಚಾರಗಳನ್ನು ಹೈಕಮಾಂಡ್ ನಾಯಕರ ಗಮನಕ್ಕೂ ತರಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಕತ್ತಿ ವಿರುದ್ಧ ಗರಂ ಆದ ಬಿಎಸ್‌ವೈ

ಶಾಸಕ ಉಮೇಶ್‌ ಕತ್ತಿ ನೇತೃತ್ವದಲ್ಲಿ ಗುರುವಾರ ಅತೃಪ್ತ ಶಾಸಕರ ಸಭೆ ನಡೆದಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸಿಎಂ ಯಡಿಯೂರಪ್ಪ ವ್ಯಗ್ರರಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಸ್ವತಃ ಉಮೇಶ್‌ ಕತ್ತಿಗೆ ದೂರವಾಣಿ ಮೂಲಕ ಕರೆ ಮಾಡಿರುವ ಬಿಎಸ್‌ವೈ, “ಅದೇನು ಬನ್ರಿ ಮಾತಾಡೋಣ, ನಿಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಲಾಗುವುದು” ಎಂದು ಮಾತುಕತೆಗೆ ಬುಲಾವ್ ನೀಡಲಾಗಿದೆ ಎಂದು ಬಿಜೆಪಿ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.


ಇದನ್ನೂ ಓದಿ : ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...