Homeಮುಖಪುಟಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು?

ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು?

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದು ವರ್ಷವಾಗುತ್ತಾ ಬರುತ್ತಿದೆ. ಆದರೂ, ಭಿನ್ನಮತೀಯರ ರಾಗ ಮಾತ್ರ ಈವರೆಗೆ ತಣ್ಣಗಾಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಇಡೀ ರಾಜ್ಯ ಒಟ್ಟಾಗಿ ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿರುವ ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಹಿರಿಯ ನಾಯಕರಾದ ಉಮೇಶ್‌ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್‌, ಮುರುಗೇಶ್‌ ನಿರಾಣಿ ಸೇರಿದಂತೆ ಅನೇಕರು ಮತ್ತೆ ಸಚಿವ ಸ್ಥಾನಕ್ಕಾಗಿ ಎರಡನೇ ಸುತ್ತಿನ ಹೋರಾಟಕ್ಕೆ ಅಣಿಯಾಗಿದ್ದಾರೆ. ಅಲ್ಲದೆ, ಬಿಎಸ್‌ವೈ ತಲೆದಂಡಕ್ಕೂ ತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ.

ಅಸಲಿಗೆ ಇಡೀ ದೇಶಕ್ಕೆ ಕೊರೋನಾ ಮತ್ತು ಲಾಕ್‌ಡೌನ್ ವಕ್ಕರಿಸಿದ್ದ ಏಕೈಕ ಕಾರಣಕ್ಕೆ ಈ ಎಲ್ಲಾ ನಾಯಕರು ಇಷ್ಟು ದಿನ ತಮ್ಮ ಸಚಿವ ಸ್ಥಾನದ ಹೋರಾಟವನ್ನು ಪಕ್ಕಕಿಟ್ಟು ತಣ್ಣಗಿದ್ದರು. ಆದರೆ, ಲಾಕ್‌ಡೌನ್‌ ಸಡಿಲವಾಗುತ್ತಿದ್ದಂತೆ ಬಿಜೆಪಿಯಲ್ಲಿ ಮತ್ತೆ ಸಚಿವ ಸಂಪುಟದ ವಿಸ್ತರಣೆಯ ಕೂಗು ಕೇಳಿ ಬರುತ್ತಿದೆ. ಇದರ ಬೆನ್ನಿಗೆ ಅತೃಪ್ತ ಶಾಸಕರು ಗುರುವಾರ ಔತಣ ಕೂಟದ ನೆಪದಲ್ಲಿ ಸಭೆ ಸೇರಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನೇ ಸಿಎಂ ಸ್ಥಾನದಿಂದ ಇಳಿಸಲು ಯೋಜನೆ ರೂಪಿಸಿದ್ದು, ಇದಕ್ಕೆ ಉತ್ತರ ಕರ್ನಾಟಕ ಭಾಗದ ಅನೇಕ ಶಾಸಕರ ಬೆಂಬಲ ಇದೆ ಎನ್ನಲಾಗುತ್ತಿದೆ.

ಉಮೇಶ್ ಕತ್ತಿ ನಡೆಸಿದರಾ ರಹಸ್ಯ ಸಭೆ?

ಜೂನ್ ಅಂತ್ಯದ ವೇಳೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ, ಅರವಿಂದ ಲಿಂಬಾವಳಿ, ರಾಮದಾಸ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ನಾಲ್ವರಿಗೆ ಸಚಿವ ಸ್ಥಾನ ಸಿಗುವುದು ಪಕ್ಕ ಎಂದು ಸ್ವತಃ ಸಿಎಂ ಯಡಿಯೂರಪ್ಪ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಬಿಜೆಪಿಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಅಸಮಾಧಾನ ಮತ್ತೊಮ್ಮೆ ಭುಗಿಲೆದ್ದಿದೆ. ಏಕೆಂದರೆ, ಉಮೇಶ್ ಕತ್ತಿ ಉತ್ತರ ಕರ್ನಾಟಕದ ಪ್ರಬಲ ನಾಯಕರಲ್ಲಿ ಒಬ್ಬರು, ಬಸನಗೌಡ ಪಾಟೀಲ್ ಈ ಹಿಂದೆ ಕೇಂದ್ರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದ ಹಿರಿಯ ವ್ಯಕ್ತಿ. ಇನ್ನೂ ಪ್ರಬಲ ಪಂಚಮ ಸಾಲಿ ಲಿಂಗಾಯತ ಕೋಮಿಗೆ ಸೇರಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವಾರು ನಾಯಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಆದರೆ, ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಲುವಾಗಿ ಈ ಎಲ್ಲಾ ಮೂಲ ಬಿಜೆಪಿಗರಿಗೆ ಸಚಿವ ಸ್ಥಾನವನ್ನು ನಿರಾಕರಿಸಲಾಗಿತ್ತು. ಹೀಗಾಗಿ ಈ ತಂಡ ಕಳೆದ ಹಲವು ತಿಂಗಳಿನಿಂದ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರನ್ನೇ ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಕಷ್ಟು ಶ್ರಮಿ ವಹಿಸಿತ್ತು. ಆದರೆ, ಕೊರೋನಾ ಕಾರಣಕ್ಕೆ ಇವರ ಪ್ರಯತ್ನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿತ್ತು. ಆದರೆ, ಈ ತಂಡ ಮತ್ತೆ ತನ್ನ ಕೆಲಸವನ್ನು ಆರಂಭಿಸಿದೆ.

ಈ ಕೆಲಸದ ಭಾಗವಾಗಿ ಔತಣ ಕೂಟದ ನೆಪದಲ್ಲಿ ಬಿಜೆಪಿ ಪಕ್ಷದ ಸುಮಾರು 10 ಕ್ಕೂ ಹೆಚ್ಚು ಜನ ಶಾಸಕರು ಗುರುವಾರ ಬೆಂಗಳೂರಿನಲ್ಲಿ ಖಾಸಗಿ ಅಪಾರ್ಟ್‌‌ಮೆಂಟ್‌ ಒಂದರಲ್ಲಿ ಸಭೆ ನಡೆಸಿದ್ದಾರೆ.

ಉಮೇಶ್‌ ಕತ್ತಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್, ಅರವಿಂದ್ ಬೆಲ್ಲದ್, ಅಭಯ್ ಪಾಟೀಲ್, ನಿರಾಣಿ ಸೇರಿದಂತೆ ಗುಲ್ಬರ್ಗ ಜಿಲ್ಲೆಯ ಕೆಲ ಶಾಸಕರು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ.
ಮೂರು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ , ರಾಜ್ಯ ರಾಜಕೀಯ ವಿಚಾರ, ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಸಂಪುಟ ವಿಸ್ತರಣೆ, ರಾಜ್ಯ ನಾಯಕತ್ವ ವಿಚಾರ ಸೇರಿದಂತೆ ಅನೇಕ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ. ಅಲ್ಲದೆ, ರಾಜ್ಯ ಬಿಜೆಪಿ ಮತ್ತು ಸರ್ಕಾರದ ಸಂಬಂಧದ ಕುರಿತು ಕೆಲ ವಿಚಾರಗಳನ್ನು ಹೈಕಮಾಂಡ್ ನಾಯಕರ ಗಮನಕ್ಕೂ ತರಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಕತ್ತಿ ವಿರುದ್ಧ ಗರಂ ಆದ ಬಿಎಸ್‌ವೈ

ಶಾಸಕ ಉಮೇಶ್‌ ಕತ್ತಿ ನೇತೃತ್ವದಲ್ಲಿ ಗುರುವಾರ ಅತೃಪ್ತ ಶಾಸಕರ ಸಭೆ ನಡೆದಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸಿಎಂ ಯಡಿಯೂರಪ್ಪ ವ್ಯಗ್ರರಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಸ್ವತಃ ಉಮೇಶ್‌ ಕತ್ತಿಗೆ ದೂರವಾಣಿ ಮೂಲಕ ಕರೆ ಮಾಡಿರುವ ಬಿಎಸ್‌ವೈ, “ಅದೇನು ಬನ್ರಿ ಮಾತಾಡೋಣ, ನಿಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಲಾಗುವುದು” ಎಂದು ಮಾತುಕತೆಗೆ ಬುಲಾವ್ ನೀಡಲಾಗಿದೆ ಎಂದು ಬಿಜೆಪಿ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.


ಇದನ್ನೂ ಓದಿ : ಸಚಿವ ಮಾಧುಸ್ವಾಮಿ ವರ್ತನೆ ತಪ್ಪು, ಸಹಿಸಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...