Homeಅಂತರಾಷ್ಟ್ರೀಯಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

ಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

- Advertisement -
- Advertisement -

ಕೊರೊನಾ ಮೂರನೇ ಅಲೆ ಎಚ್ಚರಿಕೆಗಳ ಮಧ್ಯೆಯೇ, ಮಧ್ಯಪ್ರದೇಶದಲ್ಲಿ ಒಂದೇ ದಿನ 1,478 ಸಾವುಗಳನ್ನು ದಾಖಲಿಸಿದೆ. ಇದರಿಂದ ದೇಶದಲ್ಲಿ 24 ಗಂಟೆಯಲ್ಲಿ ಉಂಟಾದ ಕೋವಿಡ್ ಸಾವುಗಳಲ್ಲಿ ಭಾರಿ ಏರಿಕೆ ಕಂಡಿದ್ದು, ಸಾವಿನ ಸಂಖ್ಯೆ 2,020 ಕ್ಕೆ ಏರಿಕೆಯಾಗಿದೆ.

3ನೇ ಅಲೆ ಸನಿಹದಲ್ಲಿದೆ. ಎರಡನೇ ಅಲೆಯನ್ನು ಗೆದ್ದಿದ್ದೇವೆ ಎಂಬ ಸಂಭ್ರಮದಲ್ಲಿ ಎಚ್ಚರಿಕೆ ಮರೆಯಬೇಡಿ ಎಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರವಷ್ಟೇ ಎಚ್ಚರಿಕೆ ನೀಡಿತ್ತು. ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದರೂ ಸಮಾಧಾನದ ಸಂಗತಿಯೆಂದರೆ, ಕಳೆದ ನಾಲ್ಕು ತಿಂಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳನ್ನು ವರದಿ ಮಾಡಿದೆ.

ಮಹಾರಾಷ್ಟ್ರ ಮತ್ತು ಬಿಹಾರದ ನಂತರ ಕೋವಿಡ್ ಸಾವಿನ ಸಂಖ್ಯೆ ಹೆಚ್ಚಿರುವ ಮೂರನೇ ರಾಜ್ಯ ಮಧ್ಯಪ್ರದೇಶವಾಗಿದೆ. ಸುಮಾರು ಮೂರು ವಾರಗಳಿಂದ ಭಾರತವು ಪ್ರತಿದಿನ 2,000 ಕ್ಕಿಂತ ಕಡಿಮೆ ಕೊರೊನಾ ಸಾವುಗಳನ್ನು ದಾಖಲಿಸುತ್ತಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ಐಎಂಎ ಎಚ್ಚರಿಕೆ

ಕಳೆದ 24 ಗಂಟೆಗಳಲ್ಲಿ ಭಾರತವು 31,443 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಇದು 118 ದಿನಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದ ಸಕ್ರಿಯ ಪ್ರಕರಣಗಳು ಪ್ರಸ್ತುತ 4,31,315 ದಷ್ಟಿದೆ, ಇದು 109 ದಿನಗಳಲ್ಲಿ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಈವರೆಗೆ ಸುಮಾರು 4.10 ಲಕ್ಷ ಜನರು ಸಾವನ್ನಪ್ಪಿದ್ದಾರೆ.

“ವಿಶ್ವದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಬಂದಿರುವ ಪುರಾವೆಗಳು ಮತ್ತು ಸಾಂಕ್ರಾಮಿಕ ರೋಗಗಳ ಇತಿಹಾಸ ಗಮನಿಸಿದರೆ, ಮೂರನೇ ಅಲೆಯನ್ನು ಎದುರಿಸುವುದು ಅನಿವಾರ್ಯವಾಗಿದೆ. ಇಷ್ಟೇ ಅಲ್ಲದೆ ಮೂರನೇ ಅಲೆ ಸನಿಹದಲ್ಲಿದೆ. ಆತಂಕದ ಸಂಗತಿಯೆಂದರೆ, ದೇಶದ ಅನೇಕ ಭಾಗಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರು ಎರಡನೇ ಅಲೆಯನ್ನು ಗೆದ್ದ ಸಂತಸದಲ್ಲಿದ್ದಾರೆ. ಸಾಮೂಹಿಕವಾಗಿ ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಕೆಲಸಗಳಲ್ಲಿ, ಸಭೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಭಾನುವಾರ ಎಚ್ಚರಿಕೆ ನೀಡಿತ್ತು.

ದೇಶದಲ್ಲಿ ಇದುವರೆಗೆ 39.46 ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ 108 ಕೋಟಿ ವಯಸ್ಕರಿಗೆ ಲಸಿಕೆ ಹಾಕುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮಹಿಳೆಯರ ಸ್ಥಿತಿ; ಬಾಣಲೆಯಿಂದ ಬೆಂಕಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...