Homeಅಂತರಾಷ್ಟ್ರೀಯಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

ಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

- Advertisement -
- Advertisement -

ಕೊರೊನಾ ಮೂರನೇ ಅಲೆ ಎಚ್ಚರಿಕೆಗಳ ಮಧ್ಯೆಯೇ, ಮಧ್ಯಪ್ರದೇಶದಲ್ಲಿ ಒಂದೇ ದಿನ 1,478 ಸಾವುಗಳನ್ನು ದಾಖಲಿಸಿದೆ. ಇದರಿಂದ ದೇಶದಲ್ಲಿ 24 ಗಂಟೆಯಲ್ಲಿ ಉಂಟಾದ ಕೋವಿಡ್ ಸಾವುಗಳಲ್ಲಿ ಭಾರಿ ಏರಿಕೆ ಕಂಡಿದ್ದು, ಸಾವಿನ ಸಂಖ್ಯೆ 2,020 ಕ್ಕೆ ಏರಿಕೆಯಾಗಿದೆ.

3ನೇ ಅಲೆ ಸನಿಹದಲ್ಲಿದೆ. ಎರಡನೇ ಅಲೆಯನ್ನು ಗೆದ್ದಿದ್ದೇವೆ ಎಂಬ ಸಂಭ್ರಮದಲ್ಲಿ ಎಚ್ಚರಿಕೆ ಮರೆಯಬೇಡಿ ಎಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರವಷ್ಟೇ ಎಚ್ಚರಿಕೆ ನೀಡಿತ್ತು. ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದರೂ ಸಮಾಧಾನದ ಸಂಗತಿಯೆಂದರೆ, ಕಳೆದ ನಾಲ್ಕು ತಿಂಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳನ್ನು ವರದಿ ಮಾಡಿದೆ.

ಮಹಾರಾಷ್ಟ್ರ ಮತ್ತು ಬಿಹಾರದ ನಂತರ ಕೋವಿಡ್ ಸಾವಿನ ಸಂಖ್ಯೆ ಹೆಚ್ಚಿರುವ ಮೂರನೇ ರಾಜ್ಯ ಮಧ್ಯಪ್ರದೇಶವಾಗಿದೆ. ಸುಮಾರು ಮೂರು ವಾರಗಳಿಂದ ಭಾರತವು ಪ್ರತಿದಿನ 2,000 ಕ್ಕಿಂತ ಕಡಿಮೆ ಕೊರೊನಾ ಸಾವುಗಳನ್ನು ದಾಖಲಿಸುತ್ತಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ಐಎಂಎ ಎಚ್ಚರಿಕೆ

ಕಳೆದ 24 ಗಂಟೆಗಳಲ್ಲಿ ಭಾರತವು 31,443 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಇದು 118 ದಿನಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದ ಸಕ್ರಿಯ ಪ್ರಕರಣಗಳು ಪ್ರಸ್ತುತ 4,31,315 ದಷ್ಟಿದೆ, ಇದು 109 ದಿನಗಳಲ್ಲಿ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಈವರೆಗೆ ಸುಮಾರು 4.10 ಲಕ್ಷ ಜನರು ಸಾವನ್ನಪ್ಪಿದ್ದಾರೆ.

“ವಿಶ್ವದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಬಂದಿರುವ ಪುರಾವೆಗಳು ಮತ್ತು ಸಾಂಕ್ರಾಮಿಕ ರೋಗಗಳ ಇತಿಹಾಸ ಗಮನಿಸಿದರೆ, ಮೂರನೇ ಅಲೆಯನ್ನು ಎದುರಿಸುವುದು ಅನಿವಾರ್ಯವಾಗಿದೆ. ಇಷ್ಟೇ ಅಲ್ಲದೆ ಮೂರನೇ ಅಲೆ ಸನಿಹದಲ್ಲಿದೆ. ಆತಂಕದ ಸಂಗತಿಯೆಂದರೆ, ದೇಶದ ಅನೇಕ ಭಾಗಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರು ಎರಡನೇ ಅಲೆಯನ್ನು ಗೆದ್ದ ಸಂತಸದಲ್ಲಿದ್ದಾರೆ. ಸಾಮೂಹಿಕವಾಗಿ ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಕೆಲಸಗಳಲ್ಲಿ, ಸಭೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಭಾನುವಾರ ಎಚ್ಚರಿಕೆ ನೀಡಿತ್ತು.

ದೇಶದಲ್ಲಿ ಇದುವರೆಗೆ 39.46 ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ 108 ಕೋಟಿ ವಯಸ್ಕರಿಗೆ ಲಸಿಕೆ ಹಾಕುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮಹಿಳೆಯರ ಸ್ಥಿತಿ; ಬಾಣಲೆಯಿಂದ ಬೆಂಕಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...