Homeಅಂತರಾಷ್ಟ್ರೀಯಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

ಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

- Advertisement -
- Advertisement -

ಕೊರೊನಾ ಮೂರನೇ ಅಲೆ ಎಚ್ಚರಿಕೆಗಳ ಮಧ್ಯೆಯೇ, ಮಧ್ಯಪ್ರದೇಶದಲ್ಲಿ ಒಂದೇ ದಿನ 1,478 ಸಾವುಗಳನ್ನು ದಾಖಲಿಸಿದೆ. ಇದರಿಂದ ದೇಶದಲ್ಲಿ 24 ಗಂಟೆಯಲ್ಲಿ ಉಂಟಾದ ಕೋವಿಡ್ ಸಾವುಗಳಲ್ಲಿ ಭಾರಿ ಏರಿಕೆ ಕಂಡಿದ್ದು, ಸಾವಿನ ಸಂಖ್ಯೆ 2,020 ಕ್ಕೆ ಏರಿಕೆಯಾಗಿದೆ.

3ನೇ ಅಲೆ ಸನಿಹದಲ್ಲಿದೆ. ಎರಡನೇ ಅಲೆಯನ್ನು ಗೆದ್ದಿದ್ದೇವೆ ಎಂಬ ಸಂಭ್ರಮದಲ್ಲಿ ಎಚ್ಚರಿಕೆ ಮರೆಯಬೇಡಿ ಎಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರವಷ್ಟೇ ಎಚ್ಚರಿಕೆ ನೀಡಿತ್ತು. ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದರೂ ಸಮಾಧಾನದ ಸಂಗತಿಯೆಂದರೆ, ಕಳೆದ ನಾಲ್ಕು ತಿಂಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳನ್ನು ವರದಿ ಮಾಡಿದೆ.

ಮಹಾರಾಷ್ಟ್ರ ಮತ್ತು ಬಿಹಾರದ ನಂತರ ಕೋವಿಡ್ ಸಾವಿನ ಸಂಖ್ಯೆ ಹೆಚ್ಚಿರುವ ಮೂರನೇ ರಾಜ್ಯ ಮಧ್ಯಪ್ರದೇಶವಾಗಿದೆ. ಸುಮಾರು ಮೂರು ವಾರಗಳಿಂದ ಭಾರತವು ಪ್ರತಿದಿನ 2,000 ಕ್ಕಿಂತ ಕಡಿಮೆ ಕೊರೊನಾ ಸಾವುಗಳನ್ನು ದಾಖಲಿಸುತ್ತಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ಐಎಂಎ ಎಚ್ಚರಿಕೆ

ಕಳೆದ 24 ಗಂಟೆಗಳಲ್ಲಿ ಭಾರತವು 31,443 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಇದು 118 ದಿನಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದ ಸಕ್ರಿಯ ಪ್ರಕರಣಗಳು ಪ್ರಸ್ತುತ 4,31,315 ದಷ್ಟಿದೆ, ಇದು 109 ದಿನಗಳಲ್ಲಿ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಈವರೆಗೆ ಸುಮಾರು 4.10 ಲಕ್ಷ ಜನರು ಸಾವನ್ನಪ್ಪಿದ್ದಾರೆ.

“ವಿಶ್ವದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಬಂದಿರುವ ಪುರಾವೆಗಳು ಮತ್ತು ಸಾಂಕ್ರಾಮಿಕ ರೋಗಗಳ ಇತಿಹಾಸ ಗಮನಿಸಿದರೆ, ಮೂರನೇ ಅಲೆಯನ್ನು ಎದುರಿಸುವುದು ಅನಿವಾರ್ಯವಾಗಿದೆ. ಇಷ್ಟೇ ಅಲ್ಲದೆ ಮೂರನೇ ಅಲೆ ಸನಿಹದಲ್ಲಿದೆ. ಆತಂಕದ ಸಂಗತಿಯೆಂದರೆ, ದೇಶದ ಅನೇಕ ಭಾಗಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರು ಎರಡನೇ ಅಲೆಯನ್ನು ಗೆದ್ದ ಸಂತಸದಲ್ಲಿದ್ದಾರೆ. ಸಾಮೂಹಿಕವಾಗಿ ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಕೆಲಸಗಳಲ್ಲಿ, ಸಭೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಭಾನುವಾರ ಎಚ್ಚರಿಕೆ ನೀಡಿತ್ತು.

ದೇಶದಲ್ಲಿ ಇದುವರೆಗೆ 39.46 ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ 108 ಕೋಟಿ ವಯಸ್ಕರಿಗೆ ಲಸಿಕೆ ಹಾಕುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮಹಿಳೆಯರ ಸ್ಥಿತಿ; ಬಾಣಲೆಯಿಂದ ಬೆಂಕಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...