Homeಅಂತರಾಷ್ಟ್ರೀಯಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

ಮಧ್ಯಪ್ರದೇಶದಲ್ಲಿ ಕೊರೊನಾ ಸಾವುಗಳಲ್ಲಿ ಏರಿಕೆ: ದೈನಂದಿನ ಪ್ರಕರಣಗಳು ಇಳಿಕೆ

- Advertisement -
- Advertisement -

ಕೊರೊನಾ ಮೂರನೇ ಅಲೆ ಎಚ್ಚರಿಕೆಗಳ ಮಧ್ಯೆಯೇ, ಮಧ್ಯಪ್ರದೇಶದಲ್ಲಿ ಒಂದೇ ದಿನ 1,478 ಸಾವುಗಳನ್ನು ದಾಖಲಿಸಿದೆ. ಇದರಿಂದ ದೇಶದಲ್ಲಿ 24 ಗಂಟೆಯಲ್ಲಿ ಉಂಟಾದ ಕೋವಿಡ್ ಸಾವುಗಳಲ್ಲಿ ಭಾರಿ ಏರಿಕೆ ಕಂಡಿದ್ದು, ಸಾವಿನ ಸಂಖ್ಯೆ 2,020 ಕ್ಕೆ ಏರಿಕೆಯಾಗಿದೆ.

3ನೇ ಅಲೆ ಸನಿಹದಲ್ಲಿದೆ. ಎರಡನೇ ಅಲೆಯನ್ನು ಗೆದ್ದಿದ್ದೇವೆ ಎಂಬ ಸಂಭ್ರಮದಲ್ಲಿ ಎಚ್ಚರಿಕೆ ಮರೆಯಬೇಡಿ ಎಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರವಷ್ಟೇ ಎಚ್ಚರಿಕೆ ನೀಡಿತ್ತು. ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದರೂ ಸಮಾಧಾನದ ಸಂಗತಿಯೆಂದರೆ, ಕಳೆದ ನಾಲ್ಕು ತಿಂಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳನ್ನು ವರದಿ ಮಾಡಿದೆ.

ಮಹಾರಾಷ್ಟ್ರ ಮತ್ತು ಬಿಹಾರದ ನಂತರ ಕೋವಿಡ್ ಸಾವಿನ ಸಂಖ್ಯೆ ಹೆಚ್ಚಿರುವ ಮೂರನೇ ರಾಜ್ಯ ಮಧ್ಯಪ್ರದೇಶವಾಗಿದೆ. ಸುಮಾರು ಮೂರು ವಾರಗಳಿಂದ ಭಾರತವು ಪ್ರತಿದಿನ 2,000 ಕ್ಕಿಂತ ಕಡಿಮೆ ಕೊರೊನಾ ಸಾವುಗಳನ್ನು ದಾಖಲಿಸುತ್ತಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ಐಎಂಎ ಎಚ್ಚರಿಕೆ

ಕಳೆದ 24 ಗಂಟೆಗಳಲ್ಲಿ ಭಾರತವು 31,443 ಹೊಸ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಇದು 118 ದಿನಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದ ಸಕ್ರಿಯ ಪ್ರಕರಣಗಳು ಪ್ರಸ್ತುತ 4,31,315 ದಷ್ಟಿದೆ, ಇದು 109 ದಿನಗಳಲ್ಲಿ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಈವರೆಗೆ ಸುಮಾರು 4.10 ಲಕ್ಷ ಜನರು ಸಾವನ್ನಪ್ಪಿದ್ದಾರೆ.

“ವಿಶ್ವದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಬಂದಿರುವ ಪುರಾವೆಗಳು ಮತ್ತು ಸಾಂಕ್ರಾಮಿಕ ರೋಗಗಳ ಇತಿಹಾಸ ಗಮನಿಸಿದರೆ, ಮೂರನೇ ಅಲೆಯನ್ನು ಎದುರಿಸುವುದು ಅನಿವಾರ್ಯವಾಗಿದೆ. ಇಷ್ಟೇ ಅಲ್ಲದೆ ಮೂರನೇ ಅಲೆ ಸನಿಹದಲ್ಲಿದೆ. ಆತಂಕದ ಸಂಗತಿಯೆಂದರೆ, ದೇಶದ ಅನೇಕ ಭಾಗಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರು ಎರಡನೇ ಅಲೆಯನ್ನು ಗೆದ್ದ ಸಂತಸದಲ್ಲಿದ್ದಾರೆ. ಸಾಮೂಹಿಕವಾಗಿ ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಕೆಲಸಗಳಲ್ಲಿ, ಸಭೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಭಾನುವಾರ ಎಚ್ಚರಿಕೆ ನೀಡಿತ್ತು.

ದೇಶದಲ್ಲಿ ಇದುವರೆಗೆ 39.46 ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ 108 ಕೋಟಿ ವಯಸ್ಕರಿಗೆ ಲಸಿಕೆ ಹಾಕುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮಹಿಳೆಯರ ಸ್ಥಿತಿ; ಬಾಣಲೆಯಿಂದ ಬೆಂಕಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....