Homeಕರ್ನಾಟಕಅಕ್ರಮ ರೇಷನ್‌ ಕಿಟ್‌‌‌ ಸಂಗ್ರಹ ಆರೋಪ: ಅವಧಿ ಮುಗಿದ ಆಹಾರ ಹಂಚುತ್ತಿರುವ ಬಿಜೆಪಿ!

ಅಕ್ರಮ ರೇಷನ್‌ ಕಿಟ್‌‌‌ ಸಂಗ್ರಹ ಆರೋಪ: ಅವಧಿ ಮುಗಿದ ಆಹಾರ ಹಂಚುತ್ತಿರುವ ಬಿಜೆಪಿ!

ಕಾರ್ಮಿಕ ಇಲಾಖೆಯಿಂದ ಹಂಚಿಕೆಯಾಗಲ್ಪಟ್ಟ ಸುಮಾರು 15-20 ಸಾವಿರವರೆಗಿನ ರೇಷನ್‌ ಕಿಟ್ಟುಗಳನ್ನು ಅಕ್ರಮವಾಗಿ ಸಂಗ್ರಹ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕೊರೊನಾ ಎರಡನೆ ಅಲೆಯ ಲಾಕ್‌ಡೌನ್‌ ಅವಧಿಯಲ್ಲಿ ಕಟ್ಟಡ ಕಾರ್ಮಿಕರಿಗೆ ವಿತರಿಸಲು ಕಾರ್ಮಿಕ ಇಲಾಖೆಯಿಂದ ಹಂಚಿಕೆಯಾಗಲ್ಪಟ್ಟ ಸುಮಾರು 15-20 ಸಾವಿರವರೆಗಿನ ರೇಷನ್‌ ಕಿಟ್ಟುಗಳನ್ನು ಬೆಳಗಾವಿಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿಟ್ಟುಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾರ್ಮಿಕರಿಗೆ ಸೇರಬೇಕಾಗಿದ್ದ ರೇಷನ್ ಕಿಟ್‌ಗಳನ್ನು ಬಿಜೆಪಿ ನಾಯಕರುಗಳು ಮತ್ತು ಅವರ ಸಂಬಂಧಿಕರ ಮನೆಗೆ ಸಾಗಾಟ ಮಾಡಿದ್ದಲ್ಲದೆ, ಅವಧಿ ಮುಗಿದಿರುವ ರೇಷನ್‌ ಕಿಟ್ಟುಗಳನ್ನು ಬಿಜೆಪಿ ಕಾರ್ಯಕರ್ತರು ಹಂಚುತ್ತಿದ್ದಾರೆ ಎಂದು ಬೆಳಗಾವಿಯ ಸಾಮಾಜಿಕ ಕಾರ್ಯಕರ್ತರು ಕಿಡಿಕಾರಿದ್ದಾರೆ. ಅಲ್ಲದೇ ರೇಷನ್‌ ಕಿಟ್‌ ಸಂಗ್ರಹ ಮಾಡಿಟ್ಟ ಗೋದಾಮಿಗೆ ಕಳೆದ ವಾರ ದಾಳಿ ನಡೆಸಿ ಅಕ್ರಮವನ್ನು ಬಹಿರಂಗಪಡಿಸಿದ್ದಾರೆ.

ಕೊರೊನಾ ಎರಡನೇ ಅಲೆಯ ಲಾಕ್‌ಡೌನ್‌‌‌ ಘೋಷಣೆಯಾದ ನಂತರ, ಕಟ್ಟಡ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ಇಲಾಖೆಯು ರಾಜ್ಯದಾದ್ಯಂತ ರೇಷನ್‌ ಕಿಟ್‌ ಹಂಚಿಕೆ ಮಾಡಿತ್ತು. ಅದರಂತೆ ಬೆಳಗಾವಿಗೂ ರೇಷನ್‌ ಕಿಟ್‌ ತಲುಪಿತ್ತಾದರೂ ಮೂರು ತಿಂಗಳು ಕಳೆದರೂ ವಿತರಣೆ ಆಗದೆ ಸುಮಾರು 15-20 ಸಾವಿರದಷ್ಟು ಕಿಟ್‌ಗಳು ಬೆಳಗಾವಿಯ ಪಿಬಿ ನಗರದ ಸಾಯಿ ಭವನದಲ್ಲಿ ದಾಸ್ತಾನು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸರಳಾ ಸಾತ್ಪುತೆ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದ ಬಿಜೆಪಿ ಶಾಸಕಿ

ಈ ನಡುವೆ, ಪಾಲಿಕೆ ಚುನಾವಣೆ ಘೋಷಣೆಯಾದಾಗ ಮತದಾರರಿಗೆ ರೇಷನ್‌ ಕಿಟ್‌ ಆಮಿಷವನ್ನು ತೋರಿಸಲಾಗಿತ್ತು. ಅದಾಗಿ ಚುನಾವಣೆ ಮುಗಿಯುತ್ತಿದ್ದಂತೆ ಈ ರೇಷನ್‌ ಕಿಟ್ಟುಗಳನ್ನು ಬಿಜೆಪಿಯ ಶಾಸಕರ ಆಪ್ತರ ಮನೆಗಳು, ಕೌನ್ಸಿಲರ್‌ಗಳ ಆಪ್ತರು ಮತ್ತು ಬಿಜೆಪಿ ಕಾರ್ಯಕರ್ತರ ಮನೆಗಳಲ್ಲಿ ದಾಸ್ತಾನು ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಆದರೆ ಈ ಮಧ್ಯೆ, ಅಕ್ರಮವಾಗಿ ದಾಸ್ತಾನು ಮಾಡಿಟ್ಟ ರೇಷನ್‌ ಕಿಟ್‌ಗಳ ಅವಧಿ ಮುಗಿದಿದ್ದು ಕೂಡಾ ಬೆಳಕಿಗೆ ಬಂದಿದೆ. ಮೂರು ತಿಂಗಳ ಹಿಂದೆಯೆ ವಿತರಣೆ ಆಗಬೇಕಿದ್ದ ರೇಷನ್‌ ಕಿಟ್‌ ಅನ್ನು, ಸ್ಥಳೀಯ ಬಿಜೆಪಿ ಶಾಸಕ ಅಭಯ ಪಾಟೀಲ ಅವರು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ವಿತರಿಸದೆ ಹಾಗೆ ಇಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್‌ ಮತ್ತು ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದ್ದು, ಅಕ್ರಮವನ್ನು ತಡೆಗಟ್ಟುವಂತೆ ಆಗ್ರಹಿಸಿದ್ದಾರೆ. ಆದರೆ ಮನವಿ ನೀಡಿ ಇಷ್ಟು ದಿನ ಕಳೆದರೂ ಇರುವರೆಗೂ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಸರಳಾ ಸಾತ್ಪುತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕಾರ್ಮಿಕ ಇಲಾಖೆ ತೆಗೆದುಕೊಂಡ ಕ್ರಮಗಳ ಬಗ್ಗೆ ವಿಚಾರಿಸಲು ನಾನುಗೌರಿ.ಕಾಂ ಬೆಳಗಾವಿ ಕಾರ್ಮಿಕ ಇಲಾಖೆಯ ಉಪ ಆಯುಕ್ತರಾಗಿರುವ ವೆಂಕಟೇಶ್‌ ಎ. ಶಿಂಧಿಹಟಿ ಅವರಿಗೆ ಕರೆ ಮಾಡಿದ್ದು ಅವರು ಯಾವುದೆ ಪ್ರತಿಕ್ರಿಯೆ ನೀಡಿಲ್ಲ.

ಇಷ್ಟೇ ಅಲ್ಲದೆ ಇದನ್ನು ಪ್ರಶ್ನಿಸಿದ್ದ ಸಾಮಾಜಿಕ ಕಾರ್ಯಕರ್ತರಿಗೆ ಬಿಜೆಪಿ ಕಾರ್ಯಕರ್ತರು ಜೀವ ಬೆದರಿಕೆ ಕೂಡಾ ಒಡ್ಡಿದ್ದಾರೆ ಎಂದು ದೂರಲಾಗಿದೆ. ಅಕ್ರಮಗಳನ್ನು ಮೊಬೈಲಿನಲ್ಲಿ ಸೆರೆಹಿಡಿಯಲು ತೆರಳಿದ್ದ, ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಾಮಾಜಿಕ ಕಾರ್ಯಕರ್ತೆ ಸರಳಾ ಸಾತ್ಪುತೆ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ದುಂಡಾವರ್ತನೆ ತೋರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಐದಾರು ಬಿಜೆಪಿ ಕಾರ್ಯಕರ್ತರ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದೇವೆ ಎಂದು ಸರಳಾ ಸಾತ್ಪುತೆ ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: ಪಕ್ಷದ ಕಚೇರಿಯಲ್ಲೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಕಾರ್ಯಕರ್ತ; FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...