Homeಕರ್ನಾಟಕಅಕ್ರಮ ರೇಷನ್‌ ಕಿಟ್‌‌‌ ಸಂಗ್ರಹ ಆರೋಪ: ಅವಧಿ ಮುಗಿದ ಆಹಾರ ಹಂಚುತ್ತಿರುವ ಬಿಜೆಪಿ!

ಅಕ್ರಮ ರೇಷನ್‌ ಕಿಟ್‌‌‌ ಸಂಗ್ರಹ ಆರೋಪ: ಅವಧಿ ಮುಗಿದ ಆಹಾರ ಹಂಚುತ್ತಿರುವ ಬಿಜೆಪಿ!

ಕಾರ್ಮಿಕ ಇಲಾಖೆಯಿಂದ ಹಂಚಿಕೆಯಾಗಲ್ಪಟ್ಟ ಸುಮಾರು 15-20 ಸಾವಿರವರೆಗಿನ ರೇಷನ್‌ ಕಿಟ್ಟುಗಳನ್ನು ಅಕ್ರಮವಾಗಿ ಸಂಗ್ರಹ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕೊರೊನಾ ಎರಡನೆ ಅಲೆಯ ಲಾಕ್‌ಡೌನ್‌ ಅವಧಿಯಲ್ಲಿ ಕಟ್ಟಡ ಕಾರ್ಮಿಕರಿಗೆ ವಿತರಿಸಲು ಕಾರ್ಮಿಕ ಇಲಾಖೆಯಿಂದ ಹಂಚಿಕೆಯಾಗಲ್ಪಟ್ಟ ಸುಮಾರು 15-20 ಸಾವಿರವರೆಗಿನ ರೇಷನ್‌ ಕಿಟ್ಟುಗಳನ್ನು ಬೆಳಗಾವಿಯಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿಟ್ಟುಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾರ್ಮಿಕರಿಗೆ ಸೇರಬೇಕಾಗಿದ್ದ ರೇಷನ್ ಕಿಟ್‌ಗಳನ್ನು ಬಿಜೆಪಿ ನಾಯಕರುಗಳು ಮತ್ತು ಅವರ ಸಂಬಂಧಿಕರ ಮನೆಗೆ ಸಾಗಾಟ ಮಾಡಿದ್ದಲ್ಲದೆ, ಅವಧಿ ಮುಗಿದಿರುವ ರೇಷನ್‌ ಕಿಟ್ಟುಗಳನ್ನು ಬಿಜೆಪಿ ಕಾರ್ಯಕರ್ತರು ಹಂಚುತ್ತಿದ್ದಾರೆ ಎಂದು ಬೆಳಗಾವಿಯ ಸಾಮಾಜಿಕ ಕಾರ್ಯಕರ್ತರು ಕಿಡಿಕಾರಿದ್ದಾರೆ. ಅಲ್ಲದೇ ರೇಷನ್‌ ಕಿಟ್‌ ಸಂಗ್ರಹ ಮಾಡಿಟ್ಟ ಗೋದಾಮಿಗೆ ಕಳೆದ ವಾರ ದಾಳಿ ನಡೆಸಿ ಅಕ್ರಮವನ್ನು ಬಹಿರಂಗಪಡಿಸಿದ್ದಾರೆ.

ಕೊರೊನಾ ಎರಡನೇ ಅಲೆಯ ಲಾಕ್‌ಡೌನ್‌‌‌ ಘೋಷಣೆಯಾದ ನಂತರ, ಕಟ್ಟಡ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ಇಲಾಖೆಯು ರಾಜ್ಯದಾದ್ಯಂತ ರೇಷನ್‌ ಕಿಟ್‌ ಹಂಚಿಕೆ ಮಾಡಿತ್ತು. ಅದರಂತೆ ಬೆಳಗಾವಿಗೂ ರೇಷನ್‌ ಕಿಟ್‌ ತಲುಪಿತ್ತಾದರೂ ಮೂರು ತಿಂಗಳು ಕಳೆದರೂ ವಿತರಣೆ ಆಗದೆ ಸುಮಾರು 15-20 ಸಾವಿರದಷ್ಟು ಕಿಟ್‌ಗಳು ಬೆಳಗಾವಿಯ ಪಿಬಿ ನಗರದ ಸಾಯಿ ಭವನದಲ್ಲಿ ದಾಸ್ತಾನು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಸರಳಾ ಸಾತ್ಪುತೆ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದ ಬಿಜೆಪಿ ಶಾಸಕಿ

ಈ ನಡುವೆ, ಪಾಲಿಕೆ ಚುನಾವಣೆ ಘೋಷಣೆಯಾದಾಗ ಮತದಾರರಿಗೆ ರೇಷನ್‌ ಕಿಟ್‌ ಆಮಿಷವನ್ನು ತೋರಿಸಲಾಗಿತ್ತು. ಅದಾಗಿ ಚುನಾವಣೆ ಮುಗಿಯುತ್ತಿದ್ದಂತೆ ಈ ರೇಷನ್‌ ಕಿಟ್ಟುಗಳನ್ನು ಬಿಜೆಪಿಯ ಶಾಸಕರ ಆಪ್ತರ ಮನೆಗಳು, ಕೌನ್ಸಿಲರ್‌ಗಳ ಆಪ್ತರು ಮತ್ತು ಬಿಜೆಪಿ ಕಾರ್ಯಕರ್ತರ ಮನೆಗಳಲ್ಲಿ ದಾಸ್ತಾನು ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಆದರೆ ಈ ಮಧ್ಯೆ, ಅಕ್ರಮವಾಗಿ ದಾಸ್ತಾನು ಮಾಡಿಟ್ಟ ರೇಷನ್‌ ಕಿಟ್‌ಗಳ ಅವಧಿ ಮುಗಿದಿದ್ದು ಕೂಡಾ ಬೆಳಕಿಗೆ ಬಂದಿದೆ. ಮೂರು ತಿಂಗಳ ಹಿಂದೆಯೆ ವಿತರಣೆ ಆಗಬೇಕಿದ್ದ ರೇಷನ್‌ ಕಿಟ್‌ ಅನ್ನು, ಸ್ಥಳೀಯ ಬಿಜೆಪಿ ಶಾಸಕ ಅಭಯ ಪಾಟೀಲ ಅವರು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ವಿತರಿಸದೆ ಹಾಗೆ ಇಟ್ಟಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್‌ ಮತ್ತು ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದ್ದು, ಅಕ್ರಮವನ್ನು ತಡೆಗಟ್ಟುವಂತೆ ಆಗ್ರಹಿಸಿದ್ದಾರೆ. ಆದರೆ ಮನವಿ ನೀಡಿ ಇಷ್ಟು ದಿನ ಕಳೆದರೂ ಇರುವರೆಗೂ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಸರಳಾ ಸಾತ್ಪುತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕಾರ್ಮಿಕ ಇಲಾಖೆ ತೆಗೆದುಕೊಂಡ ಕ್ರಮಗಳ ಬಗ್ಗೆ ವಿಚಾರಿಸಲು ನಾನುಗೌರಿ.ಕಾಂ ಬೆಳಗಾವಿ ಕಾರ್ಮಿಕ ಇಲಾಖೆಯ ಉಪ ಆಯುಕ್ತರಾಗಿರುವ ವೆಂಕಟೇಶ್‌ ಎ. ಶಿಂಧಿಹಟಿ ಅವರಿಗೆ ಕರೆ ಮಾಡಿದ್ದು ಅವರು ಯಾವುದೆ ಪ್ರತಿಕ್ರಿಯೆ ನೀಡಿಲ್ಲ.

ಇಷ್ಟೇ ಅಲ್ಲದೆ ಇದನ್ನು ಪ್ರಶ್ನಿಸಿದ್ದ ಸಾಮಾಜಿಕ ಕಾರ್ಯಕರ್ತರಿಗೆ ಬಿಜೆಪಿ ಕಾರ್ಯಕರ್ತರು ಜೀವ ಬೆದರಿಕೆ ಕೂಡಾ ಒಡ್ಡಿದ್ದಾರೆ ಎಂದು ದೂರಲಾಗಿದೆ. ಅಕ್ರಮಗಳನ್ನು ಮೊಬೈಲಿನಲ್ಲಿ ಸೆರೆಹಿಡಿಯಲು ತೆರಳಿದ್ದ, ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಾಮಾಜಿಕ ಕಾರ್ಯಕರ್ತೆ ಸರಳಾ ಸಾತ್ಪುತೆ ಅವರೊಂದಿಗೆ ಬಿಜೆಪಿ ಕಾರ್ಯಕರ್ತರು ದುಂಡಾವರ್ತನೆ ತೋರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಐದಾರು ಬಿಜೆಪಿ ಕಾರ್ಯಕರ್ತರ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದೇವೆ ಎಂದು ಸರಳಾ ಸಾತ್ಪುತೆ ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

ಇದನ್ನೂ ಓದಿ: ಪಕ್ಷದ ಕಚೇರಿಯಲ್ಲೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಕಾರ್ಯಕರ್ತ; FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...