Homeಮುಖಪುಟಲೈಂಗಿಕ ಕಿರುಕುಳದ ಆರೋಪಿ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಸಿಂಗ್‌ನಿಂದ ಮಹಾ ರ್ಯಾಲಿ

ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಸಿಂಗ್‌ನಿಂದ ಮಹಾ ರ್ಯಾಲಿ

- Advertisement -
- Advertisement -

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿಯ ಕೈಸರ್‌ಗಂಜ್ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಏಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧ ವಿರೋಧ ಪಕ್ಷಗಳು, ನಾಗರಿಕರು ಮತ್ತು ರೈತ ಸಂಘಟನೆಗಳು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಮಯದಲ್ಲಿ ಅವರು ಜೂನ್ 5ರಂದು ಅಯೋಧ್ಯೆಯಲ್ಲಿ ರ್ಯಾಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ. ಆದರೆ, ಅಯೋಧ್ಯೆ ಬಿಜೆಪಿ ಘಟಕವು ಈ ರ‍್ಯಾಲಿಯಿಂದ ದೂರ ಸರಿದಿದೆ.

ಬ್ರಿಜ್ ಭೂಷಣ್ ಅವರು ಅಯೋಧ್ಯೆಯ ರಾಮ್ ಕಥಾ ಪಾರ್ಕ್‌ನಲ್ಲಿ ಜನ ಚೇತನ ಮಹಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳಿಂದ ಸಾಧುಗಳು, ಕಾನೂನು ತಜ್ಞರು ಹಾಗೂ ಶಿಕ್ಷಣ ತಜ್ಞರನ್ನು ಆಹ್ವಾನಿಸಲಾಗಿದೆ. ದೆಹಲಿ ಪೊಲೀಸರು ಸಂಸದರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿರುವ ಸಮಯದಲ್ಲಿ ರ್ಯಾಲಿ ನಡೆಸಲಾಗುತ್ತಿದೆ. ಎಫ್‌ಐಆರ್ ದಾಖಲಾದಾಗಿನಿಂದ ಸಿಂಗ್ ರಾಜಕೀಯ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು. ಆದರೆ, ಅವರು ಅಯೋಧ್ಯೆ ರ್ಯಾಲಿಗೆ ಜನರನ್ನು ಆಹ್ವಾನಿಸಲು ಕಳೆದ ವಾರದಿಂದ ಯುಪಿಯ ಅವಧ್ ಪ್ರದೇಶದ ಗೊಂಡಾ, ಅಯೋಧ್ಯೆ, ಬಹ್ರೈಚ್ ಮತ್ತು ಬಸ್ತಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದಾರೆ.

”ಬಿಜೆಪಿಗೂ ಈ ರ್ಯಾಲಿಗೂ ಸಂಬಂಧವಿಲ್ಲ. ಅದರ ನಾಯಕರು ನಮ್ಮನ್ನು ಕೇಳಿದರೆ ಮಾತ್ರ ನಾವು ಭಾಗವಹಿಸುತ್ತೇವೆ. ಇಲ್ಲಿಯವರೆಗೆ ನಮಗೆ ಅಂತಹ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಬಿಜೆಪಿಯ ಅಯೋಧ್ಯೆ ಜಿಲ್ಲಾಧ್ಯಕ್ಷ ಸಂಜೀವ್ ಸಿಂಗ್ ಹೇಳಿದ್ದಾರೆ.

ಈ ಬಗ್ಗೆ ಕೈಸರ್‌ಗಂಜ್ ಸಂಸದ ಸಂಜೀವ್ ಸಿಂಗ್ ಮಾತನಾಡಿ, ”ಇದು ರಾಜಕೀಯ ರ್ಯಾಲಿ ಅಲ್ಲ. ಯಾರನ್ನಾದರೂ ಮಾನಹಾನಿ ಮಾಡಲು ಕಾನೂನನ್ನು ದುರುಪಯೋಗಪಡಿಸಇಕೊಳ್ಳುವವರನ್ನು ನಾವು ಹೇಗೆ ಎದುರಿಸಬೇಕು ಎಂಬುದರ ಕುರಿತು ಸಾಧುಗಳು ಮತ್ತು ಬುದ್ಧಿಜೀವಿಗಳೊಂದಿಗೆ ಈ ಮಹಾ ರ್ಯಾಲಿಯಲ್ಲಿ ಚರ್ಚೆ ನಡೆಯಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾರ್ಕೋ ಪರೀಕ್ಷೆಗೆ ಒಳಗಾಗುತ್ತೇನೆ, ಆದರೆ ಒಂದು ಷರತ್ತು.. : ಬ್ರಿಜ್ ಭೂಷಣ್ ಶರಣ್ ಸಿಂಗ್

ಸುಳ್ಳು ಆರೋಪಗಳನ್ನು ಹೊರಿಸುವವರನ್ನು ಪ್ರಸ್ತುತ ಐಪಿಸಿ ಸೆಕ್ಷನ್ 182 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಆದರೆ ಶಿಕ್ಷೆಯು ಅಪರಾಧಕ್ಕೆ ಅನುಗುಣವಾಗಿಲ್ಲ ಎಂದು ಸಂಸದರ ಸಹವರ್ತಿ ಹೇಳಿದರು. ”ಐಪಿಸಿ ಸೆಕ್ಷನ್ 182 ರ ಅಡಿಯಲ್ಲಿ ಒದಗಿಸಲಾದ ಕ್ರಮವು ಸಾಕಾಗುವುದಿಲ್ಲ. ರ್ಯಾಲಿಯಲ್ಲಿ, ಕಾನೂನನ್ನು ತಿದ್ದುಪಡಿ ಮಾಡಲು ಮತ್ತು ಅಂತಹ ಪ್ರಕರಣಗಳಲ್ಲಿ ಶಿಕ್ಷೆಯನ್ನು ಕಠಿಣಗೊಳಿಸುವಂತೆ ಒತ್ತಾಯಿಸಲಾಗುವುದು. ಬ್ರಿಜ್ ಭೂಷಣ್ ವಿರುದ್ಧದ ಆರೋಪಗಳು ಸುಳ್ಳು ಎಂದು ಅವರು ಹೇಳಿದರು. ಈ ರ್ಯಾಲಿಗೆ ಸಾಧುಗಳ ಭ್ರಾತೃತ್ವವು ಕರೆಯನ್ನು ನೀಡಿತು ಮತ್ತು ಸಂಸದರು ಇದರ ವ್ಯವಸ್ಥೆಗಳನ್ನು ಮಾತ್ರ ಮಾಡುತ್ತಿದ್ದಾರೆ” ಎಂದು ಸಂಜೀವ್ ಸಿಂಗ್ ಹೇಳಿದ್ದಾರೆ.

ಬಿಜೆಪಿ ಇದುವರೆಗೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಸಂಸದನ ವಿರುದ್ಧ ಕ್ರಮಕೈಗೊಂಡಿಲ್ಲ ಮತ್ತು ಮೂಲಗಳ ಪ್ರಕಾರ ಅವರಿಗೆ ಶೋಕಾಸ್ ನೋಟಿಸ್ ಕೂಡ ನೀಡಿಲ್ಲ. ಕಳೆದ ವಾರ, ಲಕ್ನೋದಲ್ಲಿ ನಡೆದ ಬಿಜೆಪಿಯ ಅವಧ್ ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಿಂಗ್ ಭಾಗವಹಿಸಿದ್ದರು.

ಕೈಸರ್‌ಗಂಜ್ ಸಂಸದ ಮತ್ತು ಅವರ ರ್ಯಾಲಿಯ ಬಗ್ಗೆ ಪಕ್ಷದ ಅನೇಕ ನಾಯಕರು ಅಸಹನೀಯರಾಗಿದ್ದಾರೆ ಎಂದು ಬಿಜೆಪಿಯ ಮೂಲಗಳು ಹೇಳಿವೆ. ಮತ್ತೊಂದೆಡೆ ಬಿಜೆಪಿ ನಾಯಕರೊಬ್ಬರು, ”2024ರ ಲೋಕಸಭೆ ಚುನಾವಣೆಗೆ ಮತ್ತೆ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಆದ್ದರಿಂದ, ಈ ರ್ಯಾಲಿಯನ್ನು ನಡೆಸುವ ಮೂಲಕ ತಮಗಾದ ಹಾನಿಯನ್ನು ನಿಯಂತ್ರಣ ಮಾಡುವ ಕ್ರಮವಾಗಿದೆ. ಇದು ಜನರು ಮತ್ತು ಸಾಧು ಸಮುದಾಯದ ಬೆಂಬಲವನ್ನು ಪಡೆಯುವ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...