Homeಮುಖಪುಟಲೈಂಗಿಕ ಕಿರುಕುಳದ ಆರೋಪಿ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಸಿಂಗ್‌ನಿಂದ ಮಹಾ ರ್ಯಾಲಿ

ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಸಿಂಗ್‌ನಿಂದ ಮಹಾ ರ್ಯಾಲಿ

- Advertisement -
- Advertisement -

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿಯ ಕೈಸರ್‌ಗಂಜ್ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಏಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧ ವಿರೋಧ ಪಕ್ಷಗಳು, ನಾಗರಿಕರು ಮತ್ತು ರೈತ ಸಂಘಟನೆಗಳು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಮಯದಲ್ಲಿ ಅವರು ಜೂನ್ 5ರಂದು ಅಯೋಧ್ಯೆಯಲ್ಲಿ ರ್ಯಾಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ. ಆದರೆ, ಅಯೋಧ್ಯೆ ಬಿಜೆಪಿ ಘಟಕವು ಈ ರ‍್ಯಾಲಿಯಿಂದ ದೂರ ಸರಿದಿದೆ.

ಬ್ರಿಜ್ ಭೂಷಣ್ ಅವರು ಅಯೋಧ್ಯೆಯ ರಾಮ್ ಕಥಾ ಪಾರ್ಕ್‌ನಲ್ಲಿ ಜನ ಚೇತನ ಮಹಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳಿಂದ ಸಾಧುಗಳು, ಕಾನೂನು ತಜ್ಞರು ಹಾಗೂ ಶಿಕ್ಷಣ ತಜ್ಞರನ್ನು ಆಹ್ವಾನಿಸಲಾಗಿದೆ. ದೆಹಲಿ ಪೊಲೀಸರು ಸಂಸದರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿರುವ ಸಮಯದಲ್ಲಿ ರ್ಯಾಲಿ ನಡೆಸಲಾಗುತ್ತಿದೆ. ಎಫ್‌ಐಆರ್ ದಾಖಲಾದಾಗಿನಿಂದ ಸಿಂಗ್ ರಾಜಕೀಯ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು. ಆದರೆ, ಅವರು ಅಯೋಧ್ಯೆ ರ್ಯಾಲಿಗೆ ಜನರನ್ನು ಆಹ್ವಾನಿಸಲು ಕಳೆದ ವಾರದಿಂದ ಯುಪಿಯ ಅವಧ್ ಪ್ರದೇಶದ ಗೊಂಡಾ, ಅಯೋಧ್ಯೆ, ಬಹ್ರೈಚ್ ಮತ್ತು ಬಸ್ತಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದಾರೆ.

”ಬಿಜೆಪಿಗೂ ಈ ರ್ಯಾಲಿಗೂ ಸಂಬಂಧವಿಲ್ಲ. ಅದರ ನಾಯಕರು ನಮ್ಮನ್ನು ಕೇಳಿದರೆ ಮಾತ್ರ ನಾವು ಭಾಗವಹಿಸುತ್ತೇವೆ. ಇಲ್ಲಿಯವರೆಗೆ ನಮಗೆ ಅಂತಹ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಬಿಜೆಪಿಯ ಅಯೋಧ್ಯೆ ಜಿಲ್ಲಾಧ್ಯಕ್ಷ ಸಂಜೀವ್ ಸಿಂಗ್ ಹೇಳಿದ್ದಾರೆ.

ಈ ಬಗ್ಗೆ ಕೈಸರ್‌ಗಂಜ್ ಸಂಸದ ಸಂಜೀವ್ ಸಿಂಗ್ ಮಾತನಾಡಿ, ”ಇದು ರಾಜಕೀಯ ರ್ಯಾಲಿ ಅಲ್ಲ. ಯಾರನ್ನಾದರೂ ಮಾನಹಾನಿ ಮಾಡಲು ಕಾನೂನನ್ನು ದುರುಪಯೋಗಪಡಿಸಇಕೊಳ್ಳುವವರನ್ನು ನಾವು ಹೇಗೆ ಎದುರಿಸಬೇಕು ಎಂಬುದರ ಕುರಿತು ಸಾಧುಗಳು ಮತ್ತು ಬುದ್ಧಿಜೀವಿಗಳೊಂದಿಗೆ ಈ ಮಹಾ ರ್ಯಾಲಿಯಲ್ಲಿ ಚರ್ಚೆ ನಡೆಯಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾರ್ಕೋ ಪರೀಕ್ಷೆಗೆ ಒಳಗಾಗುತ್ತೇನೆ, ಆದರೆ ಒಂದು ಷರತ್ತು.. : ಬ್ರಿಜ್ ಭೂಷಣ್ ಶರಣ್ ಸಿಂಗ್

ಸುಳ್ಳು ಆರೋಪಗಳನ್ನು ಹೊರಿಸುವವರನ್ನು ಪ್ರಸ್ತುತ ಐಪಿಸಿ ಸೆಕ್ಷನ್ 182 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಆದರೆ ಶಿಕ್ಷೆಯು ಅಪರಾಧಕ್ಕೆ ಅನುಗುಣವಾಗಿಲ್ಲ ಎಂದು ಸಂಸದರ ಸಹವರ್ತಿ ಹೇಳಿದರು. ”ಐಪಿಸಿ ಸೆಕ್ಷನ್ 182 ರ ಅಡಿಯಲ್ಲಿ ಒದಗಿಸಲಾದ ಕ್ರಮವು ಸಾಕಾಗುವುದಿಲ್ಲ. ರ್ಯಾಲಿಯಲ್ಲಿ, ಕಾನೂನನ್ನು ತಿದ್ದುಪಡಿ ಮಾಡಲು ಮತ್ತು ಅಂತಹ ಪ್ರಕರಣಗಳಲ್ಲಿ ಶಿಕ್ಷೆಯನ್ನು ಕಠಿಣಗೊಳಿಸುವಂತೆ ಒತ್ತಾಯಿಸಲಾಗುವುದು. ಬ್ರಿಜ್ ಭೂಷಣ್ ವಿರುದ್ಧದ ಆರೋಪಗಳು ಸುಳ್ಳು ಎಂದು ಅವರು ಹೇಳಿದರು. ಈ ರ್ಯಾಲಿಗೆ ಸಾಧುಗಳ ಭ್ರಾತೃತ್ವವು ಕರೆಯನ್ನು ನೀಡಿತು ಮತ್ತು ಸಂಸದರು ಇದರ ವ್ಯವಸ್ಥೆಗಳನ್ನು ಮಾತ್ರ ಮಾಡುತ್ತಿದ್ದಾರೆ” ಎಂದು ಸಂಜೀವ್ ಸಿಂಗ್ ಹೇಳಿದ್ದಾರೆ.

ಬಿಜೆಪಿ ಇದುವರೆಗೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಸಂಸದನ ವಿರುದ್ಧ ಕ್ರಮಕೈಗೊಂಡಿಲ್ಲ ಮತ್ತು ಮೂಲಗಳ ಪ್ರಕಾರ ಅವರಿಗೆ ಶೋಕಾಸ್ ನೋಟಿಸ್ ಕೂಡ ನೀಡಿಲ್ಲ. ಕಳೆದ ವಾರ, ಲಕ್ನೋದಲ್ಲಿ ನಡೆದ ಬಿಜೆಪಿಯ ಅವಧ್ ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಿಂಗ್ ಭಾಗವಹಿಸಿದ್ದರು.

ಕೈಸರ್‌ಗಂಜ್ ಸಂಸದ ಮತ್ತು ಅವರ ರ್ಯಾಲಿಯ ಬಗ್ಗೆ ಪಕ್ಷದ ಅನೇಕ ನಾಯಕರು ಅಸಹನೀಯರಾಗಿದ್ದಾರೆ ಎಂದು ಬಿಜೆಪಿಯ ಮೂಲಗಳು ಹೇಳಿವೆ. ಮತ್ತೊಂದೆಡೆ ಬಿಜೆಪಿ ನಾಯಕರೊಬ್ಬರು, ”2024ರ ಲೋಕಸಭೆ ಚುನಾವಣೆಗೆ ಮತ್ತೆ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಆದ್ದರಿಂದ, ಈ ರ್ಯಾಲಿಯನ್ನು ನಡೆಸುವ ಮೂಲಕ ತಮಗಾದ ಹಾನಿಯನ್ನು ನಿಯಂತ್ರಣ ಮಾಡುವ ಕ್ರಮವಾಗಿದೆ. ಇದು ಜನರು ಮತ್ತು ಸಾಧು ಸಮುದಾಯದ ಬೆಂಬಲವನ್ನು ಪಡೆಯುವ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...