Homeಕರ್ನಾಟಕಬಿಜೆಪಿಗೆ ಬಿಗ್ ಶಾಕ್: ಕಮಲ ತೊರೆದು 'ಕೈ' ಸೇರಿದ ಎಂಎಲ್‌ಸಿ ಪುಟ್ಟಣ್ಣ

ಬಿಜೆಪಿಗೆ ಬಿಗ್ ಶಾಕ್: ಕಮಲ ತೊರೆದು ‘ಕೈ’ ಸೇರಿದ ಎಂಎಲ್‌ಸಿ ಪುಟ್ಟಣ್ಣ

- Advertisement -
- Advertisement -

ವಿಧಾನಪರಿಷತ್ ಬಿಜೆಪಿ ಸದಸ್ಯ ಪುಟ್ಟಣ್ಣ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪುಟ್ಟಣ್ಣ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ”ಬಿಜೆಪಿ ಆಡಳಿತದ ವೈಖರಿಯನ್ನು ಗಮನಿಸಿ ಅವರ ಕ್ಷೇತ್ರದಲ್ಲಿ ಶಿಕ್ಷಕರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಪುಟ್ಟಣ್ಣ ಅವರು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ” ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ”ಪುಟ್ಟಣ್ಣ ನಾಲ್ಕು ಬಾರಿ ಎಂಎಲ್ ಸಿ ಆಗಿದ್ದರು. ನಾಲ್ಕನೇ ಬಾರಿಯ ಅವಧಿ ಮುಗಿಯಲು ಇನ್ನೂ ಸಾಕಷ್ಟು ಅವಧಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ. ಬಿಜೆಪಿ ಭ್ರಷ್ಟಾಚಾರ, ಕೋಮುವಾದ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ತಿಲಾಂಜಲಿ ಇಟ್ಟು ಜನರ ಭಾವನೆಗಳನ್ನು ಹಿಂದುತ್ವದ ಆಧಾರದಲ್ಲಿ ಕೆರಳಿಸುತ್ತಿದ್ದಾರೆ. ಇದರಿಂದ ಬೇಸೆತ್ತು ಬಿಜೆಪಿ ತೊರೆಯುತ್ತಿದ್ದಾರೆ” ಎಂದರು.

”ಸುಮಾರು 20 ವರ್ಷ ವಿಧಾನಪರಿಷತ್ ನಲ್ಲಿ ಸದಸ್ಯರಾಗಿದ್ದರು. ವಿಧಾನಪರಿಷತ್ ಉಪಸಭಾಪತಿಯಾಗಿಯೂ ಕೆಲಸ ಮಾಡಿದ್ದಾರೆ. ಪುಟ್ಟಣ್ಣ ಪಕ್ಷ ಸೇರ್ಪಡೆಯಿಂದ ಪಕ್ಷದ ಶಕ್ತಿ ಹೆಚ್ಚಾಗುತ್ತದೆ. ಇದು ಧೈರ್ಯದ ತೀರ್ಮಾನ” ಎಂದರು.

ಇದನ್ನೂ ಓದಿ: ಕಲಬುರಗಿ: ಪ್ರಧಾನಿ ಮೋದಿ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಹರಿಸಿದ ಬಿಜೆಪಿ ಶಾಸಕ

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, ”ಪುಟ್ಟಣ್ಣ ಯಾವುದೇ ಶರತ್ತು ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಶಿಕ್ಷಕ ಸಮುದಾಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಎಂದು ಹೇಳಿದರು.

2019ರಲ್ಲಿ ಪುಟ್ಟಣ್ಣ ಅವರು ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ್ದರು. ವಿಧಾನಪರಿಷತ್‌ನ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದಿದ್ದರು. ಗುರುವಾರ ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪುಟ್ಟಣ್ಣ ಮಾತನಾಡಿ, ”ಇವತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ನಾಲ್ಕು ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಆಗಿದ್ದೇನೆ. ಶಿಕ್ಷಣ ಕ್ಷೇತ್ರ, ಶಿಕ್ಷಕರ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ನಾನು ಏನು ಅಂದುಕೊಂಡು ಬಿಜೆಪಿ ಸೇರಿದ್ದೇನೋ ಅದು ಮಾಡಲು ಸಾಧ್ಯವಾಗಲಿಲ್ಲ, ಅಲ್ಲಿ ಸತ್ತಂತ ಪರಿಸ್ಥಿತಿ ಇತ್ತು. ಸರ್ಕಾರ ಶಿಕ್ಷಣ ಕ್ಷೇತ್ರದ ಯಾವ ಸಮಸ್ಯೆಯನ್ನೂ ‌ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

ಫ್ರೀಡಂ ಪಾರ್ಕ್ ನಲ್ಲಿ ಶಿಕ್ಷಕರ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ಬಿಜೆಪಿ ಪಕ್ಷ ಸೇರಿ ತಪ್ಪು ಮಾಡಿದೆ ಎಂದು ಆತ್ಮಸಾಕ್ಷಿ ಹೇಳುತ್ತಿತ್ತು. ಇವಾಗ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ ಎಂದರು.

ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ವಿರೋಧ ವ್ಯಕ್ತ:

ರಾಜಾಜಿನಗರ ಕ್ಷೇತ್ರದ ಕೆಲವು ಟಿಕೆಟ್ ಆಕಾಂಕ್ಷಿಗಳು ಮತ್ತು ಕೆಲವು ನಾಯಕರು ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಬಾರದು ಎಂದು ಗಲಾಟೆ ಮಾಡಿದ್ದಾರೆ. ಟಿಕೆಟ್ ಆಕಾಂಕ್ಷಿ ಭವ್ಯ ನರಸಿಂಹಮೂರ್ತಿ, ಮನೋಹರ್ ವಿರೋಧ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಳಿ ಪುಟ್ಟಣ್ಣಗೆ ಟಿಕೆಟ್ ನೀಡದಂತೆ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...