Homeಕರ್ನಾಟಕಬಿಜೆಪಿಗೆ ಬಿಗ್ ಶಾಕ್: ಕಮಲ ತೊರೆದು 'ಕೈ' ಸೇರಿದ ಎಂಎಲ್‌ಸಿ ಪುಟ್ಟಣ್ಣ

ಬಿಜೆಪಿಗೆ ಬಿಗ್ ಶಾಕ್: ಕಮಲ ತೊರೆದು ‘ಕೈ’ ಸೇರಿದ ಎಂಎಲ್‌ಸಿ ಪುಟ್ಟಣ್ಣ

- Advertisement -
- Advertisement -

ವಿಧಾನಪರಿಷತ್ ಬಿಜೆಪಿ ಸದಸ್ಯ ಪುಟ್ಟಣ್ಣ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪುಟ್ಟಣ್ಣ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ”ಬಿಜೆಪಿ ಆಡಳಿತದ ವೈಖರಿಯನ್ನು ಗಮನಿಸಿ ಅವರ ಕ್ಷೇತ್ರದಲ್ಲಿ ಶಿಕ್ಷಕರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಪುಟ್ಟಣ್ಣ ಅವರು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ” ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ”ಪುಟ್ಟಣ್ಣ ನಾಲ್ಕು ಬಾರಿ ಎಂಎಲ್ ಸಿ ಆಗಿದ್ದರು. ನಾಲ್ಕನೇ ಬಾರಿಯ ಅವಧಿ ಮುಗಿಯಲು ಇನ್ನೂ ಸಾಕಷ್ಟು ಅವಧಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ. ಬಿಜೆಪಿ ಭ್ರಷ್ಟಾಚಾರ, ಕೋಮುವಾದ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ತಿಲಾಂಜಲಿ ಇಟ್ಟು ಜನರ ಭಾವನೆಗಳನ್ನು ಹಿಂದುತ್ವದ ಆಧಾರದಲ್ಲಿ ಕೆರಳಿಸುತ್ತಿದ್ದಾರೆ. ಇದರಿಂದ ಬೇಸೆತ್ತು ಬಿಜೆಪಿ ತೊರೆಯುತ್ತಿದ್ದಾರೆ” ಎಂದರು.

”ಸುಮಾರು 20 ವರ್ಷ ವಿಧಾನಪರಿಷತ್ ನಲ್ಲಿ ಸದಸ್ಯರಾಗಿದ್ದರು. ವಿಧಾನಪರಿಷತ್ ಉಪಸಭಾಪತಿಯಾಗಿಯೂ ಕೆಲಸ ಮಾಡಿದ್ದಾರೆ. ಪುಟ್ಟಣ್ಣ ಪಕ್ಷ ಸೇರ್ಪಡೆಯಿಂದ ಪಕ್ಷದ ಶಕ್ತಿ ಹೆಚ್ಚಾಗುತ್ತದೆ. ಇದು ಧೈರ್ಯದ ತೀರ್ಮಾನ” ಎಂದರು.

ಇದನ್ನೂ ಓದಿ: ಕಲಬುರಗಿ: ಪ್ರಧಾನಿ ಮೋದಿ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಹರಿಸಿದ ಬಿಜೆಪಿ ಶಾಸಕ

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, ”ಪುಟ್ಟಣ್ಣ ಯಾವುದೇ ಶರತ್ತು ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಶಿಕ್ಷಕ ಸಮುದಾಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಎಂದು ಹೇಳಿದರು.

2019ರಲ್ಲಿ ಪುಟ್ಟಣ್ಣ ಅವರು ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ್ದರು. ವಿಧಾನಪರಿಷತ್‌ನ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದಿದ್ದರು. ಗುರುವಾರ ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪುಟ್ಟಣ್ಣ ಮಾತನಾಡಿ, ”ಇವತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ನಾಲ್ಕು ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಆಗಿದ್ದೇನೆ. ಶಿಕ್ಷಣ ಕ್ಷೇತ್ರ, ಶಿಕ್ಷಕರ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ನಾನು ಏನು ಅಂದುಕೊಂಡು ಬಿಜೆಪಿ ಸೇರಿದ್ದೇನೋ ಅದು ಮಾಡಲು ಸಾಧ್ಯವಾಗಲಿಲ್ಲ, ಅಲ್ಲಿ ಸತ್ತಂತ ಪರಿಸ್ಥಿತಿ ಇತ್ತು. ಸರ್ಕಾರ ಶಿಕ್ಷಣ ಕ್ಷೇತ್ರದ ಯಾವ ಸಮಸ್ಯೆಯನ್ನೂ ‌ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

ಫ್ರೀಡಂ ಪಾರ್ಕ್ ನಲ್ಲಿ ಶಿಕ್ಷಕರ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ. ಬಿಜೆಪಿ ಪಕ್ಷ ಸೇರಿ ತಪ್ಪು ಮಾಡಿದೆ ಎಂದು ಆತ್ಮಸಾಕ್ಷಿ ಹೇಳುತ್ತಿತ್ತು. ಇವಾಗ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ ಎಂದರು.

ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ವಿರೋಧ ವ್ಯಕ್ತ:

ರಾಜಾಜಿನಗರ ಕ್ಷೇತ್ರದ ಕೆಲವು ಟಿಕೆಟ್ ಆಕಾಂಕ್ಷಿಗಳು ಮತ್ತು ಕೆಲವು ನಾಯಕರು ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಬಾರದು ಎಂದು ಗಲಾಟೆ ಮಾಡಿದ್ದಾರೆ. ಟಿಕೆಟ್ ಆಕಾಂಕ್ಷಿ ಭವ್ಯ ನರಸಿಂಹಮೂರ್ತಿ, ಮನೋಹರ್ ವಿರೋಧ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಳಿ ಪುಟ್ಟಣ್ಣಗೆ ಟಿಕೆಟ್ ನೀಡದಂತೆ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...