Homeಮುಖಪುಟ'ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ': ಮಾಜಿ ನ್ಯಾಯಾಧೀಶರನ್ನು ರಾಜ್ಯಪಾಲರನ್ನಾಗಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

‘ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ’: ಮಾಜಿ ನ್ಯಾಯಾಧೀಶರನ್ನು ರಾಜ್ಯಪಾಲರನ್ನಾಗಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎಸ್‌ ಅಬ್ದುಲ್‌ ನಜೀರ್‌ ಅವರನ್ನು ಆಂಧ್ರಪ್ರದೇಶದ ಗವರ್ನರ್‌ ಆಗಿ ನೇಮಕ ಮಾಡಿರುವುದನ್ನು ಕಾಂಗ್ರೆಸ್‌ ಭಾನುವಾರ ಟೀಕಿಸಿದ್ದು, ಇದು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಎಸ್‌ ಅಬ್ದುಲ್‌ ನಜೀರ್‌ ಅವರು ಜನವರಿ 4 ರಂದು ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾಗಿದ್ದು, ಒಂದು ತಿಂಗಳ ನಂತರ ನಜೀರ್ ಅವರನ್ನು ಗವರ್ನರ್‌ ಹುದ್ದೆಗೆ ನೇಮಿಸಲಾಯಿತು. ಇವರು ಬಾಬರಿ ಮಸೀದಿಯ ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡುವ ಅಯೋಧ್ಯೆ ಭೂ ವಿವಾದ ಪ್ರಕರಣದಲ್ಲಿ ತೀರ್ಪು ನೀಡಿದ ಸಂವಿಧಾನ ಪೀಠದ ಭಾಗವಾಗಿದ್ದರು. ಜನವರಿ 2 ರಂದು ಕೇಂದ್ರದ 2016ರ ನೋಟು ಅಮಾನ್ಯೀಕರಣದ ಪ್ರಕ್ರಿಯೆಯನ್ನು ಎತ್ತಿಹಿಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿ ಮಾಜಿ ನ್ಯಾಯಾಧೀಶರು ಕೂಡ ಇದ್ದರು.

ಬಾಬ್ರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರದ ಪರವಾಗಿ ತೀರ್ಪು ನೀಡಿದ ಐವರು ನ್ಯಾಯಮೂರ್ತಿಗಳಲ್ಲಿ ಈಗಾಗಲೇ ಮೋದಿ ಸರ್ಕಾರ, ನ್ಯಾ. ರಂಜನ್ ಗೊಗೋಯ್ ಅವರನ್ನು ನಿವೃತ್ತಿಯಾದ ನಾಲ್ಕೇ ತಿಂಗಳಲ್ಲಿ- 2020ರ ಮಾರ್ಚ್‌ನಲ್ಲಿ ರಾಜ್ಯಸಭಾ ಸದಸ್ಯರನ್ನಾಗಿ ನೇಮಿಸಿತು. ನ್ಯಾ. ಅಶೋಕ್ ಭೂಷಣ್ ಅವರನ್ನು ನಿವೃತ್ತಿಯಾದ ನಾಲ್ಕೇ ತಿಂಗಳಲ್ಲಿ ಮೋದಿ ಸರ್ಕಾರ ದೇಶದ ಅತ್ಯಂತ ದೊಡ್ಡ ಕಾರ್ಪೊರೇಟ್‌ಗಳ ಕೋಟ್ಯಂತರ ಮೌಲ್ಯದ ವ್ಯಾಜ್ಯಗಳನ್ನು ಬಗೆಹರಿಸುವ National Company Law Appellate Tribunalನ ಅಧ್ಯಕ್ಷರನ್ನಾಗಿ 2021ರ ನವಂಬರ್‌ನಲ್ಲಿ ನೇಮಿಸಿತು. ಜಸ್ಟೀಸ್ ಬೋಬ್ಡೆ ಅವರು ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾದ ಮೇಲೆ ನಾಗಪುರದ ಪರವಾಗಿ ಸಿಕ್ಕಾಪಟ್ಟೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಪ್ರಾಯಶಃ ದೇಶಕ್ಕೆ ಇನ್ನೂ ದೊಡ್ಡದಾದ ಆಶ್ಚರ್ಯ ಕಾದಿರಬಹುದು. ಇದೀಗ ಎಸ್‌ ಅಬ್ದುಲ್‌ ನಜೀರ್‌ ಅವರನ್ನು ಆಂಧ್ರಪ್ರದೇಶದ ಗವರ್ನರ್‌ ಆಗಿ ನೇಮಕ ಮಾಡಿದೆ.

ಇದನ್ನೂ ಓದಿ: ಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

ಈ ಬಗ್ಗೆ ಭಾನುವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಮಾಜಿ ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಅರುಣ್ ಜೇಟ್ಲಿ ಅವರ ವೀಡಿಯೊವನ್ನು ಹಂಚಿಕೊಂಡಿದ್ದು,ಈ ವಿಡಿಯೋದಲ್ಲಿ ”ನಿವೃತ್ತಿ ಪೂರ್ವ ತೀರ್ಪುಗಳು ನಿವೃತ್ತಿಯ ನಂತರದ ಉದ್ಯೋಗಗಳ ಬಯಕೆಯಿಂದ ಪ್ರಭಾವಿತವಾಗಿವೆ” ಎಂದು ಹೇಳಿದ್ದಾರೆ. ಕಳೆದ 3-4 ವರ್ಷಗಳಲ್ಲಿ ಇದಕ್ಕೆ ಸಾಕಷ್ಟು ಪುರಾವೆಗಳು ಖಚಿತವಾಗಿ” ಎಂದು ವೀಡಿಯೊ ಜೊತೆಗೆ ರಮೇಶ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಕೂಡ ಪತ್ರಿಕಾಗೋಷ್ಠಿಯಲ್ಲಿ, ಜೇಟ್ಲಿ ಅವರ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇಂತಹ ನೇಮಕಾತಿಗಳು ಈ ಹಿಂದೆ ಹಲವಾರು ಬಾರಿ ನಡೆದಿವೆ ಮತ್ತು ಸ್ವೀಕಾರಾರ್ಹವಾಗಿವೆ ಎಂಬ ವಾದಗಳನ್ನು ಅವರು ತಳ್ಳಿಹಾಕಿದರು ಎಂದು ಪಿಟಿಐ ವರದಿ ಮಾಡಿದೆ.

”ನಾವು ಈ ವ್ಯಕ್ತಿಗಳ ಬಗ್ಗೆ ಮಾತನಾಡುತ್ತಿಲ್ಲ, ವೈಯಕ್ತಿಕವಾಗಿ ಈ ವ್ಯಕ್ತಿಯ [ನಜೀರ್] ಬಗ್ಗೆ ನನಗೆ ತುಂಬಾ ಗೌರವವಿದೆ. ನನಗೆ ಅವರ ಬಗ್ಗೆ ತಿಳಿದಿದೆ. ತಾತ್ವಿಕವಾಗಿ ನಾವು ಅದನ್ನು ವಿರೋಧಿಸುತ್ತೇವೆ, ಇದು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಬೆದರಿಕೆ ಎಂದು ನಾವು ನಂಬುತ್ತೇವೆ ಎಂದು ಹೇಳಿದ್ದಾರೆ.

ಶಿವಸೇನೆಯ ಸಂಸದೆ ಪ್ರಿಯಾಂಕಾ ಚತುರ್ವೇದಿ ಟ್ವೀಟ್ ಮಾಡಿದ್ದು, ”ಗೌರವಾನ್ವಿತ ನ್ಯಾಯಾಧೀಶರು ತಮ್ಮ ನಿವೃತ್ತಿಯ ನಂತರ ಸರ್ಕಾರದಲ್ಲಿ ನಮಗೆ ಯಾವ ಹುದ್ದೆ ಸಿಗಬಹುದು ಎಂದು ಯೋಚಿಸುತ್ತಾರೋ ಅದರಂತೆ ಗೌರವಾನ್ವಿತ ನ್ಯಾಯಾಲಯಗಳು ಕಾರ್ಯನಿರ್ವಹಿಸಲು ಪ್ರಾರಂಭಿಸಿತ್ತವೆ. ಮುಂದೆ ನಾವೇ ಮಹಾನ್ ಬನಾನಾ ರಿಪಬ್ಲಿಕ್ ಎಂದು ಘೋಷಿಸಿಕೊಳ್ಳಬಹುದು.”ಎಂದು ಹೇಳಿದ್ದಾರೆ.

ನಿವೃತ್ತಿಯೋತ್ತರ ನ್ಯಾಯಮೂರ್ತಿಗಳ ಬದುಕಿನ ಕುರಿತು ಅಧ್ಯಯನ ಕೂಡ ಆಗಿದೆ. ”2004ರಿಂದ 2014ರ ನಡುವಿನ ಅವಧಿಯನ್ನು ಮುಖ್ಯವಾಗಿಟ್ಟುಕೊಂಡು ಸಿಂಗಾಪುರ ವಿಶ್ವವಿದ್ಯಾನಿಲಯ ಸಂಶೋಧನೆಯೊಂದನ್ನು ಮಾಡಿತು. ಕೇಂದ್ರ ಸರ್ಕಾರ ಪಾರ್ಟಿಯಾಗಿದ್ದ ಪ್ರಕರಣಗಳ ಪೈಕಿ ಸರ್ಕಾರದ ಪರ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಯಾವುದಾದರೂ ಲಾಭವಾಗಿದೆಯೇ ಎಂಬುದನ್ನು ಈ ಸಂಶೋಧನೆ ಶೋಧಿಸಿತು. ಸುಮಾರು 2,500 ತೀರ್ಪುಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಕೇಂದ್ರದ ಪರ ತೀರ್ಪು ಕೊಟ್ಟ ಶೇ. 92 ನ್ಯಾಯಮೂರ್ತಿಗಳು ನಿವೃತ್ತಿಯ ನಂತರ ಫಲಾನುಭವಿಗಳಾಗಿದ್ದಾರೆ” ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...