Homeಮುಖಪುಟ'ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ': ಮಾಜಿ ನ್ಯಾಯಾಧೀಶರನ್ನು ರಾಜ್ಯಪಾಲರನ್ನಾಗಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

‘ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ’: ಮಾಜಿ ನ್ಯಾಯಾಧೀಶರನ್ನು ರಾಜ್ಯಪಾಲರನ್ನಾಗಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎಸ್‌ ಅಬ್ದುಲ್‌ ನಜೀರ್‌ ಅವರನ್ನು ಆಂಧ್ರಪ್ರದೇಶದ ಗವರ್ನರ್‌ ಆಗಿ ನೇಮಕ ಮಾಡಿರುವುದನ್ನು ಕಾಂಗ್ರೆಸ್‌ ಭಾನುವಾರ ಟೀಕಿಸಿದ್ದು, ಇದು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ ಎಂದು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಎಸ್‌ ಅಬ್ದುಲ್‌ ನಜೀರ್‌ ಅವರು ಜನವರಿ 4 ರಂದು ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾಗಿದ್ದು, ಒಂದು ತಿಂಗಳ ನಂತರ ನಜೀರ್ ಅವರನ್ನು ಗವರ್ನರ್‌ ಹುದ್ದೆಗೆ ನೇಮಿಸಲಾಯಿತು. ಇವರು ಬಾಬರಿ ಮಸೀದಿಯ ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡುವ ಅಯೋಧ್ಯೆ ಭೂ ವಿವಾದ ಪ್ರಕರಣದಲ್ಲಿ ತೀರ್ಪು ನೀಡಿದ ಸಂವಿಧಾನ ಪೀಠದ ಭಾಗವಾಗಿದ್ದರು. ಜನವರಿ 2 ರಂದು ಕೇಂದ್ರದ 2016ರ ನೋಟು ಅಮಾನ್ಯೀಕರಣದ ಪ್ರಕ್ರಿಯೆಯನ್ನು ಎತ್ತಿಹಿಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿ ಮಾಜಿ ನ್ಯಾಯಾಧೀಶರು ಕೂಡ ಇದ್ದರು.

ಬಾಬ್ರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರದ ಪರವಾಗಿ ತೀರ್ಪು ನೀಡಿದ ಐವರು ನ್ಯಾಯಮೂರ್ತಿಗಳಲ್ಲಿ ಈಗಾಗಲೇ ಮೋದಿ ಸರ್ಕಾರ, ನ್ಯಾ. ರಂಜನ್ ಗೊಗೋಯ್ ಅವರನ್ನು ನಿವೃತ್ತಿಯಾದ ನಾಲ್ಕೇ ತಿಂಗಳಲ್ಲಿ- 2020ರ ಮಾರ್ಚ್‌ನಲ್ಲಿ ರಾಜ್ಯಸಭಾ ಸದಸ್ಯರನ್ನಾಗಿ ನೇಮಿಸಿತು. ನ್ಯಾ. ಅಶೋಕ್ ಭೂಷಣ್ ಅವರನ್ನು ನಿವೃತ್ತಿಯಾದ ನಾಲ್ಕೇ ತಿಂಗಳಲ್ಲಿ ಮೋದಿ ಸರ್ಕಾರ ದೇಶದ ಅತ್ಯಂತ ದೊಡ್ಡ ಕಾರ್ಪೊರೇಟ್‌ಗಳ ಕೋಟ್ಯಂತರ ಮೌಲ್ಯದ ವ್ಯಾಜ್ಯಗಳನ್ನು ಬಗೆಹರಿಸುವ National Company Law Appellate Tribunalನ ಅಧ್ಯಕ್ಷರನ್ನಾಗಿ 2021ರ ನವಂಬರ್‌ನಲ್ಲಿ ನೇಮಿಸಿತು. ಜಸ್ಟೀಸ್ ಬೋಬ್ಡೆ ಅವರು ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾದ ಮೇಲೆ ನಾಗಪುರದ ಪರವಾಗಿ ಸಿಕ್ಕಾಪಟ್ಟೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಪ್ರಾಯಶಃ ದೇಶಕ್ಕೆ ಇನ್ನೂ ದೊಡ್ಡದಾದ ಆಶ್ಚರ್ಯ ಕಾದಿರಬಹುದು. ಇದೀಗ ಎಸ್‌ ಅಬ್ದುಲ್‌ ನಜೀರ್‌ ಅವರನ್ನು ಆಂಧ್ರಪ್ರದೇಶದ ಗವರ್ನರ್‌ ಆಗಿ ನೇಮಕ ಮಾಡಿದೆ.

ಇದನ್ನೂ ಓದಿ: ಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

ಈ ಬಗ್ಗೆ ಭಾನುವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಮಾಜಿ ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಅರುಣ್ ಜೇಟ್ಲಿ ಅವರ ವೀಡಿಯೊವನ್ನು ಹಂಚಿಕೊಂಡಿದ್ದು,ಈ ವಿಡಿಯೋದಲ್ಲಿ ”ನಿವೃತ್ತಿ ಪೂರ್ವ ತೀರ್ಪುಗಳು ನಿವೃತ್ತಿಯ ನಂತರದ ಉದ್ಯೋಗಗಳ ಬಯಕೆಯಿಂದ ಪ್ರಭಾವಿತವಾಗಿವೆ” ಎಂದು ಹೇಳಿದ್ದಾರೆ. ಕಳೆದ 3-4 ವರ್ಷಗಳಲ್ಲಿ ಇದಕ್ಕೆ ಸಾಕಷ್ಟು ಪುರಾವೆಗಳು ಖಚಿತವಾಗಿ” ಎಂದು ವೀಡಿಯೊ ಜೊತೆಗೆ ರಮೇಶ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಕೂಡ ಪತ್ರಿಕಾಗೋಷ್ಠಿಯಲ್ಲಿ, ಜೇಟ್ಲಿ ಅವರ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇಂತಹ ನೇಮಕಾತಿಗಳು ಈ ಹಿಂದೆ ಹಲವಾರು ಬಾರಿ ನಡೆದಿವೆ ಮತ್ತು ಸ್ವೀಕಾರಾರ್ಹವಾಗಿವೆ ಎಂಬ ವಾದಗಳನ್ನು ಅವರು ತಳ್ಳಿಹಾಕಿದರು ಎಂದು ಪಿಟಿಐ ವರದಿ ಮಾಡಿದೆ.

”ನಾವು ಈ ವ್ಯಕ್ತಿಗಳ ಬಗ್ಗೆ ಮಾತನಾಡುತ್ತಿಲ್ಲ, ವೈಯಕ್ತಿಕವಾಗಿ ಈ ವ್ಯಕ್ತಿಯ [ನಜೀರ್] ಬಗ್ಗೆ ನನಗೆ ತುಂಬಾ ಗೌರವವಿದೆ. ನನಗೆ ಅವರ ಬಗ್ಗೆ ತಿಳಿದಿದೆ. ತಾತ್ವಿಕವಾಗಿ ನಾವು ಅದನ್ನು ವಿರೋಧಿಸುತ್ತೇವೆ, ಇದು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಬೆದರಿಕೆ ಎಂದು ನಾವು ನಂಬುತ್ತೇವೆ ಎಂದು ಹೇಳಿದ್ದಾರೆ.

ಶಿವಸೇನೆಯ ಸಂಸದೆ ಪ್ರಿಯಾಂಕಾ ಚತುರ್ವೇದಿ ಟ್ವೀಟ್ ಮಾಡಿದ್ದು, ”ಗೌರವಾನ್ವಿತ ನ್ಯಾಯಾಧೀಶರು ತಮ್ಮ ನಿವೃತ್ತಿಯ ನಂತರ ಸರ್ಕಾರದಲ್ಲಿ ನಮಗೆ ಯಾವ ಹುದ್ದೆ ಸಿಗಬಹುದು ಎಂದು ಯೋಚಿಸುತ್ತಾರೋ ಅದರಂತೆ ಗೌರವಾನ್ವಿತ ನ್ಯಾಯಾಲಯಗಳು ಕಾರ್ಯನಿರ್ವಹಿಸಲು ಪ್ರಾರಂಭಿಸಿತ್ತವೆ. ಮುಂದೆ ನಾವೇ ಮಹಾನ್ ಬನಾನಾ ರಿಪಬ್ಲಿಕ್ ಎಂದು ಘೋಷಿಸಿಕೊಳ್ಳಬಹುದು.”ಎಂದು ಹೇಳಿದ್ದಾರೆ.

ನಿವೃತ್ತಿಯೋತ್ತರ ನ್ಯಾಯಮೂರ್ತಿಗಳ ಬದುಕಿನ ಕುರಿತು ಅಧ್ಯಯನ ಕೂಡ ಆಗಿದೆ. ”2004ರಿಂದ 2014ರ ನಡುವಿನ ಅವಧಿಯನ್ನು ಮುಖ್ಯವಾಗಿಟ್ಟುಕೊಂಡು ಸಿಂಗಾಪುರ ವಿಶ್ವವಿದ್ಯಾನಿಲಯ ಸಂಶೋಧನೆಯೊಂದನ್ನು ಮಾಡಿತು. ಕೇಂದ್ರ ಸರ್ಕಾರ ಪಾರ್ಟಿಯಾಗಿದ್ದ ಪ್ರಕರಣಗಳ ಪೈಕಿ ಸರ್ಕಾರದ ಪರ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಯಾವುದಾದರೂ ಲಾಭವಾಗಿದೆಯೇ ಎಂಬುದನ್ನು ಈ ಸಂಶೋಧನೆ ಶೋಧಿಸಿತು. ಸುಮಾರು 2,500 ತೀರ್ಪುಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಕೇಂದ್ರದ ಪರ ತೀರ್ಪು ಕೊಟ್ಟ ಶೇ. 92 ನ್ಯಾಯಮೂರ್ತಿಗಳು ನಿವೃತ್ತಿಯ ನಂತರ ಫಲಾನುಭವಿಗಳಾಗಿದ್ದಾರೆ” ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...