Homeಕರ್ನಾಟಕಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

ಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

- Advertisement -
- Advertisement -

ಬಿಗ್‌ ಬಾಸ್‌ ಕನ್ನಡ 10ನೇ ಅವೃತ್ತಿ ಆರಂಭಗೊಂಡಿದ್ದು, ವಿವಿಧ ಕ್ಷೇತ್ರಗಳ 17 ಮಂದಿ ಸ್ಪರ್ಧಿಗಳು ಬಿಗ್‌ ಬಾಸ್‌ ಮನೆಗೆ ಪ್ರವೇಶ ಮಾಡಿದ್ದಾರೆ. ಆದರೆ ಅಚ್ಚರಿ ಎಂಬಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು ಬಿಗ್ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಯನ್ನು ಪ್ರವೇಶ ಮಾಡುವ ವಿಡಿಯೋ ಪ್ರೊಮೊವನ್ನು ಕಲರ್ಸ್‌ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಜನರಿಂದ ಆಯ್ಕೆಯಾದ ಶಾಸಕನೋರ್ವ ಜನರ ಸಂಪರ್ಕ ಇಲ್ಲದೆ ಇರುವ ಮನೆಯಲ್ಲಿ 3 ತಿಂಗಳ ಕಾಲ ಇರುವುದು ಎಷ್ಟು ಸರಿ ಎಂಬ ಬಗ್ಗೆ ಪ್ರಶ್ನೆ ಭುಗಿಲೆದ್ದಿದೆ.

ಈ ವಾರ 11 ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಉಳಿದವರನ್ನು ಮುಂದಿನ ವಾರ ಆಯ್ಕೆ ಮಾಡಲಾಗುವುದು ಎಂದು ನಿರೂಪಕ ಕಿಚ್ಚ ಸುದೀಪ್‌ ತಿಳಿಸಿದ್ದರು. ಆದರೆ ಮೊದಲ ದಿನವೇ ಇದ್ದಕ್ಕಿದ್ದಂತೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದಾರೆ.  ನಾನು ನಿನ್ನೆಯೇ ಬಿಗ್‌ ಬಾಸ್‌ ವೇದಿಕೆಗೆ ಬರಬೇಕಿತ್ತು. ಸ್ಪರ್ಧಿಯಾಗಿ ಇಲ್ಲಿ ಸೇರಿದ್ದಕ್ಕೆ ತುಂಬ ಖುಷಿಯಾಗುತ್ತಿದೆ. ಗೆಲ್ಲೋದರಲ್ಲಿ ನಮಗೆ ಕಾಂಪ್ರಮೈಸ್‌ ಇಲ್ಲ ಎಂದು ಸ್ಪರ್ಧಿಗಳ ಮುಂದೆ ಹೇಳಿದ್ದಾರೆ.

ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಗೆ ಎಂಟ್ರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ ಪೋಸ್ಟ್ ಮಾಡಿದ ಬಾಲು ವಿಲ್‌, ದಯವಿಟ್ಟು ಈಶ್ವರ ಶಾಸಕನನ್ನು ಈ ಕಾರ್ಯಕ್ರಮದಿಂದ ವಾಪಸ್ ಕರೆಸಿ ಇಲ್ಲ ವಜಾಮಾಡಿ. ಜನ ಆರಿಸಿರೋದು ಇವರ ಮಂಗ ಆಟ ನೋಡೊದಕ್ಕೆ ಅಲ್ಲ. ಯಾವನದ್ದೋ ಟಿಅರ್‌ಪಿಗೋಸ್ಕರ ಜನ ಆರಿಸಿಲ್ಲ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಅವರು ದಯವಿಟ್ಟು ಗಮನಿಸಿ ಎಂದು ಬರೆದಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿ ಹನುಮೇಶ ಗುಂಡೂರು ಅವರು ಫೇಸ್ಬುಕ್ ಪೋಸ್ಟ್ ಹಾಕಿದ್ದು, ಜನಪ್ರತಿನಿಧಿ ಆಗಿರುವ ವ್ಯಕ್ತಿ ಈ ತರಹ ಜನರಿಗೆ ಅನುಕೂಲ ಇಲ್ಲದೇ ಇರುವ ಕಾರ್ಯಕ್ರಮಕ್ಕೆ ಹೋಗೋದು ಜನರಿಗೆ ಮಾಡುವ ದ್ರೋಹ ಎಂದು ಬರೆದಿದ್ದಾರೆ.

ಈ ಬಗ್ಗೆ ಫೇಸ್ಬುಕ್ ಪೋಸ್ಟ್‌ ಹಾಕಿದ ಸುಭಾಷ್ ರಾಜಮಾನೆ, ಸಂವಿಧಾನಬದ್ದ ಚುನಾವಣೆಗಳ ಮೂಲಕ ಪ್ರಜೆಗಳಿಂದ ಆಯ್ಕೆಯಾದ ಶಾಸಕರೊಬ್ಬರು ಬಿಗ್ ಬಾಸ್  ಮನೆಯಲ್ಲಿ ಮೂರು ತಿಂಗಳು ಬಂಧಿಯಾಗುವುದು ಎಷ್ಟು ಸರಿ? ಅಲ್ಲಿ ನಡೆಯುವ ಹುಚ್ಚಾಟಗಳಿಗೆ ಕೊನೆಯೇ ಇಲ್ಲ. ಇನ್ನು ಬಿಗ್ ಬಾಸ್ ಮನೆಗೆ ಹೋಗಿ ಬಂದವರು ಹುಚ್ಚರಂತೆ ಆಡುವುದನ್ನು ನೋಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ನಾನು ಗೌರಿ.ಕಾಂ ಜೊತೆ ಮಾತನಾಡಿದ ಚಿಕ್ಕಬಳ್ಳಾಪರ ಕ್ಷೇತ್ರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾದ ಆಂಜನೇಯ ರೆಡ್ಡಿ ಆರ್‌, ಶಾಸಕರು ಹೋಗಿದ್ದು ತಪ್ಪು ಅಥವಾ ಇಲ್ಲಿರುವ ಇತರ ಶಾಸಕರ ದೊಡ್ಡ ಕೆಲಸ ಮಾಡುತ್ತಾರೆ ಎನ್ನಲು ಸಾಧ್ಯವಿಲ್ಲ. ಕ್ಷೇತ್ರದ ಸಮಸ್ಯೆ ಬಗ್ಗೆ ಯಾರೂ ಕೂಡ ಗಮನ ಹರಿಸುವುದು ಕಂಡು ಬಂದಿಲ್ಲ. ಆದ್ದರಿಂದ ಯಾವುದೇ ಶಾಸಕರು ಕ್ಷೇತ್ರದಲ್ಲೇ ಇದ್ದರೂ, ಅಥವಾ ಬೆಂಗಳೂರು, ಸಿಂಗಪುರ ಎಲ್ಲಿ ಇದ್ದರೂ ಏನು ಕೂಡ ಪ್ರಯೋಜನ ಇಲ್ಲ. ಇಲ್ಲಿ ನೀರಿನ ಕೊರತೆ ಇದೆ. ಕುಡಿಯುವ ನೀರಿನಲ್ಲಿ ರಾಸಾಯನಿಕ ಮಿಶ್ರಣವಾಗಿ ಕಲುಷಿತವಾಗಿದೆ. ದನಕರುಗಳ ಮೇವಿನ ಸಮಸ್ಯೆ, ಎತ್ತಿನ ಹೊಳೆಯಲ್ಲಿ ಲೂಟಿ, ವಿದ್ಯುತ್‌ ಅಸಮರ್ಪಕ ಪೂರೈಕೆ ಸಮಸ್ಯೆ ಇದೆ. ಜಿಲ್ಲೆಯ ನಿಜವಾದ ಸಮಸ್ಯೆ ಬಗ್ಗೆ ಶಾಸಕರಿಗೆ ಅರಿವಿಲ್ಲ. ಎಲ್ಲರೂ ಅವರವರ ಪ್ರಚಾರಕ್ಕೆ ಒದ್ದಾಡುತ್ತಿರತ್ತಾರೆ, ಇದು ಕೂಡ ಪ್ರಚಾರದ ಒಂದು ವೇದಿಕೆಯಾಗಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ಶಾಸಕರು ಇರುವ ಸಮಯದಲ್ಲಿ ಜಿಲ್ಲೆಯ ಸಮಸ್ಯೆಗೆ ಸ್ಪಂದಿಸಬೇಕು. ಜಿಲ್ಲೆಯಲ್ಲಿ ಐವರು ಶಾಸಕರಿದ್ದಾರೆ. ಅವರಿಗೆ ನಿಜವಾದ ಸಮಸ್ಯೆಯ ಅರಿವಿಲ್ಲ ಎಂದು ಹೇಳಿದ್ದಾರೆ. ಬಿಗ್ ಬಾಸ್‌ ಮನೆಗೆ ಅವರು ಹೋದ ಕಾರಣಕ್ಕೆ ಜನರ ಸಂಪರ್ಕಕ್ಕೆ ಅವರು  ಸಿಗಲ್ಲ ಭ್ರಮೆಯಲ್ಲಿ ಕೂಡ ನಾನು ಇಲ್ಲ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಪ್ರದೀಪ್ ಈಶ್ವರ್ ಹೆಚ್ಚು ದಿನ ಬಿಗ್ ಬಾಸ್  ಮನೆಯಲ್ಲಿ ಇರುವುದಿಲ್ಲ ಎನ್ನಲಾಗಿದೆ. ತಮ್ಮ ನೀಟ್ ಅಕಾಡೆಮಿ, ಪಿಯು ಕಾಲೇಜು ಹಾಗೂ ಕ್ಷೇತ್ರದ ಜವಾಬ್ದಾರಿ ಇರುವುದರಿಂದ ಕೇವಲ ಅತಿಥಿಯಾಗಿ ಮಾತ್ರ ಪ್ರವೇಶ ಪಡೆದಿದ್ದಾರೆ ಎನ್ನಲಾಗಿದೆ. ಆದರೆ ಎಷ್ಟು ದಿನ ಇರ್ತಾರೆ ಎನ್ನುವುದು ಮಾತ್ರ ಇನ್ನು ಕೂಡ ನಿಗೂಡವಾಗಿದೆ.

ಇದನ್ನು ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...