Homeಕರ್ನಾಟಕಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

ಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

- Advertisement -
- Advertisement -

ಬಿಗ್‌ ಬಾಸ್‌ ಕನ್ನಡ 10ನೇ ಅವೃತ್ತಿ ಆರಂಭಗೊಂಡಿದ್ದು, ವಿವಿಧ ಕ್ಷೇತ್ರಗಳ 17 ಮಂದಿ ಸ್ಪರ್ಧಿಗಳು ಬಿಗ್‌ ಬಾಸ್‌ ಮನೆಗೆ ಪ್ರವೇಶ ಮಾಡಿದ್ದಾರೆ. ಆದರೆ ಅಚ್ಚರಿ ಎಂಬಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು ಬಿಗ್ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಯನ್ನು ಪ್ರವೇಶ ಮಾಡುವ ವಿಡಿಯೋ ಪ್ರೊಮೊವನ್ನು ಕಲರ್ಸ್‌ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಜನರಿಂದ ಆಯ್ಕೆಯಾದ ಶಾಸಕನೋರ್ವ ಜನರ ಸಂಪರ್ಕ ಇಲ್ಲದೆ ಇರುವ ಮನೆಯಲ್ಲಿ 3 ತಿಂಗಳ ಕಾಲ ಇರುವುದು ಎಷ್ಟು ಸರಿ ಎಂಬ ಬಗ್ಗೆ ಪ್ರಶ್ನೆ ಭುಗಿಲೆದ್ದಿದೆ.

ಈ ವಾರ 11 ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಉಳಿದವರನ್ನು ಮುಂದಿನ ವಾರ ಆಯ್ಕೆ ಮಾಡಲಾಗುವುದು ಎಂದು ನಿರೂಪಕ ಕಿಚ್ಚ ಸುದೀಪ್‌ ತಿಳಿಸಿದ್ದರು. ಆದರೆ ಮೊದಲ ದಿನವೇ ಇದ್ದಕ್ಕಿದ್ದಂತೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದಾರೆ.  ನಾನು ನಿನ್ನೆಯೇ ಬಿಗ್‌ ಬಾಸ್‌ ವೇದಿಕೆಗೆ ಬರಬೇಕಿತ್ತು. ಸ್ಪರ್ಧಿಯಾಗಿ ಇಲ್ಲಿ ಸೇರಿದ್ದಕ್ಕೆ ತುಂಬ ಖುಷಿಯಾಗುತ್ತಿದೆ. ಗೆಲ್ಲೋದರಲ್ಲಿ ನಮಗೆ ಕಾಂಪ್ರಮೈಸ್‌ ಇಲ್ಲ ಎಂದು ಸ್ಪರ್ಧಿಗಳ ಮುಂದೆ ಹೇಳಿದ್ದಾರೆ.

ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಗೆ ಎಂಟ್ರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ ಪೋಸ್ಟ್ ಮಾಡಿದ ಬಾಲು ವಿಲ್‌, ದಯವಿಟ್ಟು ಈಶ್ವರ ಶಾಸಕನನ್ನು ಈ ಕಾರ್ಯಕ್ರಮದಿಂದ ವಾಪಸ್ ಕರೆಸಿ ಇಲ್ಲ ವಜಾಮಾಡಿ. ಜನ ಆರಿಸಿರೋದು ಇವರ ಮಂಗ ಆಟ ನೋಡೊದಕ್ಕೆ ಅಲ್ಲ. ಯಾವನದ್ದೋ ಟಿಅರ್‌ಪಿಗೋಸ್ಕರ ಜನ ಆರಿಸಿಲ್ಲ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಅವರು ದಯವಿಟ್ಟು ಗಮನಿಸಿ ಎಂದು ಬರೆದಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿ ಹನುಮೇಶ ಗುಂಡೂರು ಅವರು ಫೇಸ್ಬುಕ್ ಪೋಸ್ಟ್ ಹಾಕಿದ್ದು, ಜನಪ್ರತಿನಿಧಿ ಆಗಿರುವ ವ್ಯಕ್ತಿ ಈ ತರಹ ಜನರಿಗೆ ಅನುಕೂಲ ಇಲ್ಲದೇ ಇರುವ ಕಾರ್ಯಕ್ರಮಕ್ಕೆ ಹೋಗೋದು ಜನರಿಗೆ ಮಾಡುವ ದ್ರೋಹ ಎಂದು ಬರೆದಿದ್ದಾರೆ.

ಈ ಬಗ್ಗೆ ಫೇಸ್ಬುಕ್ ಪೋಸ್ಟ್‌ ಹಾಕಿದ ಸುಭಾಷ್ ರಾಜಮಾನೆ, ಸಂವಿಧಾನಬದ್ದ ಚುನಾವಣೆಗಳ ಮೂಲಕ ಪ್ರಜೆಗಳಿಂದ ಆಯ್ಕೆಯಾದ ಶಾಸಕರೊಬ್ಬರು ಬಿಗ್ ಬಾಸ್  ಮನೆಯಲ್ಲಿ ಮೂರು ತಿಂಗಳು ಬಂಧಿಯಾಗುವುದು ಎಷ್ಟು ಸರಿ? ಅಲ್ಲಿ ನಡೆಯುವ ಹುಚ್ಚಾಟಗಳಿಗೆ ಕೊನೆಯೇ ಇಲ್ಲ. ಇನ್ನು ಬಿಗ್ ಬಾಸ್ ಮನೆಗೆ ಹೋಗಿ ಬಂದವರು ಹುಚ್ಚರಂತೆ ಆಡುವುದನ್ನು ನೋಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ನಾನು ಗೌರಿ.ಕಾಂ ಜೊತೆ ಮಾತನಾಡಿದ ಚಿಕ್ಕಬಳ್ಳಾಪರ ಕ್ಷೇತ್ರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾದ ಆಂಜನೇಯ ರೆಡ್ಡಿ ಆರ್‌, ಶಾಸಕರು ಹೋಗಿದ್ದು ತಪ್ಪು ಅಥವಾ ಇಲ್ಲಿರುವ ಇತರ ಶಾಸಕರ ದೊಡ್ಡ ಕೆಲಸ ಮಾಡುತ್ತಾರೆ ಎನ್ನಲು ಸಾಧ್ಯವಿಲ್ಲ. ಕ್ಷೇತ್ರದ ಸಮಸ್ಯೆ ಬಗ್ಗೆ ಯಾರೂ ಕೂಡ ಗಮನ ಹರಿಸುವುದು ಕಂಡು ಬಂದಿಲ್ಲ. ಆದ್ದರಿಂದ ಯಾವುದೇ ಶಾಸಕರು ಕ್ಷೇತ್ರದಲ್ಲೇ ಇದ್ದರೂ, ಅಥವಾ ಬೆಂಗಳೂರು, ಸಿಂಗಪುರ ಎಲ್ಲಿ ಇದ್ದರೂ ಏನು ಕೂಡ ಪ್ರಯೋಜನ ಇಲ್ಲ. ಇಲ್ಲಿ ನೀರಿನ ಕೊರತೆ ಇದೆ. ಕುಡಿಯುವ ನೀರಿನಲ್ಲಿ ರಾಸಾಯನಿಕ ಮಿಶ್ರಣವಾಗಿ ಕಲುಷಿತವಾಗಿದೆ. ದನಕರುಗಳ ಮೇವಿನ ಸಮಸ್ಯೆ, ಎತ್ತಿನ ಹೊಳೆಯಲ್ಲಿ ಲೂಟಿ, ವಿದ್ಯುತ್‌ ಅಸಮರ್ಪಕ ಪೂರೈಕೆ ಸಮಸ್ಯೆ ಇದೆ. ಜಿಲ್ಲೆಯ ನಿಜವಾದ ಸಮಸ್ಯೆ ಬಗ್ಗೆ ಶಾಸಕರಿಗೆ ಅರಿವಿಲ್ಲ. ಎಲ್ಲರೂ ಅವರವರ ಪ್ರಚಾರಕ್ಕೆ ಒದ್ದಾಡುತ್ತಿರತ್ತಾರೆ, ಇದು ಕೂಡ ಪ್ರಚಾರದ ಒಂದು ವೇದಿಕೆಯಾಗಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ಶಾಸಕರು ಇರುವ ಸಮಯದಲ್ಲಿ ಜಿಲ್ಲೆಯ ಸಮಸ್ಯೆಗೆ ಸ್ಪಂದಿಸಬೇಕು. ಜಿಲ್ಲೆಯಲ್ಲಿ ಐವರು ಶಾಸಕರಿದ್ದಾರೆ. ಅವರಿಗೆ ನಿಜವಾದ ಸಮಸ್ಯೆಯ ಅರಿವಿಲ್ಲ ಎಂದು ಹೇಳಿದ್ದಾರೆ. ಬಿಗ್ ಬಾಸ್‌ ಮನೆಗೆ ಅವರು ಹೋದ ಕಾರಣಕ್ಕೆ ಜನರ ಸಂಪರ್ಕಕ್ಕೆ ಅವರು  ಸಿಗಲ್ಲ ಭ್ರಮೆಯಲ್ಲಿ ಕೂಡ ನಾನು ಇಲ್ಲ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಪ್ರದೀಪ್ ಈಶ್ವರ್ ಹೆಚ್ಚು ದಿನ ಬಿಗ್ ಬಾಸ್  ಮನೆಯಲ್ಲಿ ಇರುವುದಿಲ್ಲ ಎನ್ನಲಾಗಿದೆ. ತಮ್ಮ ನೀಟ್ ಅಕಾಡೆಮಿ, ಪಿಯು ಕಾಲೇಜು ಹಾಗೂ ಕ್ಷೇತ್ರದ ಜವಾಬ್ದಾರಿ ಇರುವುದರಿಂದ ಕೇವಲ ಅತಿಥಿಯಾಗಿ ಮಾತ್ರ ಪ್ರವೇಶ ಪಡೆದಿದ್ದಾರೆ ಎನ್ನಲಾಗಿದೆ. ಆದರೆ ಎಷ್ಟು ದಿನ ಇರ್ತಾರೆ ಎನ್ನುವುದು ಮಾತ್ರ ಇನ್ನು ಕೂಡ ನಿಗೂಡವಾಗಿದೆ.

ಇದನ್ನು ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...