Homeಕರ್ನಾಟಕಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

ಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

- Advertisement -
- Advertisement -

ಬಿಗ್‌ ಬಾಸ್‌ ಕನ್ನಡ 10ನೇ ಅವೃತ್ತಿ ಆರಂಭಗೊಂಡಿದ್ದು, ವಿವಿಧ ಕ್ಷೇತ್ರಗಳ 17 ಮಂದಿ ಸ್ಪರ್ಧಿಗಳು ಬಿಗ್‌ ಬಾಸ್‌ ಮನೆಗೆ ಪ್ರವೇಶ ಮಾಡಿದ್ದಾರೆ. ಆದರೆ ಅಚ್ಚರಿ ಎಂಬಂತೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಅವರು ಬಿಗ್ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಯನ್ನು ಪ್ರವೇಶ ಮಾಡುವ ವಿಡಿಯೋ ಪ್ರೊಮೊವನ್ನು ಕಲರ್ಸ್‌ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಜನರಿಂದ ಆಯ್ಕೆಯಾದ ಶಾಸಕನೋರ್ವ ಜನರ ಸಂಪರ್ಕ ಇಲ್ಲದೆ ಇರುವ ಮನೆಯಲ್ಲಿ 3 ತಿಂಗಳ ಕಾಲ ಇರುವುದು ಎಷ್ಟು ಸರಿ ಎಂಬ ಬಗ್ಗೆ ಪ್ರಶ್ನೆ ಭುಗಿಲೆದ್ದಿದೆ.

ಈ ವಾರ 11 ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಉಳಿದವರನ್ನು ಮುಂದಿನ ವಾರ ಆಯ್ಕೆ ಮಾಡಲಾಗುವುದು ಎಂದು ನಿರೂಪಕ ಕಿಚ್ಚ ಸುದೀಪ್‌ ತಿಳಿಸಿದ್ದರು. ಆದರೆ ಮೊದಲ ದಿನವೇ ಇದ್ದಕ್ಕಿದ್ದಂತೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದಾರೆ.  ನಾನು ನಿನ್ನೆಯೇ ಬಿಗ್‌ ಬಾಸ್‌ ವೇದಿಕೆಗೆ ಬರಬೇಕಿತ್ತು. ಸ್ಪರ್ಧಿಯಾಗಿ ಇಲ್ಲಿ ಸೇರಿದ್ದಕ್ಕೆ ತುಂಬ ಖುಷಿಯಾಗುತ್ತಿದೆ. ಗೆಲ್ಲೋದರಲ್ಲಿ ನಮಗೆ ಕಾಂಪ್ರಮೈಸ್‌ ಇಲ್ಲ ಎಂದು ಸ್ಪರ್ಧಿಗಳ ಮುಂದೆ ಹೇಳಿದ್ದಾರೆ.

ಪ್ರದೀಪ್ ಈಶ್ವರ್‌ ಅವರು ಬಿಗ್‌ ಬಾಸ್‌ ಮನೆಗೆ ಎಂಟ್ರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ ಪೋಸ್ಟ್ ಮಾಡಿದ ಬಾಲು ವಿಲ್‌, ದಯವಿಟ್ಟು ಈಶ್ವರ ಶಾಸಕನನ್ನು ಈ ಕಾರ್ಯಕ್ರಮದಿಂದ ವಾಪಸ್ ಕರೆಸಿ ಇಲ್ಲ ವಜಾಮಾಡಿ. ಜನ ಆರಿಸಿರೋದು ಇವರ ಮಂಗ ಆಟ ನೋಡೊದಕ್ಕೆ ಅಲ್ಲ. ಯಾವನದ್ದೋ ಟಿಅರ್‌ಪಿಗೋಸ್ಕರ ಜನ ಆರಿಸಿಲ್ಲ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್‌ ಅವರು ದಯವಿಟ್ಟು ಗಮನಿಸಿ ಎಂದು ಬರೆದಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿ ಹನುಮೇಶ ಗುಂಡೂರು ಅವರು ಫೇಸ್ಬುಕ್ ಪೋಸ್ಟ್ ಹಾಕಿದ್ದು, ಜನಪ್ರತಿನಿಧಿ ಆಗಿರುವ ವ್ಯಕ್ತಿ ಈ ತರಹ ಜನರಿಗೆ ಅನುಕೂಲ ಇಲ್ಲದೇ ಇರುವ ಕಾರ್ಯಕ್ರಮಕ್ಕೆ ಹೋಗೋದು ಜನರಿಗೆ ಮಾಡುವ ದ್ರೋಹ ಎಂದು ಬರೆದಿದ್ದಾರೆ.

ಈ ಬಗ್ಗೆ ಫೇಸ್ಬುಕ್ ಪೋಸ್ಟ್‌ ಹಾಕಿದ ಸುಭಾಷ್ ರಾಜಮಾನೆ, ಸಂವಿಧಾನಬದ್ದ ಚುನಾವಣೆಗಳ ಮೂಲಕ ಪ್ರಜೆಗಳಿಂದ ಆಯ್ಕೆಯಾದ ಶಾಸಕರೊಬ್ಬರು ಬಿಗ್ ಬಾಸ್  ಮನೆಯಲ್ಲಿ ಮೂರು ತಿಂಗಳು ಬಂಧಿಯಾಗುವುದು ಎಷ್ಟು ಸರಿ? ಅಲ್ಲಿ ನಡೆಯುವ ಹುಚ್ಚಾಟಗಳಿಗೆ ಕೊನೆಯೇ ಇಲ್ಲ. ಇನ್ನು ಬಿಗ್ ಬಾಸ್ ಮನೆಗೆ ಹೋಗಿ ಬಂದವರು ಹುಚ್ಚರಂತೆ ಆಡುವುದನ್ನು ನೋಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ನಾನು ಗೌರಿ.ಕಾಂ ಜೊತೆ ಮಾತನಾಡಿದ ಚಿಕ್ಕಬಳ್ಳಾಪರ ಕ್ಷೇತ್ರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾದ ಆಂಜನೇಯ ರೆಡ್ಡಿ ಆರ್‌, ಶಾಸಕರು ಹೋಗಿದ್ದು ತಪ್ಪು ಅಥವಾ ಇಲ್ಲಿರುವ ಇತರ ಶಾಸಕರ ದೊಡ್ಡ ಕೆಲಸ ಮಾಡುತ್ತಾರೆ ಎನ್ನಲು ಸಾಧ್ಯವಿಲ್ಲ. ಕ್ಷೇತ್ರದ ಸಮಸ್ಯೆ ಬಗ್ಗೆ ಯಾರೂ ಕೂಡ ಗಮನ ಹರಿಸುವುದು ಕಂಡು ಬಂದಿಲ್ಲ. ಆದ್ದರಿಂದ ಯಾವುದೇ ಶಾಸಕರು ಕ್ಷೇತ್ರದಲ್ಲೇ ಇದ್ದರೂ, ಅಥವಾ ಬೆಂಗಳೂರು, ಸಿಂಗಪುರ ಎಲ್ಲಿ ಇದ್ದರೂ ಏನು ಕೂಡ ಪ್ರಯೋಜನ ಇಲ್ಲ. ಇಲ್ಲಿ ನೀರಿನ ಕೊರತೆ ಇದೆ. ಕುಡಿಯುವ ನೀರಿನಲ್ಲಿ ರಾಸಾಯನಿಕ ಮಿಶ್ರಣವಾಗಿ ಕಲುಷಿತವಾಗಿದೆ. ದನಕರುಗಳ ಮೇವಿನ ಸಮಸ್ಯೆ, ಎತ್ತಿನ ಹೊಳೆಯಲ್ಲಿ ಲೂಟಿ, ವಿದ್ಯುತ್‌ ಅಸಮರ್ಪಕ ಪೂರೈಕೆ ಸಮಸ್ಯೆ ಇದೆ. ಜಿಲ್ಲೆಯ ನಿಜವಾದ ಸಮಸ್ಯೆ ಬಗ್ಗೆ ಶಾಸಕರಿಗೆ ಅರಿವಿಲ್ಲ. ಎಲ್ಲರೂ ಅವರವರ ಪ್ರಚಾರಕ್ಕೆ ಒದ್ದಾಡುತ್ತಿರತ್ತಾರೆ, ಇದು ಕೂಡ ಪ್ರಚಾರದ ಒಂದು ವೇದಿಕೆಯಾಗಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ಶಾಸಕರು ಇರುವ ಸಮಯದಲ್ಲಿ ಜಿಲ್ಲೆಯ ಸಮಸ್ಯೆಗೆ ಸ್ಪಂದಿಸಬೇಕು. ಜಿಲ್ಲೆಯಲ್ಲಿ ಐವರು ಶಾಸಕರಿದ್ದಾರೆ. ಅವರಿಗೆ ನಿಜವಾದ ಸಮಸ್ಯೆಯ ಅರಿವಿಲ್ಲ ಎಂದು ಹೇಳಿದ್ದಾರೆ. ಬಿಗ್ ಬಾಸ್‌ ಮನೆಗೆ ಅವರು ಹೋದ ಕಾರಣಕ್ಕೆ ಜನರ ಸಂಪರ್ಕಕ್ಕೆ ಅವರು  ಸಿಗಲ್ಲ ಭ್ರಮೆಯಲ್ಲಿ ಕೂಡ ನಾನು ಇಲ್ಲ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಪ್ರದೀಪ್ ಈಶ್ವರ್ ಹೆಚ್ಚು ದಿನ ಬಿಗ್ ಬಾಸ್  ಮನೆಯಲ್ಲಿ ಇರುವುದಿಲ್ಲ ಎನ್ನಲಾಗಿದೆ. ತಮ್ಮ ನೀಟ್ ಅಕಾಡೆಮಿ, ಪಿಯು ಕಾಲೇಜು ಹಾಗೂ ಕ್ಷೇತ್ರದ ಜವಾಬ್ದಾರಿ ಇರುವುದರಿಂದ ಕೇವಲ ಅತಿಥಿಯಾಗಿ ಮಾತ್ರ ಪ್ರವೇಶ ಪಡೆದಿದ್ದಾರೆ ಎನ್ನಲಾಗಿದೆ. ಆದರೆ ಎಷ್ಟು ದಿನ ಇರ್ತಾರೆ ಎನ್ನುವುದು ಮಾತ್ರ ಇನ್ನು ಕೂಡ ನಿಗೂಡವಾಗಿದೆ.

ಇದನ್ನು ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...