Homeಮುಖಪುಟಹಿಂದಿ ಬಿಗ್ ಬಾಸ್ 13 ನೇ ಸೀಸನ್ ವಿನ್ನರ್‌, ನಟ ಸಿದ್ದಾರ್ಥ್ ಶುಕ್ಲಾ(40) ನಿಧನ

ಹಿಂದಿ ಬಿಗ್ ಬಾಸ್ 13 ನೇ ಸೀಸನ್ ವಿನ್ನರ್‌, ನಟ ಸಿದ್ದಾರ್ಥ್ ಶುಕ್ಲಾ(40) ನಿಧನ

- Advertisement -
- Advertisement -

ಬಾಲಿಕ ವಧು ಧಾರಾವಾಹಿ ಮೂಲಕ ಜನಪ್ರಿಯತೆ ಗಳಿಸಿದ್ದ ಹಿಂದಿ ನಟ ಮತ್ತು ಮಾಡೆಲ್ ಸಿದ್ದಾರ್ಥ್ ಶುಕ್ಲಾ ಗುರುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇವಲ 40ನೇ ವಯಸ್ಸಿನಲ್ಲಿಯೇ ವಿಧಿವಶರಾಗಿದ್ದಾರೆ.

ತೀವ್ರ ಎದೆಯ ನೋವಿನಿಂದ ಬಳಲುತಿದ್ದ ಸಿದ್ಧಾರ್ಥ್ ಶುಕ್ಲಾ ಅವರನ್ನು ಇಂದು ಬೆಳಗ್ಗೆ ಮುಂಬೈನ ಕೂಪರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಕೂಪರ್ ಆಸ್ಪತ್ರೆಯ ಡಾಕ್ಟರ್ ಸುಖದೇವ್ ದೃಢಪಡಿಸಿದ್ದಾರೆ.

ಸಿದ್ಧಾರ್ಥ್ ಶುಕ್ಲಾ ಅವರ ಹಠಾತ್ ಸಾವಿಗೆ ಟೆಲಿವಿಷನ್ ನಟರು, ಬಾಲಿವುಡ್ ತೀವ್ರ ಸಂತಾಪ ಸೂಚಿಸಿದ್ದಾರೆ. ಸಹೋದ್ಯೋಗಿಗಳಾದ ಕಪಿಲ್ ಶರ್ಮಾ, ದಾರಾ ಸಿಂಗ್, ಸುನಿಲ್ ಗ್ರೋವರ್, ದೇವೋಲೀನಾ ಭಟ್ಟಾಚಾರ್ಜಿ, ಹಿಮಾಂಶಿ ಖುರಾನಾ, ಮುನ್ಮುನ್ ದತ್ತಾ ಮತ್ತು ಇತರರು ಸಂತಾಪ ಸೂಚಿಸಿದ್ದಾರೆ.

ನಟಿ ಮಾಧುರಿ ದೀಕ್ಷಿತ್, ಝರೀನ್ ಖಾನ್,  ನಟ ಸೋನುಸೂದ್, ಮನೋಜ್ ಬಾಜ್ಪೇಯಿ, ಅಜಯ್ ದೇವಗನ್ ಸೇರಿದಂತೆ ಬಾಲಿವುಡ್ ನಟ, ನಟರು ಅಗಲಿದ ಕಲಾವಿದನಿಗೆ ಗೌರವ ಸಲ್ಲಿಸಿದ್ದಾರೆ.

ಇದನ್ನೂ ಓದಿ: ನೆಹರು-ಗಾಂಧಿ ಕುಟುಂಬದ ವಿರುದ್ಧ ಅವಹೇಳನಕಾರಿ ವಿಡಿಯೊ: ನಟಿ ಪಾಯಲ್ ರೋಹ್ಟಗಿ ವಿರುದ್ಧ ಪ್ರಕರಣ

2019 ರಲ್ಲಿ ಬಿಗ್ ಬಾಸ್ 13 ನೇ ಆವೃತ್ತಿ ಮತ್ತು ಖತ್ರೋನ್ ಕೆ ಖಿಲಾಡಿ 7ನೇ ಆವೃತ್ತಿ ಗೆದ್ದಿದ್ದ ಸಿದ್ದಾರ್ಥ್ ಶುಕ್ಲಾ ಅವರು ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಸಿದ್ಧಾರ್ಥ್ ಶುಕ್ಲಾ 2008 ರ ಟಿವಿ ಶೋ ’ಬಾಬುಲ್ ಕಾ ಆಂಗನ್ ಚೂಟೇ ನಾ’ ಧಾರವಾಹಿ ಮೂಲಕ ನಟನಾ ರಂಗಕ್ಕೆ ಪಾದಾರ್ಪಣೆ ಮಾಡಿದರು. ಶುಕ್ಲಾ ಅವರು ಜಾನೆ ಪೆಹ್ಚಾನೆ ಸೆ … ಯೆ ಅಜ್ನಬ್ಬಿ, ಲವ್ ಯು ಜಿಂದಗಿ, ಸಿಐಡಿ ಮತ್ತು ದಿಲ್ ಸೆ ದಿಲ್ ತಕ್ ಸೇರಿ ಹಲವು ಧಾರವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ದಿವಂಗತ ನಟಿ ಪ್ರತ್ಯೂಷಾ ಬ್ಯಾನರ್ಜಿಯೊಂದಿಗೆ ಕಾಣಿಸಿಕೊಂಡ ಬಾಲಿಕಾ ವಧು ಧಾರವಾಹಿಯಲ್ಲಿನ ಅವರ ಪಾತ್ರ ಹೆಚ್ಚಿನ ಜನಪ್ರಿಯತೆ ತಂದುಕೊಟ್ಟಿತು.

ಕಿರುತೆರೆ ಜೊತೆಗೆ ಹಲವು ಬಾಲಿವುಡ್ ಚಲನಚಿತ್ರಗಳಲ್ಲಿ ಪೋಷಕ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಆಲಿಯಾ ಭಟ್ ಮತ್ತು ವರುಣ್ ಧವನ್ ಅಭಿನಯದ ಹಂಪ್ಟಿ ಶರ್ಮಾ ಕಿ ದುಲ್ಹಾನಿಯಾ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಆಲ್ಬಂಬ್ ಸಾಂಗ್‌ಗಳಲ್ಲಿಯೂ ಸಿದ್ಧಾರ್ಥ್ ಶುಕ್ಲಾ ನಟಿಸಿದ್ದರು.


ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...