Homeಮುಖಪುಟಹಿಂದಿ ಬಿಗ್ ಬಾಸ್ 13 ನೇ ಸೀಸನ್ ವಿನ್ನರ್‌, ನಟ ಸಿದ್ದಾರ್ಥ್ ಶುಕ್ಲಾ(40) ನಿಧನ

ಹಿಂದಿ ಬಿಗ್ ಬಾಸ್ 13 ನೇ ಸೀಸನ್ ವಿನ್ನರ್‌, ನಟ ಸಿದ್ದಾರ್ಥ್ ಶುಕ್ಲಾ(40) ನಿಧನ

- Advertisement -
- Advertisement -

ಬಾಲಿಕ ವಧು ಧಾರಾವಾಹಿ ಮೂಲಕ ಜನಪ್ರಿಯತೆ ಗಳಿಸಿದ್ದ ಹಿಂದಿ ನಟ ಮತ್ತು ಮಾಡೆಲ್ ಸಿದ್ದಾರ್ಥ್ ಶುಕ್ಲಾ ಗುರುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇವಲ 40ನೇ ವಯಸ್ಸಿನಲ್ಲಿಯೇ ವಿಧಿವಶರಾಗಿದ್ದಾರೆ.

ತೀವ್ರ ಎದೆಯ ನೋವಿನಿಂದ ಬಳಲುತಿದ್ದ ಸಿದ್ಧಾರ್ಥ್ ಶುಕ್ಲಾ ಅವರನ್ನು ಇಂದು ಬೆಳಗ್ಗೆ ಮುಂಬೈನ ಕೂಪರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಕೂಪರ್ ಆಸ್ಪತ್ರೆಯ ಡಾಕ್ಟರ್ ಸುಖದೇವ್ ದೃಢಪಡಿಸಿದ್ದಾರೆ.

ಸಿದ್ಧಾರ್ಥ್ ಶುಕ್ಲಾ ಅವರ ಹಠಾತ್ ಸಾವಿಗೆ ಟೆಲಿವಿಷನ್ ನಟರು, ಬಾಲಿವುಡ್ ತೀವ್ರ ಸಂತಾಪ ಸೂಚಿಸಿದ್ದಾರೆ. ಸಹೋದ್ಯೋಗಿಗಳಾದ ಕಪಿಲ್ ಶರ್ಮಾ, ದಾರಾ ಸಿಂಗ್, ಸುನಿಲ್ ಗ್ರೋವರ್, ದೇವೋಲೀನಾ ಭಟ್ಟಾಚಾರ್ಜಿ, ಹಿಮಾಂಶಿ ಖುರಾನಾ, ಮುನ್ಮುನ್ ದತ್ತಾ ಮತ್ತು ಇತರರು ಸಂತಾಪ ಸೂಚಿಸಿದ್ದಾರೆ.

ನಟಿ ಮಾಧುರಿ ದೀಕ್ಷಿತ್, ಝರೀನ್ ಖಾನ್,  ನಟ ಸೋನುಸೂದ್, ಮನೋಜ್ ಬಾಜ್ಪೇಯಿ, ಅಜಯ್ ದೇವಗನ್ ಸೇರಿದಂತೆ ಬಾಲಿವುಡ್ ನಟ, ನಟರು ಅಗಲಿದ ಕಲಾವಿದನಿಗೆ ಗೌರವ ಸಲ್ಲಿಸಿದ್ದಾರೆ.

ಇದನ್ನೂ ಓದಿ: ನೆಹರು-ಗಾಂಧಿ ಕುಟುಂಬದ ವಿರುದ್ಧ ಅವಹೇಳನಕಾರಿ ವಿಡಿಯೊ: ನಟಿ ಪಾಯಲ್ ರೋಹ್ಟಗಿ ವಿರುದ್ಧ ಪ್ರಕರಣ

2019 ರಲ್ಲಿ ಬಿಗ್ ಬಾಸ್ 13 ನೇ ಆವೃತ್ತಿ ಮತ್ತು ಖತ್ರೋನ್ ಕೆ ಖಿಲಾಡಿ 7ನೇ ಆವೃತ್ತಿ ಗೆದ್ದಿದ್ದ ಸಿದ್ದಾರ್ಥ್ ಶುಕ್ಲಾ ಅವರು ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಸಿದ್ಧಾರ್ಥ್ ಶುಕ್ಲಾ 2008 ರ ಟಿವಿ ಶೋ ’ಬಾಬುಲ್ ಕಾ ಆಂಗನ್ ಚೂಟೇ ನಾ’ ಧಾರವಾಹಿ ಮೂಲಕ ನಟನಾ ರಂಗಕ್ಕೆ ಪಾದಾರ್ಪಣೆ ಮಾಡಿದರು. ಶುಕ್ಲಾ ಅವರು ಜಾನೆ ಪೆಹ್ಚಾನೆ ಸೆ … ಯೆ ಅಜ್ನಬ್ಬಿ, ಲವ್ ಯು ಜಿಂದಗಿ, ಸಿಐಡಿ ಮತ್ತು ದಿಲ್ ಸೆ ದಿಲ್ ತಕ್ ಸೇರಿ ಹಲವು ಧಾರವಾಹಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ದಿವಂಗತ ನಟಿ ಪ್ರತ್ಯೂಷಾ ಬ್ಯಾನರ್ಜಿಯೊಂದಿಗೆ ಕಾಣಿಸಿಕೊಂಡ ಬಾಲಿಕಾ ವಧು ಧಾರವಾಹಿಯಲ್ಲಿನ ಅವರ ಪಾತ್ರ ಹೆಚ್ಚಿನ ಜನಪ್ರಿಯತೆ ತಂದುಕೊಟ್ಟಿತು.

ಕಿರುತೆರೆ ಜೊತೆಗೆ ಹಲವು ಬಾಲಿವುಡ್ ಚಲನಚಿತ್ರಗಳಲ್ಲಿ ಪೋಷಕ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಆಲಿಯಾ ಭಟ್ ಮತ್ತು ವರುಣ್ ಧವನ್ ಅಭಿನಯದ ಹಂಪ್ಟಿ ಶರ್ಮಾ ಕಿ ದುಲ್ಹಾನಿಯಾ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಆಲ್ಬಂಬ್ ಸಾಂಗ್‌ಗಳಲ್ಲಿಯೂ ಸಿದ್ಧಾರ್ಥ್ ಶುಕ್ಲಾ ನಟಿಸಿದ್ದರು.


ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....