Homeಮುಖಪುಟಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ...

ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ಈ ಭೀಕರ ವಿಧ್ವಂಸಕ ಕೃತ್ಯಕ್ಕೆ ಕಾರಣರಾದ ಪೊಲೀಸರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೋರಾಟಗಾರ ಕನ್ಹಯ್ಯ ಕುಮಾರ್‌ ಆಗ್ರಹಿಸಿದ್ದಾರೆ.

- Advertisement -
- Advertisement -

ಬಿಹಾರದ ವಿಧಾನಸಭಾ ಚುನಾವಣೆಗೆ ನಾಳೆ ಮೊದಲ ಹಂತದ ಮತದಾನ ಆರಂಭವಾಗಲಿದೆ. ಚುನಾವಣೆ ಇಷ್ಟು ಸಮೀಪವಿರುವಾಗಲೇ ಬಿಹಾರದಲ್ಲಿ ದುರಂತಗಳು ಶುರುವಾಗಿವೆ. ಮುಂಗೆರ್ ಪಟ್ಟಣದಲ್ಲಿ ದುರ್ಗಾ ಮೂರ್ತಿಗಳ ವಿಸರ್ಜನೆ ಮೇಳೆ ಪೊಲೀಸರು ಮತ್ತು ಜನಸಮೂಹದ ನಡುವೆ ಗುಂಪು ಘರ್ಷಣೆ ಉಂಟಾಗಿದೆ.

ಗುಂಪು ಘರ್ಷಣೆಯಲ್ಲಿ ಬುಲೆಟ್ ತಾಗಿ 18 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 20 ಮಂದಿ ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ ಕೆಲವರು ಬಂದೂಕುಗಳನ್ನು ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರ್ಗಾ ವಿಗ್ರಹಗಳ ವಿಸರ್ಜನೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಜನ ಮತ್ತು ಕೊತ್ವಾಲಿ ಪೊಲೀಸ್ ಠಾಣಾ ಸಿಬ್ಬಂದಿ ನಡುವೆ ವಾಗ್ವಾದ ನಡೆದು, ನಂತರ ಹಿಂಸಾಚಾರ ಆರಂಭವಾಗಿದೆ. ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘರ್ಷಣೆ ತಡೆಯಲು ಮೊದಲು ಪೊಲೀಸರು ಅಶ್ರುವಾಯು ಬಳಸಿದರು. ಆದರೆ ಜನಸಮೂಹವನ್ನು ನಿಯಂತ್ರಣಕ್ಕೆ ತರುವಲ್ಲಿ ಅವು ವಿಫಲವಾದ ಪರಿಣಾಮ ಪೊಲೀಸರು ಗುಂಡು ಹಾರಿಸಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

“ಜನಸಮೂಹ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಗುಂಡು ಹಾರಿಸಿದ್ದು ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾಯಿತು. ಘಟನೆಯಲ್ಲಿ 20 ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ” ಎಂದು ಮುಂಗೆರ್ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಹೇಳಿದ್ದಾರೆ.

“ಈ ಬಾರಿ ಮುಂಗೆರ್‌ನಲ್ಲಿ 53 ಕ್ಕೂ ಹೆಚ್ಚು ದುರ್ಗಾ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ, ಅದರಲ್ಲಿ 15 ವಿಗ್ರಹಗಳನ್ನು ದೀನ್‌ದಯಾಳ್ ಚೌಕ್‌ನಲ್ಲಿ ಗಂಗಾ ನದಿಯಲ್ಲಿ ಮುಳುಗಿಸಲು ಸಂಭ್ರಮದಿಂದ ತೆಗೆದುಕೊಂಡು ಹೋಗಲಾಗುತ್ತಿತ್ತು” ಎಂದು ದುರ್ಗಾ ಐಡೆಲ್ ಇಮ್ಮರ್ಶನ್ ಸಮಿತಿಯ ಸದಸ್ಯ ಪ್ರಕಾಶ್ ಭಗತ್ ಹೇಳಿದ್ದಾರೆ.

“ಸಾಂಪ್ರದಾಯಿಕವಾಗಿ, ವಿಜಯದಶಮಿ ಹಬ್ಬದ ಮೂರು ದಿನಗಳ ನಂತರ ವಿಗ್ರಹಗಳನ್ನು ವಿಸರ್ಜಿಸಲಾಗುತ್ತದೆ. ಆದರೆ, ಈ ಬಾರಿ ಬುಧವಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇರುವ ಕಾರಣ,  ಮಂಗಳವಾರ ಬೆಳಿಗ್ಗೆ 5 ಗಂಟೆಯೊಳಗೆ ದುರ್ಗಾ ವಿಸರ್ಜನೆಗೆ ಅಧಿಕಾರಿಗಳು ಒತ್ತಾಯಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ದುರ್ಗಾ ಪೂಜಾ ಸಂಘಟಕರು ದುರ್ಗಾ ಮೂರ್ತಿ ವಿಸರ್ಜನೆಗೆ ತೆರಳುವ ಸಂದರ್ಭದಲ್ಲಿ ಜೋರಾಗಿ ಡಿಜೆ ಸಂಗೀತ ಹಾಕಲಾಗಿತ್ತು. ರಾತ್ರಿ 11.50 ರ ಸುಮಾರಿಗೆ ಪೊಲೀಸ್ ಅಧಿಕಾರಿಗಳು ವಿಗ್ರಹಗಳನ್ನು ಹೆಗಲ ಮೇಲೆ ಹೊತ್ತುಕೊಂಡಿದ್ದ ನಾಲ್ವರನ್ನು ಥಳಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ದುರಂತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

“ಏಳು ಜನರಿಗೆ ಬುಲೆಟ್ ತಾಗಿ ಗಾಯಗಳಾಗಿದ್ದು, ಅವರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಒಬ್ಬರನ್ನು ಉತ್ತಮ ಚಿಕಿತ್ಸೆಗಾಗಿ ಭಾಗಲ್‌ಪುರಕ್ಕೆ ಕರೆದೊಯ್ಯಲಾಗಿದೆ” ಎಂದು ಮುಂಗೆರ್ ಸದರ್ ಆಸ್ಪತ್ರೆಯ ಉಪ ಅಧೀಕ್ಷಕ ಡಾ. ನಿರಂಜನ್ ಹೇಳಿದ್ದಾರೆ. ಮೃತ ಅನುರಾಗ್ ಕುಮಾರ್ ತಲೆಗೆ ಗುಂಡು ತಾಗಿ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿ ಸಾಧನಾ ಕುಮಾರ್ ಹೇಳಿದ್ದಾರೆ.

ಘರ್ಷಣೆಯಲ್ಲಿ ಸಂಗರ್‌ಪುರ, ಕೊತ್ವಾಲಿ, ಕಾಸಿಮ್ ಬಜಾರ್, ಬಸುದೇಪುರ ಪೊಲೀಸ್ ಠಾಣೆಗಳ ಎಸ್‌ಎಚ್‌ಒಗಳು ಸೇರಿದಂತೆ ಕನಿಷ್ಠ 20 ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ಘಟನೆ ನಂತರ ಜಿಲ್ಲೆಯ ಬಹುತೇಕ ಪೊಲೀಸ್ ಪಡೆಗಳನ್ನು ಕೊತ್ವಾಲಿ ಕಡೆಗೆ ಕಳುಹಿಸಲಾಗಿದೆ. ನಂತರ ಬಿಹಾರ ಮಿಲಿಟರಿ ಪೊಲೀಸ್ (ಬಿಎಂಪಿ) ಮತ್ತು ಅರೆಸೈನಿಕ ಪಡೆಗಳ ಸಿಬ್ಬಂದಿಯನ್ನು ಘರ್ಷಣಾ ಸ್ಥಳದಲ್ಲಿ ನಿಯೋಜಿಸಲಾಗಿದೆ. ಬಿಗಿ ಭದ್ರತೆಯ ನಡುವೆಯೂ ಮುಂಗೆರ್ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಪರಿಸ್ಥಿತಿ ಉದ್ವಿಗ್ನವಾಗಿದೆ.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಕುರಿತು ಹೋರಾಟಗಾರ ಕನ್ಹಯ್ಯ ಕುಮಾರ್‌ ಟ್ವೀಟ್ ಮಾಡಿದ್ದಾರೆ.

“ನಿನ್ನೆ ರಾತ್ರಿ ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಪೊಲೀಸರು ಅನಾಗರಿಕ ಲಾಠಿ ಚಾರ್ಜ್ ನಡೆಸಿ, ನಂತರ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ. ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಜನರು ಹೇಳುತ್ತಾರೆ. ಈ ಭೀಕರ ವಿಧ್ವಂಸಕ ಕೃತ್ಯಕ್ಕೆ ಕಾರಣರಾದ ಪೊಲೀಸರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...