Homeಮುಖಪುಟಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ...

ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ಈ ಭೀಕರ ವಿಧ್ವಂಸಕ ಕೃತ್ಯಕ್ಕೆ ಕಾರಣರಾದ ಪೊಲೀಸರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೋರಾಟಗಾರ ಕನ್ಹಯ್ಯ ಕುಮಾರ್‌ ಆಗ್ರಹಿಸಿದ್ದಾರೆ.

- Advertisement -
- Advertisement -

ಬಿಹಾರದ ವಿಧಾನಸಭಾ ಚುನಾವಣೆಗೆ ನಾಳೆ ಮೊದಲ ಹಂತದ ಮತದಾನ ಆರಂಭವಾಗಲಿದೆ. ಚುನಾವಣೆ ಇಷ್ಟು ಸಮೀಪವಿರುವಾಗಲೇ ಬಿಹಾರದಲ್ಲಿ ದುರಂತಗಳು ಶುರುವಾಗಿವೆ. ಮುಂಗೆರ್ ಪಟ್ಟಣದಲ್ಲಿ ದುರ್ಗಾ ಮೂರ್ತಿಗಳ ವಿಸರ್ಜನೆ ಮೇಳೆ ಪೊಲೀಸರು ಮತ್ತು ಜನಸಮೂಹದ ನಡುವೆ ಗುಂಪು ಘರ್ಷಣೆ ಉಂಟಾಗಿದೆ.

ಗುಂಪು ಘರ್ಷಣೆಯಲ್ಲಿ ಬುಲೆಟ್ ತಾಗಿ 18 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 20 ಮಂದಿ ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ ಕೆಲವರು ಬಂದೂಕುಗಳನ್ನು ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರ್ಗಾ ವಿಗ್ರಹಗಳ ವಿಸರ್ಜನೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಜನ ಮತ್ತು ಕೊತ್ವಾಲಿ ಪೊಲೀಸ್ ಠಾಣಾ ಸಿಬ್ಬಂದಿ ನಡುವೆ ವಾಗ್ವಾದ ನಡೆದು, ನಂತರ ಹಿಂಸಾಚಾರ ಆರಂಭವಾಗಿದೆ. ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘರ್ಷಣೆ ತಡೆಯಲು ಮೊದಲು ಪೊಲೀಸರು ಅಶ್ರುವಾಯು ಬಳಸಿದರು. ಆದರೆ ಜನಸಮೂಹವನ್ನು ನಿಯಂತ್ರಣಕ್ಕೆ ತರುವಲ್ಲಿ ಅವು ವಿಫಲವಾದ ಪರಿಣಾಮ ಪೊಲೀಸರು ಗುಂಡು ಹಾರಿಸಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

“ಜನಸಮೂಹ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಗುಂಡು ಹಾರಿಸಿದ್ದು ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾಯಿತು. ಘಟನೆಯಲ್ಲಿ 20 ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ” ಎಂದು ಮುಂಗೆರ್ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಹೇಳಿದ್ದಾರೆ.

“ಈ ಬಾರಿ ಮುಂಗೆರ್‌ನಲ್ಲಿ 53 ಕ್ಕೂ ಹೆಚ್ಚು ದುರ್ಗಾ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ, ಅದರಲ್ಲಿ 15 ವಿಗ್ರಹಗಳನ್ನು ದೀನ್‌ದಯಾಳ್ ಚೌಕ್‌ನಲ್ಲಿ ಗಂಗಾ ನದಿಯಲ್ಲಿ ಮುಳುಗಿಸಲು ಸಂಭ್ರಮದಿಂದ ತೆಗೆದುಕೊಂಡು ಹೋಗಲಾಗುತ್ತಿತ್ತು” ಎಂದು ದುರ್ಗಾ ಐಡೆಲ್ ಇಮ್ಮರ್ಶನ್ ಸಮಿತಿಯ ಸದಸ್ಯ ಪ್ರಕಾಶ್ ಭಗತ್ ಹೇಳಿದ್ದಾರೆ.

“ಸಾಂಪ್ರದಾಯಿಕವಾಗಿ, ವಿಜಯದಶಮಿ ಹಬ್ಬದ ಮೂರು ದಿನಗಳ ನಂತರ ವಿಗ್ರಹಗಳನ್ನು ವಿಸರ್ಜಿಸಲಾಗುತ್ತದೆ. ಆದರೆ, ಈ ಬಾರಿ ಬುಧವಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇರುವ ಕಾರಣ,  ಮಂಗಳವಾರ ಬೆಳಿಗ್ಗೆ 5 ಗಂಟೆಯೊಳಗೆ ದುರ್ಗಾ ವಿಸರ್ಜನೆಗೆ ಅಧಿಕಾರಿಗಳು ಒತ್ತಾಯಿಸಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿಗೆ ಈರುಳ್ಳಿ ಹಾರ ಹಾಕಿ ಪ್ರತಿಭಟಿಸಿದ ತೇಜಸ್ವಿ ಯಾದವ್!

ದುರ್ಗಾ ಪೂಜಾ ಸಂಘಟಕರು ದುರ್ಗಾ ಮೂರ್ತಿ ವಿಸರ್ಜನೆಗೆ ತೆರಳುವ ಸಂದರ್ಭದಲ್ಲಿ ಜೋರಾಗಿ ಡಿಜೆ ಸಂಗೀತ ಹಾಕಲಾಗಿತ್ತು. ರಾತ್ರಿ 11.50 ರ ಸುಮಾರಿಗೆ ಪೊಲೀಸ್ ಅಧಿಕಾರಿಗಳು ವಿಗ್ರಹಗಳನ್ನು ಹೆಗಲ ಮೇಲೆ ಹೊತ್ತುಕೊಂಡಿದ್ದ ನಾಲ್ವರನ್ನು ಥಳಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ದುರಂತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

“ಏಳು ಜನರಿಗೆ ಬುಲೆಟ್ ತಾಗಿ ಗಾಯಗಳಾಗಿದ್ದು, ಅವರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಒಬ್ಬರನ್ನು ಉತ್ತಮ ಚಿಕಿತ್ಸೆಗಾಗಿ ಭಾಗಲ್‌ಪುರಕ್ಕೆ ಕರೆದೊಯ್ಯಲಾಗಿದೆ” ಎಂದು ಮುಂಗೆರ್ ಸದರ್ ಆಸ್ಪತ್ರೆಯ ಉಪ ಅಧೀಕ್ಷಕ ಡಾ. ನಿರಂಜನ್ ಹೇಳಿದ್ದಾರೆ. ಮೃತ ಅನುರಾಗ್ ಕುಮಾರ್ ತಲೆಗೆ ಗುಂಡು ತಾಗಿ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿ ಸಾಧನಾ ಕುಮಾರ್ ಹೇಳಿದ್ದಾರೆ.

ಘರ್ಷಣೆಯಲ್ಲಿ ಸಂಗರ್‌ಪುರ, ಕೊತ್ವಾಲಿ, ಕಾಸಿಮ್ ಬಜಾರ್, ಬಸುದೇಪುರ ಪೊಲೀಸ್ ಠಾಣೆಗಳ ಎಸ್‌ಎಚ್‌ಒಗಳು ಸೇರಿದಂತೆ ಕನಿಷ್ಠ 20 ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ಘಟನೆ ನಂತರ ಜಿಲ್ಲೆಯ ಬಹುತೇಕ ಪೊಲೀಸ್ ಪಡೆಗಳನ್ನು ಕೊತ್ವಾಲಿ ಕಡೆಗೆ ಕಳುಹಿಸಲಾಗಿದೆ. ನಂತರ ಬಿಹಾರ ಮಿಲಿಟರಿ ಪೊಲೀಸ್ (ಬಿಎಂಪಿ) ಮತ್ತು ಅರೆಸೈನಿಕ ಪಡೆಗಳ ಸಿಬ್ಬಂದಿಯನ್ನು ಘರ್ಷಣಾ ಸ್ಥಳದಲ್ಲಿ ನಿಯೋಜಿಸಲಾಗಿದೆ. ಬಿಗಿ ಭದ್ರತೆಯ ನಡುವೆಯೂ ಮುಂಗೆರ್ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಪರಿಸ್ಥಿತಿ ಉದ್ವಿಗ್ನವಾಗಿದೆ.

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಕುರಿತು ಹೋರಾಟಗಾರ ಕನ್ಹಯ್ಯ ಕುಮಾರ್‌ ಟ್ವೀಟ್ ಮಾಡಿದ್ದಾರೆ.

“ನಿನ್ನೆ ರಾತ್ರಿ ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಪೊಲೀಸರು ಅನಾಗರಿಕ ಲಾಠಿ ಚಾರ್ಜ್ ನಡೆಸಿ, ನಂತರ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ. ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಜನರು ಹೇಳುತ್ತಾರೆ. ಈ ಭೀಕರ ವಿಧ್ವಂಸಕ ಕೃತ್ಯಕ್ಕೆ ಕಾರಣರಾದ ಪೊಲೀಸರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...