Homeಮುಖಪುಟಬಿಹಾರ | ಅಕ್ರಮ ಮದ್ಯ ಸೇವಿಸಿ ಮತ್ತೆ 10 ಮಂದಿ ಮೃತ; ಸಾವಿನ ಸಂಖ್ಯೆ 35ಕ್ಕೆ...

ಬಿಹಾರ | ಅಕ್ರಮ ಮದ್ಯ ಸೇವಿಸಿ ಮತ್ತೆ 10 ಮಂದಿ ಮೃತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ

- Advertisement -
- Advertisement -

ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಸೇವಿಸಿ ಮತ್ತೆ ಹತ್ತು ಮಂದಿ ಸಾವನ್ನಪ್ಪಿದ್ದು, ಕಳ್ಳಭಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸಿವಾನ್‌ನಲ್ಲಿ 28 ಸಾವುಗಳಾಗಿದ್ದು, ಸರನ್‌ನಲ್ಲಿ ಏಳು ಸಾವುಗಳು ವರದಿಯಾಗಿವೆ ಎಂದು ಪೊಲೀಸ್ ಉಪ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ನೀಲೇಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.

“ಸಿವಾನ್ ಜಿಲ್ಲೆಯ ಮಘರ್ ಮತ್ತು ಔರಿಯಾ ಪಂಚಾಯತ್‌ಗಳಲ್ಲಿ ಇದುವರೆಗೆ 28 ​​ಜನರು ಶಂಕಿತ ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಸರನ್ ಜಿಲ್ಲೆಯ ಮಶ್ರಖ್ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ರಾಹಿಂಪುರ ಪ್ರದೇಶದಲ್ಲಿ ಏಳು ಮಂದಿ ಶಂಕಿತ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ” ಎಂದು ಡಿಐಜಿ ಶುಕ್ರವಾರ ಪಿಟಿಐಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುಮಾರು ಎಂಟು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರವು ರಾಜ್ಯದಲ್ಲಿ ಮದ್ಯದ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ದುರಂತವು ಮದ್ಯ ನಿಷೇಧದ ಪರಿಣಾಮಕಾರಿತ್ವದ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಎರಡೂ ಜಿಲ್ಲೆಗಳಲ್ಲಿ ಜನರು ಅಕ್ರಮ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಸಿವಾನ್, ಸರನ್ ಮತ್ತು ಪಾಟ್ನಾ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ ಎರಡೂ ಜಿಲ್ಲೆಗಳ 25 ಕ್ಕೂ ಹೆಚ್ಚು ಜನರು ಇನ್ನೂ ಜೀವಕ್ಕಾಗಿ ಹೋರಾಡುತ್ತಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.  ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಶವಪರೀಕ್ಷೆ ವರದಿ ಬಂದ ನಂತರವಷ್ಟೇ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಡಿಐಜಿ ತಿಳಿಸಿದ್ದಾರೆ. ಮೃತರ ಮತ್ತು ಚಿಕಿತ್ಸೆಯಲ್ಲಿರುವವರ ಗುರುತುಗಳನ್ನು ಅಧಿಕಾರಿಗಳು ಇದುವರೆಗೆ ಬಹಿರಂಗಪಡಿಸಿಲ್ಲ.

“ಘಟನೆಯ ನಂತರ ಎರಡು ವಿಶೇಷ ತನಿಖಾ ತಂಡಗಳನ್ನು ಸಹ ರಚಿಸಲಾಗಿದೆ. ಸ್ಥಳೀಯ ಮಟ್ಟದಲ್ಲಿ ಸ್ಥಾಪಿಸಲಾದ ಈ ತಂಡವು ಇತ್ತೀಚಿನ ಘಟನೆಗಳ ಅಪರಾಧವನ್ನು ಪರಿಶೀಲಿಸುತ್ತದೆ” ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ರಾಜ್ ಗುರುವಾರ ತಿಳಿಸಿದ್ದಾರೆ.

“ಪಾಟ್ನಾದಲ್ಲಿ ಇಲಾಖೆಯು ಮತ್ತೊಂದು ಎಸ್‌ಐಟಿಯನ್ನು ರಚಿಸಿದ್ದು, ಇದು ಇತ್ತೀಚಿನ ದಿನಗಳಲ್ಲಿ ನಡೆದಿರುವ ಇಂತಹ ಎಲ್ಲಾ ಘಟನೆಗಳ ಸಮಗ್ರ ಅಧ್ಯಯನವನ್ನು ನಡೆಸುತ್ತದೆ. ಅದರ ಆಧಾರದ ಮೇಲೆ ಕ್ರಮದ ಯೋಜನೆಯನ್ನು ರೂಪಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಎರಡೂ ಜಿಲ್ಲೆಗಳಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಸುಮಾರು 15 ಜನರನ್ನು ಬಂಧಿಸಿದ್ದಾರೆ. ಘಟನೆಯ ನಂತರ ಎರಡೂ ಜಿಲ್ಲಾಡಳಿತಗಳು ಮಘರ್, ಔರಿಯಾ ಮತ್ತು ಇಬ್ರಾಹಿಂಪುರ ಪ್ರದೇಶದ ಮೂವರು ಚೌಕಿದಾರರನ್ನು ಅಮಾನತುಗೊಳಿಸಿವೆ. ಕನಿಷ್ಠ ಐವರು ಪೊಲೀಸ್ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಿವಾನ್ ಮತ್ತು ಸರನ್‌ನಲ್ಲಿ ಶಂಕಿತ ಅಕ್ರಮ ಮದ್ಯೆ ಪ್ರಕರಣದ ಸಾವುಗಳ ತನಿಖೆಯ ಪ್ರಗತಿಯನ್ನು ಕೇಳಿದ್ದಾರೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ಖುದ್ದು ನಿಗಾ ವಹಿಸಿ, ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸಿಎಂ ಸೂಚಿಸಿದ್ದಾರೆ ಎಂದು ಅದು ಹೇಳಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, “ರಾಜ್ಯದಲ್ಲಿ ಇತ್ತೀಚಿನ ಅಕ್ರಮ ಮದ್ಯ ಪ್ರಕರಣದ ಸಾವುಗಳಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಹೊಣೆ ಮಾಡಬೇಕು. ಇದು ಸಾಮೂಹಿಕ ಹತ್ಯೆಯಾಗಿದೆ. ಮದ್ಯ ನಿಷೇಧವನ್ನು ನಿತೀಶ್ ಕುಮಾರ್‌ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದರೆ ಅದನ್ನು ಸಮರ್ಥವಾಗಿ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಆದರೆ ಅದು ನಡೆಯುತ್ತಿಲ್ಲ.” ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಮದ್ಯ ನಿಷೇಧವು ಸೂಪರ್ ಫ್ಲಾಪ್ ಆಗಿದೆ. ಆಡಳಿತಾರೂಢ ರಾಜಕಾರಣಿಗಳು-ಪೊಲೀಸ್ ಮತ್ತು ಲಿಕ್ಕರ್ ಮಾಫಿಯಾದ ನಡುವಿನ ಅಪವಿತ್ರ ಸಂಬಂಧದಿಂದಾಗಿ, ಬಿಹಾರದಲ್ಲಿ 30,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಕ್ರಮ ಮದ್ಯದ ಕಪ್ಪು ಮಾರುಕಟ್ಟೆ ಪ್ರವರ್ಧಮಾನಕ್ಕೆ ಬಂದಿದೆ” ಎಂದು ತೇಜಸ್ವಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...