Homeಮುಖಪುಟಬಿಹಾರ | ಅಕ್ರಮ ಮದ್ಯ ಸೇವಿಸಿ ಮತ್ತೆ 10 ಮಂದಿ ಮೃತ; ಸಾವಿನ ಸಂಖ್ಯೆ 35ಕ್ಕೆ...

ಬಿಹಾರ | ಅಕ್ರಮ ಮದ್ಯ ಸೇವಿಸಿ ಮತ್ತೆ 10 ಮಂದಿ ಮೃತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ

- Advertisement -
- Advertisement -

ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಸೇವಿಸಿ ಮತ್ತೆ ಹತ್ತು ಮಂದಿ ಸಾವನ್ನಪ್ಪಿದ್ದು, ಕಳ್ಳಭಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸಿವಾನ್‌ನಲ್ಲಿ 28 ಸಾವುಗಳಾಗಿದ್ದು, ಸರನ್‌ನಲ್ಲಿ ಏಳು ಸಾವುಗಳು ವರದಿಯಾಗಿವೆ ಎಂದು ಪೊಲೀಸ್ ಉಪ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ನೀಲೇಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.

“ಸಿವಾನ್ ಜಿಲ್ಲೆಯ ಮಘರ್ ಮತ್ತು ಔರಿಯಾ ಪಂಚಾಯತ್‌ಗಳಲ್ಲಿ ಇದುವರೆಗೆ 28 ​​ಜನರು ಶಂಕಿತ ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಸರನ್ ಜಿಲ್ಲೆಯ ಮಶ್ರಖ್ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ರಾಹಿಂಪುರ ಪ್ರದೇಶದಲ್ಲಿ ಏಳು ಮಂದಿ ಶಂಕಿತ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ” ಎಂದು ಡಿಐಜಿ ಶುಕ್ರವಾರ ಪಿಟಿಐಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುಮಾರು ಎಂಟು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರವು ರಾಜ್ಯದಲ್ಲಿ ಮದ್ಯದ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ದುರಂತವು ಮದ್ಯ ನಿಷೇಧದ ಪರಿಣಾಮಕಾರಿತ್ವದ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಎರಡೂ ಜಿಲ್ಲೆಗಳಲ್ಲಿ ಜನರು ಅಕ್ರಮ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಸಿವಾನ್, ಸರನ್ ಮತ್ತು ಪಾಟ್ನಾ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ ಎರಡೂ ಜಿಲ್ಲೆಗಳ 25 ಕ್ಕೂ ಹೆಚ್ಚು ಜನರು ಇನ್ನೂ ಜೀವಕ್ಕಾಗಿ ಹೋರಾಡುತ್ತಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.  ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಶವಪರೀಕ್ಷೆ ವರದಿ ಬಂದ ನಂತರವಷ್ಟೇ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಡಿಐಜಿ ತಿಳಿಸಿದ್ದಾರೆ. ಮೃತರ ಮತ್ತು ಚಿಕಿತ್ಸೆಯಲ್ಲಿರುವವರ ಗುರುತುಗಳನ್ನು ಅಧಿಕಾರಿಗಳು ಇದುವರೆಗೆ ಬಹಿರಂಗಪಡಿಸಿಲ್ಲ.

“ಘಟನೆಯ ನಂತರ ಎರಡು ವಿಶೇಷ ತನಿಖಾ ತಂಡಗಳನ್ನು ಸಹ ರಚಿಸಲಾಗಿದೆ. ಸ್ಥಳೀಯ ಮಟ್ಟದಲ್ಲಿ ಸ್ಥಾಪಿಸಲಾದ ಈ ತಂಡವು ಇತ್ತೀಚಿನ ಘಟನೆಗಳ ಅಪರಾಧವನ್ನು ಪರಿಶೀಲಿಸುತ್ತದೆ” ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ರಾಜ್ ಗುರುವಾರ ತಿಳಿಸಿದ್ದಾರೆ.

“ಪಾಟ್ನಾದಲ್ಲಿ ಇಲಾಖೆಯು ಮತ್ತೊಂದು ಎಸ್‌ಐಟಿಯನ್ನು ರಚಿಸಿದ್ದು, ಇದು ಇತ್ತೀಚಿನ ದಿನಗಳಲ್ಲಿ ನಡೆದಿರುವ ಇಂತಹ ಎಲ್ಲಾ ಘಟನೆಗಳ ಸಮಗ್ರ ಅಧ್ಯಯನವನ್ನು ನಡೆಸುತ್ತದೆ. ಅದರ ಆಧಾರದ ಮೇಲೆ ಕ್ರಮದ ಯೋಜನೆಯನ್ನು ರೂಪಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಎರಡೂ ಜಿಲ್ಲೆಗಳಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಸುಮಾರು 15 ಜನರನ್ನು ಬಂಧಿಸಿದ್ದಾರೆ. ಘಟನೆಯ ನಂತರ ಎರಡೂ ಜಿಲ್ಲಾಡಳಿತಗಳು ಮಘರ್, ಔರಿಯಾ ಮತ್ತು ಇಬ್ರಾಹಿಂಪುರ ಪ್ರದೇಶದ ಮೂವರು ಚೌಕಿದಾರರನ್ನು ಅಮಾನತುಗೊಳಿಸಿವೆ. ಕನಿಷ್ಠ ಐವರು ಪೊಲೀಸ್ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಿವಾನ್ ಮತ್ತು ಸರನ್‌ನಲ್ಲಿ ಶಂಕಿತ ಅಕ್ರಮ ಮದ್ಯೆ ಪ್ರಕರಣದ ಸಾವುಗಳ ತನಿಖೆಯ ಪ್ರಗತಿಯನ್ನು ಕೇಳಿದ್ದಾರೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ಖುದ್ದು ನಿಗಾ ವಹಿಸಿ, ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸಿಎಂ ಸೂಚಿಸಿದ್ದಾರೆ ಎಂದು ಅದು ಹೇಳಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, “ರಾಜ್ಯದಲ್ಲಿ ಇತ್ತೀಚಿನ ಅಕ್ರಮ ಮದ್ಯ ಪ್ರಕರಣದ ಸಾವುಗಳಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಹೊಣೆ ಮಾಡಬೇಕು. ಇದು ಸಾಮೂಹಿಕ ಹತ್ಯೆಯಾಗಿದೆ. ಮದ್ಯ ನಿಷೇಧವನ್ನು ನಿತೀಶ್ ಕುಮಾರ್‌ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದರೆ ಅದನ್ನು ಸಮರ್ಥವಾಗಿ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಆದರೆ ಅದು ನಡೆಯುತ್ತಿಲ್ಲ.” ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಮದ್ಯ ನಿಷೇಧವು ಸೂಪರ್ ಫ್ಲಾಪ್ ಆಗಿದೆ. ಆಡಳಿತಾರೂಢ ರಾಜಕಾರಣಿಗಳು-ಪೊಲೀಸ್ ಮತ್ತು ಲಿಕ್ಕರ್ ಮಾಫಿಯಾದ ನಡುವಿನ ಅಪವಿತ್ರ ಸಂಬಂಧದಿಂದಾಗಿ, ಬಿಹಾರದಲ್ಲಿ 30,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಕ್ರಮ ಮದ್ಯದ ಕಪ್ಪು ಮಾರುಕಟ್ಟೆ ಪ್ರವರ್ಧಮಾನಕ್ಕೆ ಬಂದಿದೆ” ಎಂದು ತೇಜಸ್ವಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...