Homeಮುಖಪುಟಬಿಹಾರ | ಅಕ್ರಮ ಮದ್ಯ ಸೇವಿಸಿ ಮತ್ತೆ 10 ಮಂದಿ ಮೃತ; ಸಾವಿನ ಸಂಖ್ಯೆ 35ಕ್ಕೆ...

ಬಿಹಾರ | ಅಕ್ರಮ ಮದ್ಯ ಸೇವಿಸಿ ಮತ್ತೆ 10 ಮಂದಿ ಮೃತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ

- Advertisement -
- Advertisement -

ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಸೇವಿಸಿ ಮತ್ತೆ ಹತ್ತು ಮಂದಿ ಸಾವನ್ನಪ್ಪಿದ್ದು, ಕಳ್ಳಭಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸಿವಾನ್‌ನಲ್ಲಿ 28 ಸಾವುಗಳಾಗಿದ್ದು, ಸರನ್‌ನಲ್ಲಿ ಏಳು ಸಾವುಗಳು ವರದಿಯಾಗಿವೆ ಎಂದು ಪೊಲೀಸ್ ಉಪ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ನೀಲೇಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.

“ಸಿವಾನ್ ಜಿಲ್ಲೆಯ ಮಘರ್ ಮತ್ತು ಔರಿಯಾ ಪಂಚಾಯತ್‌ಗಳಲ್ಲಿ ಇದುವರೆಗೆ 28 ​​ಜನರು ಶಂಕಿತ ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಸರನ್ ಜಿಲ್ಲೆಯ ಮಶ್ರಖ್ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ರಾಹಿಂಪುರ ಪ್ರದೇಶದಲ್ಲಿ ಏಳು ಮಂದಿ ಶಂಕಿತ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ” ಎಂದು ಡಿಐಜಿ ಶುಕ್ರವಾರ ಪಿಟಿಐಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುಮಾರು ಎಂಟು ವರ್ಷಗಳ ಹಿಂದೆ ನಿತೀಶ್ ಕುಮಾರ್ ಸರ್ಕಾರವು ರಾಜ್ಯದಲ್ಲಿ ಮದ್ಯದ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ದುರಂತವು ಮದ್ಯ ನಿಷೇಧದ ಪರಿಣಾಮಕಾರಿತ್ವದ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಎರಡೂ ಜಿಲ್ಲೆಗಳಲ್ಲಿ ಜನರು ಅಕ್ರಮ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಸಿವಾನ್, ಸರನ್ ಮತ್ತು ಪಾಟ್ನಾ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ ಎರಡೂ ಜಿಲ್ಲೆಗಳ 25 ಕ್ಕೂ ಹೆಚ್ಚು ಜನರು ಇನ್ನೂ ಜೀವಕ್ಕಾಗಿ ಹೋರಾಡುತ್ತಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.  ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಶವಪರೀಕ್ಷೆ ವರದಿ ಬಂದ ನಂತರವಷ್ಟೇ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಡಿಐಜಿ ತಿಳಿಸಿದ್ದಾರೆ. ಮೃತರ ಮತ್ತು ಚಿಕಿತ್ಸೆಯಲ್ಲಿರುವವರ ಗುರುತುಗಳನ್ನು ಅಧಿಕಾರಿಗಳು ಇದುವರೆಗೆ ಬಹಿರಂಗಪಡಿಸಿಲ್ಲ.

“ಘಟನೆಯ ನಂತರ ಎರಡು ವಿಶೇಷ ತನಿಖಾ ತಂಡಗಳನ್ನು ಸಹ ರಚಿಸಲಾಗಿದೆ. ಸ್ಥಳೀಯ ಮಟ್ಟದಲ್ಲಿ ಸ್ಥಾಪಿಸಲಾದ ಈ ತಂಡವು ಇತ್ತೀಚಿನ ಘಟನೆಗಳ ಅಪರಾಧವನ್ನು ಪರಿಶೀಲಿಸುತ್ತದೆ” ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ರಾಜ್ ಗುರುವಾರ ತಿಳಿಸಿದ್ದಾರೆ.

“ಪಾಟ್ನಾದಲ್ಲಿ ಇಲಾಖೆಯು ಮತ್ತೊಂದು ಎಸ್‌ಐಟಿಯನ್ನು ರಚಿಸಿದ್ದು, ಇದು ಇತ್ತೀಚಿನ ದಿನಗಳಲ್ಲಿ ನಡೆದಿರುವ ಇಂತಹ ಎಲ್ಲಾ ಘಟನೆಗಳ ಸಮಗ್ರ ಅಧ್ಯಯನವನ್ನು ನಡೆಸುತ್ತದೆ. ಅದರ ಆಧಾರದ ಮೇಲೆ ಕ್ರಮದ ಯೋಜನೆಯನ್ನು ರೂಪಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಎರಡೂ ಜಿಲ್ಲೆಗಳಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಸುಮಾರು 15 ಜನರನ್ನು ಬಂಧಿಸಿದ್ದಾರೆ. ಘಟನೆಯ ನಂತರ ಎರಡೂ ಜಿಲ್ಲಾಡಳಿತಗಳು ಮಘರ್, ಔರಿಯಾ ಮತ್ತು ಇಬ್ರಾಹಿಂಪುರ ಪ್ರದೇಶದ ಮೂವರು ಚೌಕಿದಾರರನ್ನು ಅಮಾನತುಗೊಳಿಸಿವೆ. ಕನಿಷ್ಠ ಐವರು ಪೊಲೀಸ್ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗುರುವಾರ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಿವಾನ್ ಮತ್ತು ಸರನ್‌ನಲ್ಲಿ ಶಂಕಿತ ಅಕ್ರಮ ಮದ್ಯೆ ಪ್ರಕರಣದ ಸಾವುಗಳ ತನಿಖೆಯ ಪ್ರಗತಿಯನ್ನು ಕೇಳಿದ್ದಾರೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ಖುದ್ದು ನಿಗಾ ವಹಿಸಿ, ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸಿಎಂ ಸೂಚಿಸಿದ್ದಾರೆ ಎಂದು ಅದು ಹೇಳಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, “ರಾಜ್ಯದಲ್ಲಿ ಇತ್ತೀಚಿನ ಅಕ್ರಮ ಮದ್ಯ ಪ್ರಕರಣದ ಸಾವುಗಳಿಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಹೊಣೆ ಮಾಡಬೇಕು. ಇದು ಸಾಮೂಹಿಕ ಹತ್ಯೆಯಾಗಿದೆ. ಮದ್ಯ ನಿಷೇಧವನ್ನು ನಿತೀಶ್ ಕುಮಾರ್‌ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದರೆ ಅದನ್ನು ಸಮರ್ಥವಾಗಿ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಆದರೆ ಅದು ನಡೆಯುತ್ತಿಲ್ಲ.” ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಮದ್ಯ ನಿಷೇಧವು ಸೂಪರ್ ಫ್ಲಾಪ್ ಆಗಿದೆ. ಆಡಳಿತಾರೂಢ ರಾಜಕಾರಣಿಗಳು-ಪೊಲೀಸ್ ಮತ್ತು ಲಿಕ್ಕರ್ ಮಾಫಿಯಾದ ನಡುವಿನ ಅಪವಿತ್ರ ಸಂಬಂಧದಿಂದಾಗಿ, ಬಿಹಾರದಲ್ಲಿ 30,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಕ್ರಮ ಮದ್ಯದ ಕಪ್ಪು ಮಾರುಕಟ್ಟೆ ಪ್ರವರ್ಧಮಾನಕ್ಕೆ ಬಂದಿದೆ” ಎಂದು ತೇಜಸ್ವಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...