Homeಮುಖಪುಟಬಿಹಾರದ 28 ಸಚಿವರಲ್ಲಿ 18 ಮಂದಿಗಿದೆ ಕ್ರಿಮಿನಲ್ ಪ್ರಕರಣದ ನಂಟು

ಬಿಹಾರದ 28 ಸಚಿವರಲ್ಲಿ 18 ಮಂದಿಗಿದೆ ಕ್ರಿಮಿನಲ್ ಪ್ರಕರಣದ ನಂಟು

ಅರ್ಧದಲ್ಲೇ ಶಾಲೆಯನ್ನು ಮೊಟಕುಗೊಳಿಸಿರುವ ಹನ್ನೊಂದು ಮಂತ್ರಿಗಳು ಸಚಿವ ಸಂಪುಟದಲ್ಲಿದ್ದಾರೆ

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಸರ್ಕಾರವು ಇತ್ತೀಚೆಗಷ್ಟೆ ಸಚಿವ ಸಂಪುಟ ವಿಸ್ತರಣೆ ನಡೆಸಿದ್ದು ಸರ್ಕಾರವು ಒಟ್ಟು 31 ಮಂತ್ರಿಗಳನ್ನು ಹೊಂದಿದೆ. ಇವರಲ್ಲಿ 18 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ಎಲೆಕ್ಷನ್ ವಾಚ್ ವರದಿಯಲ್ಲಿ 28 ಸಚಿವರು ನೀಡಿರುವ ಅಫಿಡವಿಟ್‌ಗಳ ಆಧಾರದ ಮೇಲೆ ತಿಳಿಸಲಾಗಿದೆ. ಈ ಸಚಿವರಲ್ಲಿ 14 ಮಂದಿ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅದು ತಿಳಿಸಿದೆ.

ಉಳಿದ ಮೂವರು ಸಚಿವರಲ್ಲಿ ಅಶೋಕ್ ಚೌಧರಿ ಮತ್ತು ಜನಕ್ ರಾಮ್ ಎಂಬ ಇಬ್ಬರು ಸಚಿವರು ಈವರೆಗೆ ರಾಜ್ಯ ವಿಧಾನಸಭೆಯ ಸದಸ್ಯರಾಗಿಲ್ಲದ್ದರಿಂದ, ಅವರ ವಿವರಗಳು ಲಭ್ಯವಿಲ್ಲ. ಮತ್ತೊಬ್ಬ ಬಿಜೆಪಿಯ ಸಚಿವ ರಾಮ್ ಸೂರತ್ ಕುಮಾರ್ ಅವರು ನೀಡಿರುವ ಅಫಿಡವಿಟ್ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪೂರ್ಣವಾಗಿದ್ದರಿಂದ ಅದನ್ನು ವಿಶ್ಲೇಷಿಸಲಾಗಿಲ್ಲ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಸಂಪುಟ ವಿಸ್ತರಣೆ ಮೂಲಕ ಬಿಜೆಪಿಗೆ ಸಂದೇಶ ರವಾನಿಸಿದ ನಿತೀಶ್ ಕುಮಾರ್

ಸರ್ಕಾರದ ಮೈತ್ರಿಕೂಟವಾದ ಬಿಜೆಪಿಯ 16 ಮಂತ್ರಿಗಳಲ್ಲಿ 11 ಮಂದಿ, ಜೆಡಿಯು ಪಕ್ಷದ 4 ಮಂತ್ರಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇತರ ಮೂವರು ಹಿಂದೂಸ್ತಾನಿ ಅವಮ್ ಮೋರ್ಚಾ (ಜಾತ್ಯತೀತ), ವಿಕಾಸ್ಶೀಲ್ ಇನ್ಸಾನ್ ಪಾರ್ಟಿ ಮತ್ತು ಪಕ್ಷೇತರ ಸಚಿವರ ವಿರುದ್ಧ ಕೂಡಾ ಗಂಭೀರ ಅಪರಾಧ ಪ್ರಕರಣಗಳು ಬಾಕಿ ಉಳಿದಿವೆ.

ಎಡಿಆರ್ ಮತ್ತು ಎಲೆಕ್ಷನ್ ವಾಚ್‌ನ ಹಿಂದಿನ ವಿಶ್ಲೇಷಣೆಯಲ್ಲಿ ರಾಜ್ಯದಲ್ಲಿ ಹೊಸದಾಗಿ ಆಯ್ಕೆಯಾದ 241 ವಿಧಾನಸಭಾ ಸದಸ್ಯರಲ್ಲಿ 163 (68%) ಕೊಲೆ ಯತ್ನದಂತಹ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂಂದು ಹೇಳಿದೆ. 2015 ರಲ್ಲಿ ಆಯ್ಕೆಯಾದ 243 ಸದಸ್ಯರಲ್ಲಿ 142 (58%) ಮಂದಿ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು ಎಂದು ವರದಿ ಹೇಳಿತ್ತು.

28 ಮಂತ್ರಿಗಳಲ್ಲಿ ಇಪ್ಪತ್ತಾರು ಜನರು (93%) ಸರಾಸರಿ ಆಸ್ತಿ 4.46 ಕೋಟಿ ರೂ. ಎಂದು ಅದು ಹೇಳಿದೆ. ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಝಾ ಅವರು ರೂ .22.37 ಕೋಟಿ ಆಸ್ತಿಯನ್ನು ಹೊಂದಿದ್ದಾರೆ. ಜೆಡಿಯುನ ಜಮಾ ಖಾನ್ 30.04 ಲಕ್ಷ ಆಸ್ತಿಯನ್ನು ಹೊಂದಿರುವ ಅತಿ ಕಡಿಮೆ ಆಸ್ತಿಯಿರುವ ಸಚಿವರಾಗಿದ್ದಾರೆ. 16 ಮಂದಿ ಪದವೀಧರರು ಅಥವಾ ಅದಕ್ಕಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆ ಉಳ್ಳವರಾಗಿದ್ದು, ಅರ್ಧದಲ್ಲೇ ಶಾಲೆಯನ್ನು ಮೊಟಕುಗೊಳಿಸಿರುವ ಹನ್ನೊಂದು ಮಂತ್ರಿಗಳು ಸಚಿವ ಸಂಪುಟದಲ್ಲಿದ್ದಾರೆ.

ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...