Homeಮುಖಪುಟಬಿಹಾರದ 28 ಸಚಿವರಲ್ಲಿ 18 ಮಂದಿಗಿದೆ ಕ್ರಿಮಿನಲ್ ಪ್ರಕರಣದ ನಂಟು

ಬಿಹಾರದ 28 ಸಚಿವರಲ್ಲಿ 18 ಮಂದಿಗಿದೆ ಕ್ರಿಮಿನಲ್ ಪ್ರಕರಣದ ನಂಟು

ಅರ್ಧದಲ್ಲೇ ಶಾಲೆಯನ್ನು ಮೊಟಕುಗೊಳಿಸಿರುವ ಹನ್ನೊಂದು ಮಂತ್ರಿಗಳು ಸಚಿವ ಸಂಪುಟದಲ್ಲಿದ್ದಾರೆ

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಸರ್ಕಾರವು ಇತ್ತೀಚೆಗಷ್ಟೆ ಸಚಿವ ಸಂಪುಟ ವಿಸ್ತರಣೆ ನಡೆಸಿದ್ದು ಸರ್ಕಾರವು ಒಟ್ಟು 31 ಮಂತ್ರಿಗಳನ್ನು ಹೊಂದಿದೆ. ಇವರಲ್ಲಿ 18 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ಎಲೆಕ್ಷನ್ ವಾಚ್ ವರದಿಯಲ್ಲಿ 28 ಸಚಿವರು ನೀಡಿರುವ ಅಫಿಡವಿಟ್‌ಗಳ ಆಧಾರದ ಮೇಲೆ ತಿಳಿಸಲಾಗಿದೆ. ಈ ಸಚಿವರಲ್ಲಿ 14 ಮಂದಿ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅದು ತಿಳಿಸಿದೆ.

ಉಳಿದ ಮೂವರು ಸಚಿವರಲ್ಲಿ ಅಶೋಕ್ ಚೌಧರಿ ಮತ್ತು ಜನಕ್ ರಾಮ್ ಎಂಬ ಇಬ್ಬರು ಸಚಿವರು ಈವರೆಗೆ ರಾಜ್ಯ ವಿಧಾನಸಭೆಯ ಸದಸ್ಯರಾಗಿಲ್ಲದ್ದರಿಂದ, ಅವರ ವಿವರಗಳು ಲಭ್ಯವಿಲ್ಲ. ಮತ್ತೊಬ್ಬ ಬಿಜೆಪಿಯ ಸಚಿವ ರಾಮ್ ಸೂರತ್ ಕುಮಾರ್ ಅವರು ನೀಡಿರುವ ಅಫಿಡವಿಟ್ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪೂರ್ಣವಾಗಿದ್ದರಿಂದ ಅದನ್ನು ವಿಶ್ಲೇಷಿಸಲಾಗಿಲ್ಲ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಸಂಪುಟ ವಿಸ್ತರಣೆ ಮೂಲಕ ಬಿಜೆಪಿಗೆ ಸಂದೇಶ ರವಾನಿಸಿದ ನಿತೀಶ್ ಕುಮಾರ್

ಸರ್ಕಾರದ ಮೈತ್ರಿಕೂಟವಾದ ಬಿಜೆಪಿಯ 16 ಮಂತ್ರಿಗಳಲ್ಲಿ 11 ಮಂದಿ, ಜೆಡಿಯು ಪಕ್ಷದ 4 ಮಂತ್ರಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇತರ ಮೂವರು ಹಿಂದೂಸ್ತಾನಿ ಅವಮ್ ಮೋರ್ಚಾ (ಜಾತ್ಯತೀತ), ವಿಕಾಸ್ಶೀಲ್ ಇನ್ಸಾನ್ ಪಾರ್ಟಿ ಮತ್ತು ಪಕ್ಷೇತರ ಸಚಿವರ ವಿರುದ್ಧ ಕೂಡಾ ಗಂಭೀರ ಅಪರಾಧ ಪ್ರಕರಣಗಳು ಬಾಕಿ ಉಳಿದಿವೆ.

ಎಡಿಆರ್ ಮತ್ತು ಎಲೆಕ್ಷನ್ ವಾಚ್‌ನ ಹಿಂದಿನ ವಿಶ್ಲೇಷಣೆಯಲ್ಲಿ ರಾಜ್ಯದಲ್ಲಿ ಹೊಸದಾಗಿ ಆಯ್ಕೆಯಾದ 241 ವಿಧಾನಸಭಾ ಸದಸ್ಯರಲ್ಲಿ 163 (68%) ಕೊಲೆ ಯತ್ನದಂತಹ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂಂದು ಹೇಳಿದೆ. 2015 ರಲ್ಲಿ ಆಯ್ಕೆಯಾದ 243 ಸದಸ್ಯರಲ್ಲಿ 142 (58%) ಮಂದಿ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು ಎಂದು ವರದಿ ಹೇಳಿತ್ತು.

28 ಮಂತ್ರಿಗಳಲ್ಲಿ ಇಪ್ಪತ್ತಾರು ಜನರು (93%) ಸರಾಸರಿ ಆಸ್ತಿ 4.46 ಕೋಟಿ ರೂ. ಎಂದು ಅದು ಹೇಳಿದೆ. ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಝಾ ಅವರು ರೂ .22.37 ಕೋಟಿ ಆಸ್ತಿಯನ್ನು ಹೊಂದಿದ್ದಾರೆ. ಜೆಡಿಯುನ ಜಮಾ ಖಾನ್ 30.04 ಲಕ್ಷ ಆಸ್ತಿಯನ್ನು ಹೊಂದಿರುವ ಅತಿ ಕಡಿಮೆ ಆಸ್ತಿಯಿರುವ ಸಚಿವರಾಗಿದ್ದಾರೆ. 16 ಮಂದಿ ಪದವೀಧರರು ಅಥವಾ ಅದಕ್ಕಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆ ಉಳ್ಳವರಾಗಿದ್ದು, ಅರ್ಧದಲ್ಲೇ ಶಾಲೆಯನ್ನು ಮೊಟಕುಗೊಳಿಸಿರುವ ಹನ್ನೊಂದು ಮಂತ್ರಿಗಳು ಸಚಿವ ಸಂಪುಟದಲ್ಲಿದ್ದಾರೆ.

ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...