Homeಮುಖಪುಟಬಿಹಾರದ 28 ಸಚಿವರಲ್ಲಿ 18 ಮಂದಿಗಿದೆ ಕ್ರಿಮಿನಲ್ ಪ್ರಕರಣದ ನಂಟು

ಬಿಹಾರದ 28 ಸಚಿವರಲ್ಲಿ 18 ಮಂದಿಗಿದೆ ಕ್ರಿಮಿನಲ್ ಪ್ರಕರಣದ ನಂಟು

ಅರ್ಧದಲ್ಲೇ ಶಾಲೆಯನ್ನು ಮೊಟಕುಗೊಳಿಸಿರುವ ಹನ್ನೊಂದು ಮಂತ್ರಿಗಳು ಸಚಿವ ಸಂಪುಟದಲ್ಲಿದ್ದಾರೆ

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಸರ್ಕಾರವು ಇತ್ತೀಚೆಗಷ್ಟೆ ಸಚಿವ ಸಂಪುಟ ವಿಸ್ತರಣೆ ನಡೆಸಿದ್ದು ಸರ್ಕಾರವು ಒಟ್ಟು 31 ಮಂತ್ರಿಗಳನ್ನು ಹೊಂದಿದೆ. ಇವರಲ್ಲಿ 18 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ಎಲೆಕ್ಷನ್ ವಾಚ್ ವರದಿಯಲ್ಲಿ 28 ಸಚಿವರು ನೀಡಿರುವ ಅಫಿಡವಿಟ್‌ಗಳ ಆಧಾರದ ಮೇಲೆ ತಿಳಿಸಲಾಗಿದೆ. ಈ ಸಚಿವರಲ್ಲಿ 14 ಮಂದಿ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅದು ತಿಳಿಸಿದೆ.

ಉಳಿದ ಮೂವರು ಸಚಿವರಲ್ಲಿ ಅಶೋಕ್ ಚೌಧರಿ ಮತ್ತು ಜನಕ್ ರಾಮ್ ಎಂಬ ಇಬ್ಬರು ಸಚಿವರು ಈವರೆಗೆ ರಾಜ್ಯ ವಿಧಾನಸಭೆಯ ಸದಸ್ಯರಾಗಿಲ್ಲದ್ದರಿಂದ, ಅವರ ವಿವರಗಳು ಲಭ್ಯವಿಲ್ಲ. ಮತ್ತೊಬ್ಬ ಬಿಜೆಪಿಯ ಸಚಿವ ರಾಮ್ ಸೂರತ್ ಕುಮಾರ್ ಅವರು ನೀಡಿರುವ ಅಫಿಡವಿಟ್ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪೂರ್ಣವಾಗಿದ್ದರಿಂದ ಅದನ್ನು ವಿಶ್ಲೇಷಿಸಲಾಗಿಲ್ಲ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಬಿಹಾರ ಸಂಪುಟ ವಿಸ್ತರಣೆ ಮೂಲಕ ಬಿಜೆಪಿಗೆ ಸಂದೇಶ ರವಾನಿಸಿದ ನಿತೀಶ್ ಕುಮಾರ್

ಸರ್ಕಾರದ ಮೈತ್ರಿಕೂಟವಾದ ಬಿಜೆಪಿಯ 16 ಮಂತ್ರಿಗಳಲ್ಲಿ 11 ಮಂದಿ, ಜೆಡಿಯು ಪಕ್ಷದ 4 ಮಂತ್ರಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇತರ ಮೂವರು ಹಿಂದೂಸ್ತಾನಿ ಅವಮ್ ಮೋರ್ಚಾ (ಜಾತ್ಯತೀತ), ವಿಕಾಸ್ಶೀಲ್ ಇನ್ಸಾನ್ ಪಾರ್ಟಿ ಮತ್ತು ಪಕ್ಷೇತರ ಸಚಿವರ ವಿರುದ್ಧ ಕೂಡಾ ಗಂಭೀರ ಅಪರಾಧ ಪ್ರಕರಣಗಳು ಬಾಕಿ ಉಳಿದಿವೆ.

ಎಡಿಆರ್ ಮತ್ತು ಎಲೆಕ್ಷನ್ ವಾಚ್‌ನ ಹಿಂದಿನ ವಿಶ್ಲೇಷಣೆಯಲ್ಲಿ ರಾಜ್ಯದಲ್ಲಿ ಹೊಸದಾಗಿ ಆಯ್ಕೆಯಾದ 241 ವಿಧಾನಸಭಾ ಸದಸ್ಯರಲ್ಲಿ 163 (68%) ಕೊಲೆ ಯತ್ನದಂತಹ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂಂದು ಹೇಳಿದೆ. 2015 ರಲ್ಲಿ ಆಯ್ಕೆಯಾದ 243 ಸದಸ್ಯರಲ್ಲಿ 142 (58%) ಮಂದಿ ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು ಎಂದು ವರದಿ ಹೇಳಿತ್ತು.

28 ಮಂತ್ರಿಗಳಲ್ಲಿ ಇಪ್ಪತ್ತಾರು ಜನರು (93%) ಸರಾಸರಿ ಆಸ್ತಿ 4.46 ಕೋಟಿ ರೂ. ಎಂದು ಅದು ಹೇಳಿದೆ. ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಝಾ ಅವರು ರೂ .22.37 ಕೋಟಿ ಆಸ್ತಿಯನ್ನು ಹೊಂದಿದ್ದಾರೆ. ಜೆಡಿಯುನ ಜಮಾ ಖಾನ್ 30.04 ಲಕ್ಷ ಆಸ್ತಿಯನ್ನು ಹೊಂದಿರುವ ಅತಿ ಕಡಿಮೆ ಆಸ್ತಿಯಿರುವ ಸಚಿವರಾಗಿದ್ದಾರೆ. 16 ಮಂದಿ ಪದವೀಧರರು ಅಥವಾ ಅದಕ್ಕಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆ ಉಳ್ಳವರಾಗಿದ್ದು, ಅರ್ಧದಲ್ಲೇ ಶಾಲೆಯನ್ನು ಮೊಟಕುಗೊಳಿಸಿರುವ ಹನ್ನೊಂದು ಮಂತ್ರಿಗಳು ಸಚಿವ ಸಂಪುಟದಲ್ಲಿದ್ದಾರೆ.

ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...