Homeಮುಖಪುಟಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ...

ಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ನವದೆಹಲಿ: ಬಿಹಾರದ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 65 ಲಕ್ಷ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದರ ಕುರಿತು ವಿವರಗಳನ್ನು ಬಹಿರಂಗಪಡಿಸಲು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಉಜ್ವಲ್ ಭೂಯಾನ್ ಮತ್ತು ಎನ್.ಕೆ. ಸಿಂಗ್ ಅವರನ್ನೊಳಗೊಂಡ ಪೀಠವು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಲ್ಲಿಸಿದ್ದ ಅರ್ಜಿಯನ್ನು ವಕೀಲ ಪ್ರಶಾಂತ್ ಭೂಷಣ್ ಉಲ್ಲೇಖಿಸಿದ ನಂತರ ಈ ಆದೇಶ ನೀಡಿತು.

ಕೈಬಿಟ್ಟ ಮತದಾರರ ಹೆಸರುಗಳು, ಮತಗಟ್ಟೆ ಹಾಗೂ ವಿಧಾನಸಭಾ ಕ್ಷೇತ್ರವಾರು ವಿವರಗಳನ್ನು, ಹಾಗೆಯೇ ಹೆಸರುಗಳನ್ನು ಕೈಬಿಡಲು ಕಾರಣಗಳನ್ನೂ (ಉದಾಹರಣೆಗೆ, ಮರಣ, ಸ್ಥಳಾಂತರ, ನಕಲಿ, ಪತ್ತೆಯಾಗದಿರುವುದು, ಇತ್ಯಾದಿ) ಬಹಿರಂಗಪಡಿಸಬೇಕು ಎಂದು ADR ತನ್ನ ಅರ್ಜಿಯಲ್ಲಿ ಒತ್ತಾಯಿಸಿದೆ.

ಈ ಮಾಹಿತಿಯನ್ನು ರಾಜಕೀಯ ಪಕ್ಷಗಳು, ಸಾರ್ವಜನಿಕರು ಮತ್ತು ಅರ್ಜಿದಾರರು ಪರಿಶೀಲಿಸಲು ಅನುಕೂಲವಾಗುವಂತೆ, ಮತಗಟ್ಟೆ ಮಟ್ಟದ ಅಧಿಕಾರಿ (BLO) ಯಿಂದ “ಶಿಫಾರಸು ಮಾಡದ” ಮತದಾರರ ಪಟ್ಟಿಯನ್ನೂ ಸಹ ಪ್ರಕಟಿಸಬೇಕು ಎಂದು ಅರ್ಜಿ ಕೋರಿದೆ.

ಕೈಬಿಟ್ಟ ಮತದಾರರ ಮಾಹಿತಿಯನ್ನು ಈಗಾಗಲೇ ರಾಜಕೀಯ ಪಕ್ಷಗಳ ಮತಗಟ್ಟೆ ಮಟ್ಟದ ಪ್ರತಿನಿಧಿಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ತಿಳಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ನೇತೃತ್ವದ ಪೀಠ, ಯಾವ ರಾಜಕೀಯ ಪಕ್ಷಗಳಿಗೆ ಈ ಮಾಹಿತಿ ನೀಡಲಾಗಿದೆ ಎಂಬುದರ ಪಟ್ಟಿಯನ್ನು ಆಗಸ್ಟ್ 9ರೊಳಗೆ ದಾಖಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತು. ಈ ಪ್ರಕರಣವನ್ನು ಆಗಸ್ಟ್ 12 ರಂದು ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

“ಪರಿಣಾಮ ಎದುರಿಸುವ ಸಾಧ್ಯತೆಯಿರುವ ಪ್ರತಿಯೊಬ್ಬ ಮತದಾರರಿಗೂ ಮಾಹಿತಿ ನೀಡಿ, ನಿಯಮಗಳನ್ನು ಪಾಲಿಸಲು ಅವಕಾಶ ನೀಡಲಾಗಿದೆ ಎಂದು ನಾವು ಖಚಿತಪಡಿಸಿಕೊಳ್ಳುತ್ತೇವೆ. ರಾಜಕೀಯ ಪಕ್ಷಗಳು ಮತ್ತು ಸ್ಥಳೀಯ ಆಡಳಿತವು ಅಗತ್ಯ ಮಾಹಿತಿಯನ್ನು ಹೊಂದಿರಬೇಕು,” ಎಂದು ಪೀಠ ಹೇಳಿದೆ.

ಜೂನ್ 26ರಂದು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಚುನಾವಣಾ ಆಯೋಗ ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ADR ಮಂಗಳವಾರ ಒಂದು ಮಧ್ಯಂತರ ಅರ್ಜಿಯನ್ನು ಸಲ್ಲಿಸಿದೆ.

ಜುಲೈ 25ರಂದು ಚುನಾವಣಾ ಆಯೋಗ ನೀಡಿದ ಪತ್ರಿಕಾ ಹೇಳಿಕೆಯ ಪ್ರಕಾರ, SIR ಪ್ರಕ್ರಿಯೆಯಿಂದ ಸುಮಾರು 65 ಲಕ್ಷ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ. “ಇದರಿಂದ ಆಯೋಗದ ಬಳಿ ಮೃತಪಟ್ಟ ಸುಮಾರು 22 ಲಕ್ಷ ಮತದಾರರು, ಶಾಶ್ವತವಾಗಿ ಸ್ಥಳಾಂತರಗೊಂಡ ಅಥವಾ ಪತ್ತೆಯಾಗದ ಸುಮಾರು 35 ಲಕ್ಷ ಮತದಾರರು, ಹಲವು ಸ್ಥಳಗಳಲ್ಲಿ ನೋಂದಾಯಿಸಿಕೊಂಡಿರುವ ಸುಮಾರು 7 ಲಕ್ಷ ಮತದಾರರು ಮತ್ತು ಇನ್ನೂ ಫಾರ್ಮ್‌ಗಳು ಸ್ವೀಕೃತವಾಗದಿರುವ ಸುಮಾರು 1.2 ಲಕ್ಷ ಮತದಾರರ ವಿವರಗಳಿವೆ ಎಂದು ಸ್ಪಷ್ಟವಾಗುತ್ತದೆ,” ಎಂದು ADR ಅರ್ಜಿಯಲ್ಲಿ ತಿಳಿಸಿದೆ.

65 ಲಕ್ಷ ಹೆಸರುಗಳ ಪಟ್ಟಿಯಿಂದ ತೆಗೆದುಹಾಕಲು ನಿರ್ದಿಷ್ಟ ಕಾರಣವನ್ನು ಬಹಿರಂಗಪಡಿಸಲು ಇಸಿಐ ವಿಫಲವಾಗಿರುವುದು, “ಈ ವ್ಯಕ್ತಿಗಳು ನಿಜವಾಗಿಯೂ ಮೃತಪಟ್ಟಿದ್ದಾರೆಯೇ ಅಥವಾ ಶಾಶ್ವತವಾಗಿ ವಲಸೆ ಹೋಗಿದ್ದಾರೆಯೇ ಎಂದು ಪರಿಶೀಲಿಸುವುದನ್ನು ತಡೆಯುವ ಪ್ರಯತ್ನವಾಗಿದೆ,” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದೇ ವೇಳೆ, ಬಿಹಾರ ಚುನಾವಣಾ ಕಚೇರಿಯ ಮೂಲಗಳು ತಿಳಿಸಿರುವಂತೆ, SIR ಪ್ರಕ್ರಿಯೆಯು ಹೆಚ್ಚಿನ ಮತದಾರರನ್ನು ಮತದಾನದಿಂದ ಹೊರಗಿಡಲಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಯಾವುದೇ ಸ್ಪಷ್ಟ ಸಾಕ್ಷ್ಯಗಳಿಲ್ಲ. ಆಗಸ್ಟ್ 1ರಿಂದ ಯಾವುದೇ ರಾಜಕೀಯ ಪಕ್ಷದಿಂದ ಯಾವುದೇ ದೂರು ಅಥವಾ ಆಕ್ಷೇಪಣೆ ದಾಖಲಾಗಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

‘ನಿಮ್ಮ ಪಾದ ತೊಳೆಯಲು ಗಂಗಾ ಮಾತೆ ಬಂದಿದ್ದಾಳೆ, ನಿಮ್ಮನ್ನು ಸೀದಾ ಸ್ವರ್ಗಕ್ಕೆ ಕೊಂಡೊಯ್ಯುತ್ತಾಳೆ’: ಪ್ರವಾಹ ಸಂತ್ರಸ್ತರಿಗೆ ಹೇಳಿದ ಉತ್ತರ ಪ್ರದೇಶ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...