Homeಮುಖಪುಟಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ...

ಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ನವದೆಹಲಿ: ಬಿಹಾರದ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 65 ಲಕ್ಷ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದರ ಕುರಿತು ವಿವರಗಳನ್ನು ಬಹಿರಂಗಪಡಿಸಲು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಉಜ್ವಲ್ ಭೂಯಾನ್ ಮತ್ತು ಎನ್.ಕೆ. ಸಿಂಗ್ ಅವರನ್ನೊಳಗೊಂಡ ಪೀಠವು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಲ್ಲಿಸಿದ್ದ ಅರ್ಜಿಯನ್ನು ವಕೀಲ ಪ್ರಶಾಂತ್ ಭೂಷಣ್ ಉಲ್ಲೇಖಿಸಿದ ನಂತರ ಈ ಆದೇಶ ನೀಡಿತು.

ಕೈಬಿಟ್ಟ ಮತದಾರರ ಹೆಸರುಗಳು, ಮತಗಟ್ಟೆ ಹಾಗೂ ವಿಧಾನಸಭಾ ಕ್ಷೇತ್ರವಾರು ವಿವರಗಳನ್ನು, ಹಾಗೆಯೇ ಹೆಸರುಗಳನ್ನು ಕೈಬಿಡಲು ಕಾರಣಗಳನ್ನೂ (ಉದಾಹರಣೆಗೆ, ಮರಣ, ಸ್ಥಳಾಂತರ, ನಕಲಿ, ಪತ್ತೆಯಾಗದಿರುವುದು, ಇತ್ಯಾದಿ) ಬಹಿರಂಗಪಡಿಸಬೇಕು ಎಂದು ADR ತನ್ನ ಅರ್ಜಿಯಲ್ಲಿ ಒತ್ತಾಯಿಸಿದೆ.

ಈ ಮಾಹಿತಿಯನ್ನು ರಾಜಕೀಯ ಪಕ್ಷಗಳು, ಸಾರ್ವಜನಿಕರು ಮತ್ತು ಅರ್ಜಿದಾರರು ಪರಿಶೀಲಿಸಲು ಅನುಕೂಲವಾಗುವಂತೆ, ಮತಗಟ್ಟೆ ಮಟ್ಟದ ಅಧಿಕಾರಿ (BLO) ಯಿಂದ “ಶಿಫಾರಸು ಮಾಡದ” ಮತದಾರರ ಪಟ್ಟಿಯನ್ನೂ ಸಹ ಪ್ರಕಟಿಸಬೇಕು ಎಂದು ಅರ್ಜಿ ಕೋರಿದೆ.

ಕೈಬಿಟ್ಟ ಮತದಾರರ ಮಾಹಿತಿಯನ್ನು ಈಗಾಗಲೇ ರಾಜಕೀಯ ಪಕ್ಷಗಳ ಮತಗಟ್ಟೆ ಮಟ್ಟದ ಪ್ರತಿನಿಧಿಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ತಿಳಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ನೇತೃತ್ವದ ಪೀಠ, ಯಾವ ರಾಜಕೀಯ ಪಕ್ಷಗಳಿಗೆ ಈ ಮಾಹಿತಿ ನೀಡಲಾಗಿದೆ ಎಂಬುದರ ಪಟ್ಟಿಯನ್ನು ಆಗಸ್ಟ್ 9ರೊಳಗೆ ದಾಖಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತು. ಈ ಪ್ರಕರಣವನ್ನು ಆಗಸ್ಟ್ 12 ರಂದು ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

“ಪರಿಣಾಮ ಎದುರಿಸುವ ಸಾಧ್ಯತೆಯಿರುವ ಪ್ರತಿಯೊಬ್ಬ ಮತದಾರರಿಗೂ ಮಾಹಿತಿ ನೀಡಿ, ನಿಯಮಗಳನ್ನು ಪಾಲಿಸಲು ಅವಕಾಶ ನೀಡಲಾಗಿದೆ ಎಂದು ನಾವು ಖಚಿತಪಡಿಸಿಕೊಳ್ಳುತ್ತೇವೆ. ರಾಜಕೀಯ ಪಕ್ಷಗಳು ಮತ್ತು ಸ್ಥಳೀಯ ಆಡಳಿತವು ಅಗತ್ಯ ಮಾಹಿತಿಯನ್ನು ಹೊಂದಿರಬೇಕು,” ಎಂದು ಪೀಠ ಹೇಳಿದೆ.

ಜೂನ್ 26ರಂದು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಚುನಾವಣಾ ಆಯೋಗ ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ADR ಮಂಗಳವಾರ ಒಂದು ಮಧ್ಯಂತರ ಅರ್ಜಿಯನ್ನು ಸಲ್ಲಿಸಿದೆ.

ಜುಲೈ 25ರಂದು ಚುನಾವಣಾ ಆಯೋಗ ನೀಡಿದ ಪತ್ರಿಕಾ ಹೇಳಿಕೆಯ ಪ್ರಕಾರ, SIR ಪ್ರಕ್ರಿಯೆಯಿಂದ ಸುಮಾರು 65 ಲಕ್ಷ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ. “ಇದರಿಂದ ಆಯೋಗದ ಬಳಿ ಮೃತಪಟ್ಟ ಸುಮಾರು 22 ಲಕ್ಷ ಮತದಾರರು, ಶಾಶ್ವತವಾಗಿ ಸ್ಥಳಾಂತರಗೊಂಡ ಅಥವಾ ಪತ್ತೆಯಾಗದ ಸುಮಾರು 35 ಲಕ್ಷ ಮತದಾರರು, ಹಲವು ಸ್ಥಳಗಳಲ್ಲಿ ನೋಂದಾಯಿಸಿಕೊಂಡಿರುವ ಸುಮಾರು 7 ಲಕ್ಷ ಮತದಾರರು ಮತ್ತು ಇನ್ನೂ ಫಾರ್ಮ್‌ಗಳು ಸ್ವೀಕೃತವಾಗದಿರುವ ಸುಮಾರು 1.2 ಲಕ್ಷ ಮತದಾರರ ವಿವರಗಳಿವೆ ಎಂದು ಸ್ಪಷ್ಟವಾಗುತ್ತದೆ,” ಎಂದು ADR ಅರ್ಜಿಯಲ್ಲಿ ತಿಳಿಸಿದೆ.

65 ಲಕ್ಷ ಹೆಸರುಗಳ ಪಟ್ಟಿಯಿಂದ ತೆಗೆದುಹಾಕಲು ನಿರ್ದಿಷ್ಟ ಕಾರಣವನ್ನು ಬಹಿರಂಗಪಡಿಸಲು ಇಸಿಐ ವಿಫಲವಾಗಿರುವುದು, “ಈ ವ್ಯಕ್ತಿಗಳು ನಿಜವಾಗಿಯೂ ಮೃತಪಟ್ಟಿದ್ದಾರೆಯೇ ಅಥವಾ ಶಾಶ್ವತವಾಗಿ ವಲಸೆ ಹೋಗಿದ್ದಾರೆಯೇ ಎಂದು ಪರಿಶೀಲಿಸುವುದನ್ನು ತಡೆಯುವ ಪ್ರಯತ್ನವಾಗಿದೆ,” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದೇ ವೇಳೆ, ಬಿಹಾರ ಚುನಾವಣಾ ಕಚೇರಿಯ ಮೂಲಗಳು ತಿಳಿಸಿರುವಂತೆ, SIR ಪ್ರಕ್ರಿಯೆಯು ಹೆಚ್ಚಿನ ಮತದಾರರನ್ನು ಮತದಾನದಿಂದ ಹೊರಗಿಡಲಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಯಾವುದೇ ಸ್ಪಷ್ಟ ಸಾಕ್ಷ್ಯಗಳಿಲ್ಲ. ಆಗಸ್ಟ್ 1ರಿಂದ ಯಾವುದೇ ರಾಜಕೀಯ ಪಕ್ಷದಿಂದ ಯಾವುದೇ ದೂರು ಅಥವಾ ಆಕ್ಷೇಪಣೆ ದಾಖಲಾಗಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

‘ನಿಮ್ಮ ಪಾದ ತೊಳೆಯಲು ಗಂಗಾ ಮಾತೆ ಬಂದಿದ್ದಾಳೆ, ನಿಮ್ಮನ್ನು ಸೀದಾ ಸ್ವರ್ಗಕ್ಕೆ ಕೊಂಡೊಯ್ಯುತ್ತಾಳೆ’: ಪ್ರವಾಹ ಸಂತ್ರಸ್ತರಿಗೆ ಹೇಳಿದ ಉತ್ತರ ಪ್ರದೇಶ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...