Homeಮುಖಪುಟಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ...

ಬಿಹಾರ| ಮತದಾರರ ಕರಡು ಪಟ್ಟಿಯಿಂದ 65 ಲಕ್ಷ ಜನರ ಹೆಸರು ಕೈಬಿಟ್ಟ ಪ್ರಕರಣ: ವಿವರ ಬಹಿರಂಗಕ್ಕೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ನವದೆಹಲಿ: ಬಿಹಾರದ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 65 ಲಕ್ಷ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದರ ಕುರಿತು ವಿವರಗಳನ್ನು ಬಹಿರಂಗಪಡಿಸಲು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಉಜ್ವಲ್ ಭೂಯಾನ್ ಮತ್ತು ಎನ್.ಕೆ. ಸಿಂಗ್ ಅವರನ್ನೊಳಗೊಂಡ ಪೀಠವು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಲ್ಲಿಸಿದ್ದ ಅರ್ಜಿಯನ್ನು ವಕೀಲ ಪ್ರಶಾಂತ್ ಭೂಷಣ್ ಉಲ್ಲೇಖಿಸಿದ ನಂತರ ಈ ಆದೇಶ ನೀಡಿತು.

ಕೈಬಿಟ್ಟ ಮತದಾರರ ಹೆಸರುಗಳು, ಮತಗಟ್ಟೆ ಹಾಗೂ ವಿಧಾನಸಭಾ ಕ್ಷೇತ್ರವಾರು ವಿವರಗಳನ್ನು, ಹಾಗೆಯೇ ಹೆಸರುಗಳನ್ನು ಕೈಬಿಡಲು ಕಾರಣಗಳನ್ನೂ (ಉದಾಹರಣೆಗೆ, ಮರಣ, ಸ್ಥಳಾಂತರ, ನಕಲಿ, ಪತ್ತೆಯಾಗದಿರುವುದು, ಇತ್ಯಾದಿ) ಬಹಿರಂಗಪಡಿಸಬೇಕು ಎಂದು ADR ತನ್ನ ಅರ್ಜಿಯಲ್ಲಿ ಒತ್ತಾಯಿಸಿದೆ.

ಈ ಮಾಹಿತಿಯನ್ನು ರಾಜಕೀಯ ಪಕ್ಷಗಳು, ಸಾರ್ವಜನಿಕರು ಮತ್ತು ಅರ್ಜಿದಾರರು ಪರಿಶೀಲಿಸಲು ಅನುಕೂಲವಾಗುವಂತೆ, ಮತಗಟ್ಟೆ ಮಟ್ಟದ ಅಧಿಕಾರಿ (BLO) ಯಿಂದ “ಶಿಫಾರಸು ಮಾಡದ” ಮತದಾರರ ಪಟ್ಟಿಯನ್ನೂ ಸಹ ಪ್ರಕಟಿಸಬೇಕು ಎಂದು ಅರ್ಜಿ ಕೋರಿದೆ.

ಕೈಬಿಟ್ಟ ಮತದಾರರ ಮಾಹಿತಿಯನ್ನು ಈಗಾಗಲೇ ರಾಜಕೀಯ ಪಕ್ಷಗಳ ಮತಗಟ್ಟೆ ಮಟ್ಟದ ಪ್ರತಿನಿಧಿಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ತಿಳಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್ ನೇತೃತ್ವದ ಪೀಠ, ಯಾವ ರಾಜಕೀಯ ಪಕ್ಷಗಳಿಗೆ ಈ ಮಾಹಿತಿ ನೀಡಲಾಗಿದೆ ಎಂಬುದರ ಪಟ್ಟಿಯನ್ನು ಆಗಸ್ಟ್ 9ರೊಳಗೆ ದಾಖಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತು. ಈ ಪ್ರಕರಣವನ್ನು ಆಗಸ್ಟ್ 12 ರಂದು ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

“ಪರಿಣಾಮ ಎದುರಿಸುವ ಸಾಧ್ಯತೆಯಿರುವ ಪ್ರತಿಯೊಬ್ಬ ಮತದಾರರಿಗೂ ಮಾಹಿತಿ ನೀಡಿ, ನಿಯಮಗಳನ್ನು ಪಾಲಿಸಲು ಅವಕಾಶ ನೀಡಲಾಗಿದೆ ಎಂದು ನಾವು ಖಚಿತಪಡಿಸಿಕೊಳ್ಳುತ್ತೇವೆ. ರಾಜಕೀಯ ಪಕ್ಷಗಳು ಮತ್ತು ಸ್ಥಳೀಯ ಆಡಳಿತವು ಅಗತ್ಯ ಮಾಹಿತಿಯನ್ನು ಹೊಂದಿರಬೇಕು,” ಎಂದು ಪೀಠ ಹೇಳಿದೆ.

ಜೂನ್ 26ರಂದು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಚುನಾವಣಾ ಆಯೋಗ ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ADR ಮಂಗಳವಾರ ಒಂದು ಮಧ್ಯಂತರ ಅರ್ಜಿಯನ್ನು ಸಲ್ಲಿಸಿದೆ.

ಜುಲೈ 25ರಂದು ಚುನಾವಣಾ ಆಯೋಗ ನೀಡಿದ ಪತ್ರಿಕಾ ಹೇಳಿಕೆಯ ಪ್ರಕಾರ, SIR ಪ್ರಕ್ರಿಯೆಯಿಂದ ಸುಮಾರು 65 ಲಕ್ಷ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ. “ಇದರಿಂದ ಆಯೋಗದ ಬಳಿ ಮೃತಪಟ್ಟ ಸುಮಾರು 22 ಲಕ್ಷ ಮತದಾರರು, ಶಾಶ್ವತವಾಗಿ ಸ್ಥಳಾಂತರಗೊಂಡ ಅಥವಾ ಪತ್ತೆಯಾಗದ ಸುಮಾರು 35 ಲಕ್ಷ ಮತದಾರರು, ಹಲವು ಸ್ಥಳಗಳಲ್ಲಿ ನೋಂದಾಯಿಸಿಕೊಂಡಿರುವ ಸುಮಾರು 7 ಲಕ್ಷ ಮತದಾರರು ಮತ್ತು ಇನ್ನೂ ಫಾರ್ಮ್‌ಗಳು ಸ್ವೀಕೃತವಾಗದಿರುವ ಸುಮಾರು 1.2 ಲಕ್ಷ ಮತದಾರರ ವಿವರಗಳಿವೆ ಎಂದು ಸ್ಪಷ್ಟವಾಗುತ್ತದೆ,” ಎಂದು ADR ಅರ್ಜಿಯಲ್ಲಿ ತಿಳಿಸಿದೆ.

65 ಲಕ್ಷ ಹೆಸರುಗಳ ಪಟ್ಟಿಯಿಂದ ತೆಗೆದುಹಾಕಲು ನಿರ್ದಿಷ್ಟ ಕಾರಣವನ್ನು ಬಹಿರಂಗಪಡಿಸಲು ಇಸಿಐ ವಿಫಲವಾಗಿರುವುದು, “ಈ ವ್ಯಕ್ತಿಗಳು ನಿಜವಾಗಿಯೂ ಮೃತಪಟ್ಟಿದ್ದಾರೆಯೇ ಅಥವಾ ಶಾಶ್ವತವಾಗಿ ವಲಸೆ ಹೋಗಿದ್ದಾರೆಯೇ ಎಂದು ಪರಿಶೀಲಿಸುವುದನ್ನು ತಡೆಯುವ ಪ್ರಯತ್ನವಾಗಿದೆ,” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದೇ ವೇಳೆ, ಬಿಹಾರ ಚುನಾವಣಾ ಕಚೇರಿಯ ಮೂಲಗಳು ತಿಳಿಸಿರುವಂತೆ, SIR ಪ್ರಕ್ರಿಯೆಯು ಹೆಚ್ಚಿನ ಮತದಾರರನ್ನು ಮತದಾನದಿಂದ ಹೊರಗಿಡಲಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಯಾವುದೇ ಸ್ಪಷ್ಟ ಸಾಕ್ಷ್ಯಗಳಿಲ್ಲ. ಆಗಸ್ಟ್ 1ರಿಂದ ಯಾವುದೇ ರಾಜಕೀಯ ಪಕ್ಷದಿಂದ ಯಾವುದೇ ದೂರು ಅಥವಾ ಆಕ್ಷೇಪಣೆ ದಾಖಲಾಗಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

‘ನಿಮ್ಮ ಪಾದ ತೊಳೆಯಲು ಗಂಗಾ ಮಾತೆ ಬಂದಿದ್ದಾಳೆ, ನಿಮ್ಮನ್ನು ಸೀದಾ ಸ್ವರ್ಗಕ್ಕೆ ಕೊಂಡೊಯ್ಯುತ್ತಾಳೆ’: ಪ್ರವಾಹ ಸಂತ್ರಸ್ತರಿಗೆ ಹೇಳಿದ ಉತ್ತರ ಪ್ರದೇಶ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...