Homeದಲಿತ್ ಫೈಲ್ಸ್ಬಿಹಾರ| ಹೋಳಿ ಆಚರಣೆಯ ಸಂದರ್ಭದಲ್ಲಿ 80 ವರ್ಷದ ದಲಿತ ವೃದ್ಧೆ ಮೇಲೆ ಅತ್ಯಾಚಾರ

ಬಿಹಾರ| ಹೋಳಿ ಆಚರಣೆಯ ಸಂದರ್ಭದಲ್ಲಿ 80 ವರ್ಷದ ದಲಿತ ವೃದ್ಧೆ ಮೇಲೆ ಅತ್ಯಾಚಾರ

- Advertisement -
- Advertisement -

ಕಳೆದ ಭಾನುವಾರ ಸಂಜೆ ಹುಲ್ಲು ಕತ್ತರಿಸಲು ಗೋಧಿ ಹೊಲಕ್ಕೆ ತೆರಳಿದ್ದ 80 ವರ್ಷದ ದಲಿತ ವೃದ್ದೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಪಾಟ್ನಾ ಬಳಿಯಲ್ಲಿ ಬೆಳಕಿಗೆ ಬಂದಿದೆ. ಹೊಲಕ್ಕೆ ತೆರಳಿದ್ದ ವೃದ್ದೆ ಮೇಲೆ ಆರೋಪಿ ಹಲ್ಲೆ ನಡೆಸಿದ್ದು, ಆಕೆಯ ಬಾಯಿ ಮುಚ್ಚಿಸಿದ ನಂತರ ಘೋರ ಅಪರಾಧ ಎಸಗಿದ್ದಾನೆ ಎಂದು ಆಕೆಯ ಕುಟುಂಬ ಸದಸ್ಯರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

“ಸಂತ್ರಸ್ತ ಮಹಿಳೆ ಮನೆಯಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿರುವ ಗೋಧಿ ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದಾಗ, ಕೆಲವರು ಆಕೆಯನ್ನು ಹಿಂದಿನಿಂದ ಹಿಡಿದುಕೊಂಡಿದ್ದಾರೆ. ಆಕೆ ತನ್ನನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ, ಬಾಯಿ ಮುಚ್ಚಿ ಅತ್ಯಾಚಾರ ಎಸಗಿದರು. ಹಲ್ಲೆ ನಡೆಸಿ, ಆಕೆಯ ದೇಹದ ಮೇಲೆ ಹಲವಾರು ಗಾಯಗಳನ್ನು ಮಾಡಿದ್ದಾರೆ. ಆರೋಪಿ ವೃದ್ದೆಯ ಕಣ್ಣುಗಳನ್ನು ಕಿತ್ತುಹಾಕಲು ಪ್ರಯತ್ನಿಸಿದ್ದು, ಆಕೆ ಪ್ರಜ್ಞೆ ತಪ್ಪಿದ ನಂತರ ಮೃತಪಟ್ಟಿದ್ದಾಳೆಂದು ನಂಬಿ ಸ್ಥಳದಿಂದ ಪರಾರಿಯಾಗಿದ್ದನು” ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳದಲ್ಲಿ ಇನ್ನೂ ಇಬ್ಬರಿರು. ಆದರೆ, ಅವರು ಅತ್ಯಾಚಾರದಲ್ಲಿ ಭಾಗವಹಿಸಲಿಲ್ಲ ಎಂದು ತಿಳಿದುಬಂದಿದೆ.

“ಅಪರಾಧ ನಡೆದ 19 ಗಂಟೆಗಳ ನಂತರ ಮಾರ್ಚ್ 15 ರಂದು ಮಧ್ಯಾಹ್ನ ಮಹಿಳೆಗೆ ಪ್ರಜ್ಞೆ ಬಂದು ಘಟನೆಯ ಬಗ್ಗೆ ತಿಳಿಸಿದಾಗ, ಅವರು ಆರೋಪಿಯ ಮನೆಗೆ ಹೋಗಿ ಆತನನ್ನು ಪ್ರಶ್ನಿಸಿದ್ದಾರೆ. ಆದರೆ, ಆತನ ಸಹೋದರ ಮತ್ತು ತಂದೆ ಜಾತಿ ನಿಂದನೆ ಮಾಡಿ ಅವರನ್ನು ಬೆದರಿಸಿದ್ದಾರೆ. ಇದರ ನಂತರ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಲಾಯಿತು” ಎಂದು ದೂರುದಾರರು ಹೇಳಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಬಿಎನ್‌ಎಸ್ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಮುಖ ಆರೋಪಿ, ಆತನ ಕುಟುಂಬದ ನಾಲ್ವರು ಮತ್ತು ಅಪರಾಧದ ಸಮಯದಲ್ಲಿ ಸ್ಥಳದಲ್ಲಿದ್ದ ಇತರ ಇಬ್ಬರು ಸೇರಿದ್ದಾರೆ. ಪ್ರಮುಖ ಆರೋಪಿಯೊಂದಿಗೆ ಇದ್ದ ಇಬ್ಬರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಸ್ಟೇಷನ್ ಹೌಸ್ ಅಧಿಕಾರಿ (ಎಸ್‌ಎಚ್‌ಒ) ತಿಳಿಸಿದ್ದಾರೆ.

“ಪ್ರಮುಖ ಆರೋಪಿ, ಆತನ ಮತ್ತೊಬ್ಬ ಸಹಚರ ಮತ್ತು ಆತನ ಕುಟುಂಬದ ನಾಲ್ವರು ಸದಸ್ಯರನ್ನು ಬಂಧಿಸಲು ದಾಳಿ ನಡೆಸಲಾಗುತ್ತಿದೆ, ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ” ಎಂದು ಅವರು ಹೇಳಿದರು.

ಹೋಳಿ ಹಬ್ಬದ ದಿನದಂದು ಅತ್ತೆಯನ್ನು ಹುಡುಕುತ್ತಿದ್ದಾಗ, ಗ್ರಾಮದ ಕೆಲವು ಮಹಿಳೆಯರು ವೃದ್ಧ ಮಹಿಳೆ ಗೋಧಿ ಹೊಲದಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ ಎಂದು ಸಂತ್ರಸ್ತೆಯ ಸೊಸೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಎಸ್‌ಎಚ್‌ಒ ಹೇಳಿದರು. ನಂತರ ಅವರು ಸ್ಥಳಕ್ಕೆ ಹೋಗಿ ಸ್ಥಳೀಯ ನಿವಾಸಿಗಳ ಸಹಾಯದಿಂದ ಆಕೆಯನ್ನು ಮನೆಗೆ ಕರೆತಂದು ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಿದ್ದಾರೆ.

“ಘಟನೆಯ 19 ಗಂಟೆಗಳ ನಂತರ, ಮಾರ್ಚ್ 15 ಮಧ್ಯಾಹ್ನದ ಸುಮಾರಿಗೆ ವೃದ್ಧ ಮಹಿಳೆ ಪ್ರಜ್ಞೆ ಮರಳಿ ಬಂದು ಇಡೀ ಸಂಕಷ್ಟವನ್ನು ವಿವರಿಸಿದರು” ಎಂದು ಎಸ್‌ಎಚ್‌ಒ ಹೇಳಿದರು.

24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು ದೋಷಿಗಳೆಂದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...