Homeದಲಿತ್ ಫೈಲ್ಸ್ಬಿಹಾರ| ಹೋಳಿ ಆಚರಣೆಯ ಸಂದರ್ಭದಲ್ಲಿ 80 ವರ್ಷದ ದಲಿತ ವೃದ್ಧೆ ಮೇಲೆ ಅತ್ಯಾಚಾರ

ಬಿಹಾರ| ಹೋಳಿ ಆಚರಣೆಯ ಸಂದರ್ಭದಲ್ಲಿ 80 ವರ್ಷದ ದಲಿತ ವೃದ್ಧೆ ಮೇಲೆ ಅತ್ಯಾಚಾರ

- Advertisement -
- Advertisement -

ಕಳೆದ ಭಾನುವಾರ ಸಂಜೆ ಹುಲ್ಲು ಕತ್ತರಿಸಲು ಗೋಧಿ ಹೊಲಕ್ಕೆ ತೆರಳಿದ್ದ 80 ವರ್ಷದ ದಲಿತ ವೃದ್ದೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಪಾಟ್ನಾ ಬಳಿಯಲ್ಲಿ ಬೆಳಕಿಗೆ ಬಂದಿದೆ. ಹೊಲಕ್ಕೆ ತೆರಳಿದ್ದ ವೃದ್ದೆ ಮೇಲೆ ಆರೋಪಿ ಹಲ್ಲೆ ನಡೆಸಿದ್ದು, ಆಕೆಯ ಬಾಯಿ ಮುಚ್ಚಿಸಿದ ನಂತರ ಘೋರ ಅಪರಾಧ ಎಸಗಿದ್ದಾನೆ ಎಂದು ಆಕೆಯ ಕುಟುಂಬ ಸದಸ್ಯರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

“ಸಂತ್ರಸ್ತ ಮಹಿಳೆ ಮನೆಯಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿರುವ ಗೋಧಿ ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದಾಗ, ಕೆಲವರು ಆಕೆಯನ್ನು ಹಿಂದಿನಿಂದ ಹಿಡಿದುಕೊಂಡಿದ್ದಾರೆ. ಆಕೆ ತನ್ನನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ, ಬಾಯಿ ಮುಚ್ಚಿ ಅತ್ಯಾಚಾರ ಎಸಗಿದರು. ಹಲ್ಲೆ ನಡೆಸಿ, ಆಕೆಯ ದೇಹದ ಮೇಲೆ ಹಲವಾರು ಗಾಯಗಳನ್ನು ಮಾಡಿದ್ದಾರೆ. ಆರೋಪಿ ವೃದ್ದೆಯ ಕಣ್ಣುಗಳನ್ನು ಕಿತ್ತುಹಾಕಲು ಪ್ರಯತ್ನಿಸಿದ್ದು, ಆಕೆ ಪ್ರಜ್ಞೆ ತಪ್ಪಿದ ನಂತರ ಮೃತಪಟ್ಟಿದ್ದಾಳೆಂದು ನಂಬಿ ಸ್ಥಳದಿಂದ ಪರಾರಿಯಾಗಿದ್ದನು” ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳದಲ್ಲಿ ಇನ್ನೂ ಇಬ್ಬರಿರು. ಆದರೆ, ಅವರು ಅತ್ಯಾಚಾರದಲ್ಲಿ ಭಾಗವಹಿಸಲಿಲ್ಲ ಎಂದು ತಿಳಿದುಬಂದಿದೆ.

“ಅಪರಾಧ ನಡೆದ 19 ಗಂಟೆಗಳ ನಂತರ ಮಾರ್ಚ್ 15 ರಂದು ಮಧ್ಯಾಹ್ನ ಮಹಿಳೆಗೆ ಪ್ರಜ್ಞೆ ಬಂದು ಘಟನೆಯ ಬಗ್ಗೆ ತಿಳಿಸಿದಾಗ, ಅವರು ಆರೋಪಿಯ ಮನೆಗೆ ಹೋಗಿ ಆತನನ್ನು ಪ್ರಶ್ನಿಸಿದ್ದಾರೆ. ಆದರೆ, ಆತನ ಸಹೋದರ ಮತ್ತು ತಂದೆ ಜಾತಿ ನಿಂದನೆ ಮಾಡಿ ಅವರನ್ನು ಬೆದರಿಸಿದ್ದಾರೆ. ಇದರ ನಂತರ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಲಾಯಿತು” ಎಂದು ದೂರುದಾರರು ಹೇಳಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಬಿಎನ್‌ಎಸ್ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಮುಖ ಆರೋಪಿ, ಆತನ ಕುಟುಂಬದ ನಾಲ್ವರು ಮತ್ತು ಅಪರಾಧದ ಸಮಯದಲ್ಲಿ ಸ್ಥಳದಲ್ಲಿದ್ದ ಇತರ ಇಬ್ಬರು ಸೇರಿದ್ದಾರೆ. ಪ್ರಮುಖ ಆರೋಪಿಯೊಂದಿಗೆ ಇದ್ದ ಇಬ್ಬರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಸ್ಟೇಷನ್ ಹೌಸ್ ಅಧಿಕಾರಿ (ಎಸ್‌ಎಚ್‌ಒ) ತಿಳಿಸಿದ್ದಾರೆ.

“ಪ್ರಮುಖ ಆರೋಪಿ, ಆತನ ಮತ್ತೊಬ್ಬ ಸಹಚರ ಮತ್ತು ಆತನ ಕುಟುಂಬದ ನಾಲ್ವರು ಸದಸ್ಯರನ್ನು ಬಂಧಿಸಲು ದಾಳಿ ನಡೆಸಲಾಗುತ್ತಿದೆ, ಅವರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ” ಎಂದು ಅವರು ಹೇಳಿದರು.

ಹೋಳಿ ಹಬ್ಬದ ದಿನದಂದು ಅತ್ತೆಯನ್ನು ಹುಡುಕುತ್ತಿದ್ದಾಗ, ಗ್ರಾಮದ ಕೆಲವು ಮಹಿಳೆಯರು ವೃದ್ಧ ಮಹಿಳೆ ಗೋಧಿ ಹೊಲದಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ ಎಂದು ಸಂತ್ರಸ್ತೆಯ ಸೊಸೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಎಸ್‌ಎಚ್‌ಒ ಹೇಳಿದರು. ನಂತರ ಅವರು ಸ್ಥಳಕ್ಕೆ ಹೋಗಿ ಸ್ಥಳೀಯ ನಿವಾಸಿಗಳ ಸಹಾಯದಿಂದ ಆಕೆಯನ್ನು ಮನೆಗೆ ಕರೆತಂದು ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಿದ್ದಾರೆ.

“ಘಟನೆಯ 19 ಗಂಟೆಗಳ ನಂತರ, ಮಾರ್ಚ್ 15 ಮಧ್ಯಾಹ್ನದ ಸುಮಾರಿಗೆ ವೃದ್ಧ ಮಹಿಳೆ ಪ್ರಜ್ಞೆ ಮರಳಿ ಬಂದು ಇಡೀ ಸಂಕಷ್ಟವನ್ನು ವಿವರಿಸಿದರು” ಎಂದು ಎಸ್‌ಎಚ್‌ಒ ಹೇಳಿದರು.

24 ದಲಿತರ ಸಾಮೂಹಿಕ ಹತ್ಯೆ ಪ್ರಕರಣ | 44 ವರ್ಷಗಳ ಬಳಿಕ ತೀರ್ಪು ಪ್ರಕಟ; ಮೂವರು ದೋಷಿಗಳೆಂದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...