Homeಮುಖಪುಟಬಿಹಾರ | ಮತ್ತೆ ಮೋದಿಯ ಕಾಲು ಮುಟ್ಟಿ ನಮಿಸಲು ಪ್ರಯತ್ನಿಸಿದ ನಿತೀಶ್ ಕುಮಾರ್!

ಬಿಹಾರ | ಮತ್ತೆ ಮೋದಿಯ ಕಾಲು ಮುಟ್ಟಿ ನಮಿಸಲು ಪ್ರಯತ್ನಿಸಿದ ನಿತೀಶ್ ಕುಮಾರ್!

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ದರ್ಭಾಂಗಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾಲನ್ನು ಮುಟ್ಟಿ ನಮಿಸಲು ಪ್ರಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್ ಆಗಿದ್ದು, ನಿತೀಶ್ ಕುಮಾರ್ ಅವರು ಮೋದಿಯವರಿಗೆ ಕೈಮುಗಿಯುತ್ತಾ ಅವರ ಕಾಲನ್ನು ಮುಟ್ಟಿ ನಮಿಸುತ್ತಿರುವುದು ಈ ವರ್ಷದಲ್ಲಿ ಇದು ಮೂರನೇ ಬಾರಿಯಾಗಿದೆ. ಮತ್ತೆ ಮೋದಿಯ ಕಾಲು

ನಿತೀಶ್ ಕುಮಾರ್ ಅವರು ತನ್ನ ಕಾಲನ್ನು ಮುಟ್ಟಲು ಪ್ರಯತ್ನಿಸುತ್ತಿರುವಾಗ ಪ್ರಧಾನಿ ಮೋದಿ ಅದನ್ನು ತಡೆದಿದ್ದು, ಅವರ ಕೈ ಕುಲುಕಿದ್ದಾರೆ. ಇದೇ ಕಾರ್ಯಕ್ರಮದ ಮತ್ತೊಂದು ವಿಡಿಯೊ ಕೂಡಾ ವೈರಲ್ ಆಗಿದ್ದು, ಅದರಲ್ಲಿ ಪಕ್ಷದ ಕಾರ್ಯಕರ್ತರು ಪ್ರಧಾನಿ ಮೋದಿಗೆ ಹಾರ ಹಾಕುತ್ತಿರುವ ವೇಳೆ, ಮೋದಿ ಅವರು ನಿತೀಶ್ ಕುಮಾರ್ ಅವರನ್ನು ತಮ್ಮ ಕಡೆಗೆ ಎಳೆದುಕೊಳ್ಳುತ್ತಾರೆ. ಮತ್ತೆ ಮೋದಿಯ ಕಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷದ ಜೂನ್‌ನಲ್ಲಿ ನಿತೀಶ್ ಕುಮಾರ್ ಅವರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಲು ಪ್ರಯತ್ನಿಸಿದ್ದರು. ಅಷ್ಟೆ ಅಲ್ಲದೆ, ಏಪ್ರಿಲ್‌ ವೇಳೆ ನವಾಡದಲ್ಲಿ ನಡೆದ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಕೂಡಾ ಪ್ರಧಾನಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಿದ್ದರು.

ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ಬಿಜೆಪಿಯ ಎರಡನೇ ಅತಿದೊಡ್ಡ ಮಿತ್ರ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ, ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಲು ಅವರ ಪಕ್ಷವು ಬೆಂಬಲ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದ ಬಿಜೆಪಿ, ಬಹುಮತದ ಗಡಿ ದಾಟಲು ಜೆಡಿಯು ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿಯನ್ನು ಅವಲಂಬಿಸಿದೆ.

ಬಿಹಾರವನ್ನು ‘ಜಂಗಲ್ ರಾಜ್‌’ನಿಂದ ಹೊರತಂದ ನಿತೀಶ್ ಕುಮಾರ್: ಮೋದಿ

ದರ್ಭಾಂಗಾದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಏಮ್ಸ್‌ಗೆ ಅಡಿಪಾಯ ಹಾಕಿದ್ದು, ಸುಮಾರು 12,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಿತೀಶ್ ಕುಮಾರ್ ಅವರು ರಾಜ್ಯವನ್ನು ಪರಿವರ್ತನೆ ಮಾಡಿದ್ದು, ರಾಜ್ಯವನ್ನು ‘ಜಂಗಲ್ ರಾಜ್’ನಿಂದ ಹೊರತಂದಿದ್ದಾರೆ” ಎಂದು ಶ್ಲಾಘಿಸಿ, ಆರ್‌ಜೆಡಿ ಮತ್ತು ಲಾಲು ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎನ್‌ಡಿಎ ಆಡಳಿತದಲ್ಲಿ ಬಿಹಾರದ ಆರೋಗ್ಯ ಮೂಲಸೌಕರ್ಯದಲ್ಲಿನ ಸುಧಾರಣೆಗಳನ್ನೂ ಪ್ರಧಾನಮಂತ್ರಿ ಎತ್ತಿ ತೋರಿಸಿದ್ದಾರೆ. “ಬಿಹಾರದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ಬಿಹಾರದ ಹಿಂದಿನ ಸರ್ಕಾರ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ಎಂದಿಗೂ ತಲೆಕೆಡಿಸಿಕೊಳ್ಳಲಿಲ್ಲ. ಅವರು ಸುಳ್ಳು ಭರವಸೆಗಳನ್ನು ನೀಡುತ್ತಿದ್ದರು. ಆದರೆ ನಿತೀಶ್ ಕುಮಾರ್ ಅಧಿಕಾರಕ್ಕೆ ಬಂದ ನಂತರ ಪರಿಸ್ಥಿತಿ ಸುಧಾರಿಸಿದೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...