Homeಮುಖಪುಟಬಿಹಾರ | ಮತ್ತೆ ಮೋದಿಯ ಕಾಲು ಮುಟ್ಟಿ ನಮಿಸಲು ಪ್ರಯತ್ನಿಸಿದ ನಿತೀಶ್ ಕುಮಾರ್!

ಬಿಹಾರ | ಮತ್ತೆ ಮೋದಿಯ ಕಾಲು ಮುಟ್ಟಿ ನಮಿಸಲು ಪ್ರಯತ್ನಿಸಿದ ನಿತೀಶ್ ಕುಮಾರ್!

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ದರ್ಭಾಂಗಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾಲನ್ನು ಮುಟ್ಟಿ ನಮಿಸಲು ಪ್ರಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್ ಆಗಿದ್ದು, ನಿತೀಶ್ ಕುಮಾರ್ ಅವರು ಮೋದಿಯವರಿಗೆ ಕೈಮುಗಿಯುತ್ತಾ ಅವರ ಕಾಲನ್ನು ಮುಟ್ಟಿ ನಮಿಸುತ್ತಿರುವುದು ಈ ವರ್ಷದಲ್ಲಿ ಇದು ಮೂರನೇ ಬಾರಿಯಾಗಿದೆ. ಮತ್ತೆ ಮೋದಿಯ ಕಾಲು

ನಿತೀಶ್ ಕುಮಾರ್ ಅವರು ತನ್ನ ಕಾಲನ್ನು ಮುಟ್ಟಲು ಪ್ರಯತ್ನಿಸುತ್ತಿರುವಾಗ ಪ್ರಧಾನಿ ಮೋದಿ ಅದನ್ನು ತಡೆದಿದ್ದು, ಅವರ ಕೈ ಕುಲುಕಿದ್ದಾರೆ. ಇದೇ ಕಾರ್ಯಕ್ರಮದ ಮತ್ತೊಂದು ವಿಡಿಯೊ ಕೂಡಾ ವೈರಲ್ ಆಗಿದ್ದು, ಅದರಲ್ಲಿ ಪಕ್ಷದ ಕಾರ್ಯಕರ್ತರು ಪ್ರಧಾನಿ ಮೋದಿಗೆ ಹಾರ ಹಾಕುತ್ತಿರುವ ವೇಳೆ, ಮೋದಿ ಅವರು ನಿತೀಶ್ ಕುಮಾರ್ ಅವರನ್ನು ತಮ್ಮ ಕಡೆಗೆ ಎಳೆದುಕೊಳ್ಳುತ್ತಾರೆ. ಮತ್ತೆ ಮೋದಿಯ ಕಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷದ ಜೂನ್‌ನಲ್ಲಿ ನಿತೀಶ್ ಕುಮಾರ್ ಅವರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಲು ಪ್ರಯತ್ನಿಸಿದ್ದರು. ಅಷ್ಟೆ ಅಲ್ಲದೆ, ಏಪ್ರಿಲ್‌ ವೇಳೆ ನವಾಡದಲ್ಲಿ ನಡೆದ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಕೂಡಾ ಪ್ರಧಾನಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಿದ್ದರು.

ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ಬಿಜೆಪಿಯ ಎರಡನೇ ಅತಿದೊಡ್ಡ ಮಿತ್ರ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ, ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಲು ಅವರ ಪಕ್ಷವು ಬೆಂಬಲ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದ ಬಿಜೆಪಿ, ಬಹುಮತದ ಗಡಿ ದಾಟಲು ಜೆಡಿಯು ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿಯನ್ನು ಅವಲಂಬಿಸಿದೆ.

ಬಿಹಾರವನ್ನು ‘ಜಂಗಲ್ ರಾಜ್‌’ನಿಂದ ಹೊರತಂದ ನಿತೀಶ್ ಕುಮಾರ್: ಮೋದಿ

ದರ್ಭಾಂಗಾದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಏಮ್ಸ್‌ಗೆ ಅಡಿಪಾಯ ಹಾಕಿದ್ದು, ಸುಮಾರು 12,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಿತೀಶ್ ಕುಮಾರ್ ಅವರು ರಾಜ್ಯವನ್ನು ಪರಿವರ್ತನೆ ಮಾಡಿದ್ದು, ರಾಜ್ಯವನ್ನು ‘ಜಂಗಲ್ ರಾಜ್’ನಿಂದ ಹೊರತಂದಿದ್ದಾರೆ” ಎಂದು ಶ್ಲಾಘಿಸಿ, ಆರ್‌ಜೆಡಿ ಮತ್ತು ಲಾಲು ಪ್ರಸಾದ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎನ್‌ಡಿಎ ಆಡಳಿತದಲ್ಲಿ ಬಿಹಾರದ ಆರೋಗ್ಯ ಮೂಲಸೌಕರ್ಯದಲ್ಲಿನ ಸುಧಾರಣೆಗಳನ್ನೂ ಪ್ರಧಾನಮಂತ್ರಿ ಎತ್ತಿ ತೋರಿಸಿದ್ದಾರೆ. “ಬಿಹಾರದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ಬಿಹಾರದ ಹಿಂದಿನ ಸರ್ಕಾರ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ಎಂದಿಗೂ ತಲೆಕೆಡಿಸಿಕೊಳ್ಳಲಿಲ್ಲ. ಅವರು ಸುಳ್ಳು ಭರವಸೆಗಳನ್ನು ನೀಡುತ್ತಿದ್ದರು. ಆದರೆ ನಿತೀಶ್ ಕುಮಾರ್ ಅಧಿಕಾರಕ್ಕೆ ಬಂದ ನಂತರ ಪರಿಸ್ಥಿತಿ ಸುಧಾರಿಸಿದೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

‘ಬುಲ್ಡೋಜರ್ ಈಗ ಗ್ಯಾರೇಜ್‌ನಲ್ಲಿ ಉಳಿಯಲಿದೆ..’; ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...