Homeಮುಖಪುಟಬಿಹಾರ: ನಿತೀಶ್-ತೇಜಸ್ವಿ ನಡುವೆ ಒಪ್ಪಂದ; ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ?

ಬಿಹಾರ: ನಿತೀಶ್-ತೇಜಸ್ವಿ ನಡುವೆ ಒಪ್ಪಂದ; ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ?

- Advertisement -
- Advertisement -

ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಕಸರತ್ತುಗಳು ನಡೆಯುತ್ತಿದ್ದು, ಬಿಜೆಪಿಯ ಮೈತ್ರಿಯಿಂದ ಹೊರಬಂದಿರುವ ನಿತೀಶ್‌ ಕುಮಾರ್‌ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಲಿದ್ದಾರೆ.

32 ವರ್ಷದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಹಾಗೂ ನಿತೀಶ್‌ ಕುಮಾರ್‌ ನಡುವೆ ಒಪ್ಪಂದವಾಗಿದ್ದು ಯಾರಿಗೆ ಯಾವ ಸ್ಥಾನವೆಂದು ನಿರ್ಧರಿಸಲಾಗಿದೆ.

ಮೂಲಗಳನ್ನು ಉಲ್ಲೇಖಿಸಿ ಎನ್‌.ಡಿ.ಟಿ.ವಿ ವರದಿ ಮಾಡಿದೆ. ಜೆಡಿಯು ಪಕ್ಷದ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ. ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಎಲ್ಲಾ ಸಚಿವಾಲಯಗಳ ನಿಯೋಜನೆಯಲ್ಲಿ ನಿತೀಶ್ ಕುಮಾರ್ ಅವರಿಗೆ ವಿಶೇಷಾಧಿಕಾರ ನೀಡಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದಿನ ಸ್ಪೀಕರ್‌‌ ಸ್ಥಾನವನ್ನು ತೇಜಸ್ವಿ ಯಾದವ್‌ ಅವರ ಪಕ್ಷವಾದ ಆರ್‌ಜೆಡಿಯಿಂದ ಆಯ್ಕೆ ಮಾಡಲಾಗುತ್ತಿದೆ.

ನಿತೀಶ್ ಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಪಾಲ್ಗೊಳ್ಳಲು ಸಿದ್ಧರಿರುವ ಎಡಪಕ್ಷಗಳು ಮತ್ತು ಕಾಂಗ್ರೆಸ್‌ನಂತಹ ಇತರ ವಿರೋಧ ಪಕ್ಷಗಳೊಂದಿಗೆ ತೇಜಸ್ವಿ ಯಾದವ್ ಅವರು ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಕೆಳಗಿಳಿಸಬೇಕು ಎಂದು ನಿತೀಶ್‌ ಕುಮಾರ್ ಬಯಸಿದ್ದರು. ತಮ್ಮ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತುವ ಮೂಲಕ ಸಂವಿಧಾನವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ನಿತೀಶ್‌ ಆರೋಪಿಸಿದ್ದರು. ಸ್ಪೀಕರ್‌ ಸಿನ್ಹಾ ಅವರ ಮೇಲೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅನೇಕ ಸಲ ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗೆ ರಾಜಕೀಯ ಬಿಕ್ಕಟ್ಟು ಆರಂಭವಾಯಿತು.

2019ರ ಜೂನ್‌ನಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ತಮ್ಮ ಪಕ್ಷ ಜೆಡಿಯುಗೆ ಒಂದೇ ಒಂದು ಸ್ಥಾನವನ್ನು ನೀಡಿದ ನಂತರ ನಿತಿಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂತದಲ್ಲಿ ನಿತೀಶ್‌ ಕುಮಾರ್‌ ಕ್ಯಾಬಿನೇಟ್‌ ವಿಸ್ತರಣೆ ಮಾಡಿ ತಮ್ಮ ಪಕ್ಷದ ಎಂಟು ಮಂದಿಯನ್ನು ಸೇರಿಸಿಕೊಂಡರು. ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದ್ದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಯೋಚನೆಯನ್ನು ಜೆಡಿಯು ಮುಖ್ಯಸ್ಥರು ವಿರೋಧಿಸಿದ್ದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸುವ ಪ್ರಸ್ತಾಪವನ್ನು ಮೋದಿ ಮಾಡಿದ್ದು, ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಜೆಡಿಯು ಪ್ರತಿಪಕ್ಷಗಳ ನಿಲುವನ್ನು ಸ್ವಾಗತಿಸಿರುವುದು ಬಿಜೆಪಿಗೆ ಸಹಿಸಲಾಗಿಲ್ಲ.

ಇದನ್ನೂ ಓದಿರಿ: ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

ನಿತೀಶ್‌ ಕುಮಾರ್ ಅವರು ತಮ್ಮ ಸಂಪುಟಕ್ಕೆ ಬಿಜೆಪಿ ಸಚಿವರನ್ನು ಸೇರಿಸಿಕೊಳ್ಳುವಾಗ ಸವಾಲುಗಳನ್ನು ಎದುರಿಸಿದ್ದರು. ತಮಗೆ ಆಪ್ತರಾಗಿರುವವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಹಾರದ ಮೇಲೆ ಗೃಹ ಸಚಿವ ಅಮಿತ್ ಶಾ ಹಿಡಿತ ಸಾಧಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿದ್ದವು. ರಾಜಕೀಯ ತಿರುವುಗಳಿಗೆ ಇದು ಕೂಡ ಕಾರಣವಾಯಿತು.

ಜೆಡಿಯು ತೊರೆದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್, ಬಿಜೆಪಿ ನಾಯಕರೊಂದಿಗೆ ನೇರವಾಗಿ ವ್ಯವಹರಿಸುತ್ತಿದ್ದದ್ದು ನಿತೀಶ್ ಕುಮಾರ್‌ ಅವರ ಕೋಪಕ್ಕೆ ಕಾರಣವಾಯಿತು. ನಿತೀಶ್ ಅವರ ನಿಲುವಿಗೆ ವಿರುದ್ಧವಾಗಿ ಕೇಂದ್ರದ ಮಂತ್ರಿಯಾಗಿದ್ದರು.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು. ಅದನ್ನು ಮೀರಿ ಆರ್‌ಸಿಪಿ ಸಿಂಗ್‌ ಕೇಂದ್ರ ಸರ್ಕಾರದ ಸಚಿವರಾಗಿದ್ದು ಸರಿಯೇ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಭಾನುವಾರ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...