Homeಮುಖಪುಟಬಿಹಾರ: ನಿತೀಶ್-ತೇಜಸ್ವಿ ನಡುವೆ ಒಪ್ಪಂದ; ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ?

ಬಿಹಾರ: ನಿತೀಶ್-ತೇಜಸ್ವಿ ನಡುವೆ ಒಪ್ಪಂದ; ಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಸ್ಥಾನ?

- Advertisement -
- Advertisement -

ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಕಸರತ್ತುಗಳು ನಡೆಯುತ್ತಿದ್ದು, ಬಿಜೆಪಿಯ ಮೈತ್ರಿಯಿಂದ ಹೊರಬಂದಿರುವ ನಿತೀಶ್‌ ಕುಮಾರ್‌ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಲಿದ್ದಾರೆ.

32 ವರ್ಷದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಹಾಗೂ ನಿತೀಶ್‌ ಕುಮಾರ್‌ ನಡುವೆ ಒಪ್ಪಂದವಾಗಿದ್ದು ಯಾರಿಗೆ ಯಾವ ಸ್ಥಾನವೆಂದು ನಿರ್ಧರಿಸಲಾಗಿದೆ.

ಮೂಲಗಳನ್ನು ಉಲ್ಲೇಖಿಸಿ ಎನ್‌.ಡಿ.ಟಿ.ವಿ ವರದಿ ಮಾಡಿದೆ. ಜೆಡಿಯು ಪಕ್ಷದ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ. ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಎಲ್ಲಾ ಸಚಿವಾಲಯಗಳ ನಿಯೋಜನೆಯಲ್ಲಿ ನಿತೀಶ್ ಕುಮಾರ್ ಅವರಿಗೆ ವಿಶೇಷಾಧಿಕಾರ ನೀಡಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದಿನ ಸ್ಪೀಕರ್‌‌ ಸ್ಥಾನವನ್ನು ತೇಜಸ್ವಿ ಯಾದವ್‌ ಅವರ ಪಕ್ಷವಾದ ಆರ್‌ಜೆಡಿಯಿಂದ ಆಯ್ಕೆ ಮಾಡಲಾಗುತ್ತಿದೆ.

ನಿತೀಶ್ ಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಪಾಲ್ಗೊಳ್ಳಲು ಸಿದ್ಧರಿರುವ ಎಡಪಕ್ಷಗಳು ಮತ್ತು ಕಾಂಗ್ರೆಸ್‌ನಂತಹ ಇತರ ವಿರೋಧ ಪಕ್ಷಗಳೊಂದಿಗೆ ತೇಜಸ್ವಿ ಯಾದವ್ ಅವರು ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಕೆಳಗಿಳಿಸಬೇಕು ಎಂದು ನಿತೀಶ್‌ ಕುಮಾರ್ ಬಯಸಿದ್ದರು. ತಮ್ಮ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತುವ ಮೂಲಕ ಸಂವಿಧಾನವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ನಿತೀಶ್‌ ಆರೋಪಿಸಿದ್ದರು. ಸ್ಪೀಕರ್‌ ಸಿನ್ಹಾ ಅವರ ಮೇಲೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅನೇಕ ಸಲ ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗೆ ರಾಜಕೀಯ ಬಿಕ್ಕಟ್ಟು ಆರಂಭವಾಯಿತು.

2019ರ ಜೂನ್‌ನಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ತಮ್ಮ ಪಕ್ಷ ಜೆಡಿಯುಗೆ ಒಂದೇ ಒಂದು ಸ್ಥಾನವನ್ನು ನೀಡಿದ ನಂತರ ನಿತಿಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂತದಲ್ಲಿ ನಿತೀಶ್‌ ಕುಮಾರ್‌ ಕ್ಯಾಬಿನೇಟ್‌ ವಿಸ್ತರಣೆ ಮಾಡಿ ತಮ್ಮ ಪಕ್ಷದ ಎಂಟು ಮಂದಿಯನ್ನು ಸೇರಿಸಿಕೊಂಡರು. ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದ್ದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಯೋಚನೆಯನ್ನು ಜೆಡಿಯು ಮುಖ್ಯಸ್ಥರು ವಿರೋಧಿಸಿದ್ದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸುವ ಪ್ರಸ್ತಾಪವನ್ನು ಮೋದಿ ಮಾಡಿದ್ದು, ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಜೆಡಿಯು ಪ್ರತಿಪಕ್ಷಗಳ ನಿಲುವನ್ನು ಸ್ವಾಗತಿಸಿರುವುದು ಬಿಜೆಪಿಗೆ ಸಹಿಸಲಾಗಿಲ್ಲ.

ಇದನ್ನೂ ಓದಿರಿ: ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

ನಿತೀಶ್‌ ಕುಮಾರ್ ಅವರು ತಮ್ಮ ಸಂಪುಟಕ್ಕೆ ಬಿಜೆಪಿ ಸಚಿವರನ್ನು ಸೇರಿಸಿಕೊಳ್ಳುವಾಗ ಸವಾಲುಗಳನ್ನು ಎದುರಿಸಿದ್ದರು. ತಮಗೆ ಆಪ್ತರಾಗಿರುವವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಹಾರದ ಮೇಲೆ ಗೃಹ ಸಚಿವ ಅಮಿತ್ ಶಾ ಹಿಡಿತ ಸಾಧಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿದ್ದವು. ರಾಜಕೀಯ ತಿರುವುಗಳಿಗೆ ಇದು ಕೂಡ ಕಾರಣವಾಯಿತು.

ಜೆಡಿಯು ತೊರೆದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್, ಬಿಜೆಪಿ ನಾಯಕರೊಂದಿಗೆ ನೇರವಾಗಿ ವ್ಯವಹರಿಸುತ್ತಿದ್ದದ್ದು ನಿತೀಶ್ ಕುಮಾರ್‌ ಅವರ ಕೋಪಕ್ಕೆ ಕಾರಣವಾಯಿತು. ನಿತೀಶ್ ಅವರ ನಿಲುವಿಗೆ ವಿರುದ್ಧವಾಗಿ ಕೇಂದ್ರದ ಮಂತ್ರಿಯಾಗಿದ್ದರು.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು. ಅದನ್ನು ಮೀರಿ ಆರ್‌ಸಿಪಿ ಸಿಂಗ್‌ ಕೇಂದ್ರ ಸರ್ಕಾರದ ಸಚಿವರಾಗಿದ್ದು ಸರಿಯೇ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಭಾನುವಾರ ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...