HomeUncategorizedಬಿಹಾರ | ಇಂಡಿಯಾ ಮೈತ್ರಿಗೆ ಸೇರಲು ಮುಂದಾದ ಎಐಎಂಐಎಂ; ಎಡಪಕ್ಷಗಳಿಂದ ತೀವ್ರ ವಿರೋಧ

ಬಿಹಾರ | ಇಂಡಿಯಾ ಮೈತ್ರಿಗೆ ಸೇರಲು ಮುಂದಾದ ಎಐಎಂಐಎಂ; ಎಡಪಕ್ಷಗಳಿಂದ ತೀವ್ರ ವಿರೋಧ

- Advertisement -
- Advertisement -

ಕಾಂಗ್ರೆಸ್ ಮತ್ತು ಆರ್‌ಜೆಡಿಯಿಂದ ಬಿಜೆಪಿಯ ‘ಬಿ-ಟೀಮ್’ ಎಂದು ಹೆಚ್ಚಾಗಿ ಟೀಕಿಸಲ್ಪಡುವ ಅಸಾದುದ್ದೀನ್ ಓವೈಸಿಯವರ ಎಐಎಂಐಎಂ, ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿಯಾ ಮೈತ್ರಿಯೊಂದಿಗೆ ಕೈಜೋಡಿಸಲು ಸಕ್ರಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು TNIE ವರದಿ ಮಾಡಿದೆ.ಬಿಹಾರ | ಇಂಡಿಯಾ ಮೈತ್ರಿಗೆ

ಎಐಎಂಐಎಂನ ಬಿಹಾರ ಮುಖ್ಯಸ್ಥ ಮತ್ತು ಶಾಸಕ ಅಖ್ತರುಲ್ ಈಮಾನ್ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತಮ್ಮ ಪಕ್ಷವು ಕೆಲವು ಶಾಸಕರ ಮೂಲಕ ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರನ್ನು ಸಂಪರ್ಕಿಸಿದೆ. ವಿಶೇಷವಾಗಿ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ್ ಪ್ರದೇಶದಲ್ಲಿ ಒಟ್ಟಾಗಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಪ್ರಸ್ತಾಪವನ್ನು ಪಕ್ಷವು ಹೊಂದಿದೆ ಎಂದು ಹೇಳಿದ್ದಾರೆ.

ಎಐಎಂಐಎಂ ಬಿಜೆಪಿಯನ್ನು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಈಗ ಮೈತ್ರಿ ಪ್ರಸ್ತಾವನೆಗೆ ಪ್ರತಿಕ್ರಿಯಿಸುವುದು ತೇಜಸ್ವಿ ಅವರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ. “ಈ ಪ್ರಸ್ತಾಪವನ್ನು ಇಲ್ಲಿಯವರೆಗೆ ತಿರಸ್ಕರಿಸಲಾಗಿಲ್ಲ ಎಂದು ನಮ್ಮ ಶಾಸಕರು ನನಗೆ ಹೇಳಿದರು” ಎಂದು ಈಮಾನ್ ಹೇಳಿದ್ದಾರೆ.

ಬಿಹಾರದ ತಮ್ಮ ಕೊನೆಯ ಭೇಟಿಯ ಸಮಯದಲ್ಲಿ ಹೇಳಿಕೆ ನೀಡಿದ್ದ ಓವೈಸಿ, ತಮ್ಮ ಪಕ್ಷದ ಕಾರ್ಯಕರ್ತರನ್ನು ಆರ್‌ಜೆಡಿ ಪಕ್ಷಾಂತರಗಳನ್ನು ಮಾಡುತ್ತಿದೆ ಎಂದು ಆರೋಪಿಸಿದ್ದರು. ಮುಂಬರುವ ಚುನಾವಣೆಯಲ್ಲಿ ಎಐಎಂಐಎಂ ಕನಿಷ್ಠ 24 ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದ ಅವರು, ಪಕ್ಷವು ರಾಜ್ಯಾದ್ಯಂತ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸಿದೆ ಎಂದು ಹೇಳಿದ್ದರು.

ಎಐಎಂಐಎಂ ಪಕ್ಷವು ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕವಾಗಿದೆ ಎಂದು ಅಖ್ತರುಲ್ ಈಮಾನ್ ಹೇಳಿದ್ದಾರೆ. ಅದಾಗ್ಯೂ, ಮಾತುಕತೆ ವಿಫಲವಾದರೆ, ಯಾವುದೇ ಮತ ವಿಭಜನೆಗೆ ತಮ್ಮ ಪಕ್ಷವನ್ನು ಹೊಣೆಯಾಗಿಸಬಾರದು ಎಂದು ಅವರು ಎಚ್ಚರಿಸಿದ್ದಾರೆ. “ಏಕಾಂಗಿಯಾಗಿ ನಿಂತು ಯಾವುದೇ ಒಂದು ಪಕ್ಷವು ಕೋಮುವಾದಿ ಶಕ್ತಿಗಳನ್ನು ಸೋಲಿಸಲು ಸಾಧ್ಯವಿಲ್ಲ. ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟದ ಅಗತ್ಯವಿದೆ” ಎಂದು ಅವರು ಹೇಳಿದ್ದಾರೆ.

2020 ರ ವಿಧಾನಸಭಾ ಚುನಾವಣೆಯಲ್ಲಿ, ಎಐಎಂಐಎಂ ಸೀಮಾಂಚಲ್‌ನಲ್ಲಿ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿತ್ತು. ಆದಾಗ್ಯೂ, ಅದರ ನಾಲ್ವರು ಶಾಸಕರು ನಂತರ ಆರ್‌ಜೆಡಿಗೆ ಪಕ್ಷಾಂತರಗೊಂಡರು. ಈ ಚುನಾವಣೆಯಲ್ಲಿ ಎಐಎಂಐಎಂ ಉಪೇಂದ್ರ ಕುಶ್ವಾಹ ಅವರ RLSP ಮತ್ತು ಮಾಯಾವತಿಯವರ ಬಿಎಸ್‌ಪಿ ಜೊತೆಗೆ ಗ್ರ್ಯಾಂಡ್ ಡೆಮಾಕ್ರಟಿಕ್ ಸೆಕ್ಯುಲರ್ ಫ್ರಂಟ್‌ನ ಭಾಗವಾಗಿ ಸ್ಪರ್ಧಿಸಿತ್ತು.

ಈ ಚುನಾವಣೆಗಳಲ್ಲಿ ಎಐಎಂಐಎಂ ಐದು ಸ್ಥಾನಗಳನ್ನು ಗೆದ್ದರೆ, ಬಿಎಸ್‌ಪಿ ಒಂದನ್ನು ಕ್ಷೇತ್ರದಲ್ಲಿ ಗೆಲುವು ಕಂಡಿತ್ತು. ಆದರೆ ಶಾಸಕ ಜಮಾ ಖಾನ್ ನಂತರ ಜೆಡಿಯು ಸೇರಿ ಸಚಿವರಾದರು.

ಎಐಎಂಐಎಂ ಇಂಡಿಯಾ ಸೇರ್ಪಡೆಗೆ ಎಡಪಕ್ಷಗಳಿಂದ ತೀವ್ರ ವಿರೋಧ

ಎಐಎಂಐಎಂ ಪಕ್ಷವು ಇಂಡಿಯಾ ಮೈತ್ರಿಗೆ ಸೇರಲು ಮಾಡಿದ ವಿನಂತಿಗೆ ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ ಎಂದು ಆರ್‌ಜೆಡಿ ಮೂಲಗಳು ತಿಳಿಸಿವೆ. ಆದಾಗ್ಯೂ, ಸೀಮಾಂಚಲ್‌ನಲ್ಲಿ ಅದರ ಪ್ರಭಾವವನ್ನು ಗಮನದಲ್ಲಿಟ್ಟುಕೊಂಡು ಆರ್‌ಜೆಡಿ ಮತ್ತು ಕಾಂಗ್ರೆಸ್ ಎರಡೂ ಎಐಎಂಐಎಂ ಅನ್ನು ಸೇರಿಸಿಕೊಳ್ಳುವ ಪರವಾಗಿವೆ ಎಂದು ವರದಿಗಳು ಉಲ್ಲೇಖಿಸಿವೆ.

ಆರ್‌ಜೆಡಿ-ಕಾಂಗ್ರೆಸ್ ಎಐಎಂಐಎಂಗೆ 8–10 ಸ್ಥಾನಗಳನ್ನು ನೀಡುವುದಾಗಿ ಹೇಳಿದ್ದರೆ, ಪಕ್ಷವು ಕಿಶನ್‌ಗಂಜ್, ಅರಾರಿಯಾ, ಕಟಿಹಾರ್ ಮತ್ತು ಪೂರ್ಣಿಯಾ ಸೇರಿದಂತೆ ಈ ಪ್ರದೇಶದಲ್ಲಿ 24 ಸ್ಥಾನಗಳಿಗೆ ಒತ್ತಾಯಿಸುತ್ತಿದೆ ಎನ್ನಲಾಗಿದೆ. ಬಿಹಾರ | ಇಂಡಿಯಾ ಮೈತ್ರಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...