HomeUncategorizedಬಿಹಾರ | ಇಂಡಿಯಾ ಮೈತ್ರಿಗೆ ಸೇರಲು ಮುಂದಾದ ಎಐಎಂಐಎಂ; ಎಡಪಕ್ಷಗಳಿಂದ ತೀವ್ರ ವಿರೋಧ

ಬಿಹಾರ | ಇಂಡಿಯಾ ಮೈತ್ರಿಗೆ ಸೇರಲು ಮುಂದಾದ ಎಐಎಂಐಎಂ; ಎಡಪಕ್ಷಗಳಿಂದ ತೀವ್ರ ವಿರೋಧ

- Advertisement -
- Advertisement -

ಕಾಂಗ್ರೆಸ್ ಮತ್ತು ಆರ್‌ಜೆಡಿಯಿಂದ ಬಿಜೆಪಿಯ ‘ಬಿ-ಟೀಮ್’ ಎಂದು ಹೆಚ್ಚಾಗಿ ಟೀಕಿಸಲ್ಪಡುವ ಅಸಾದುದ್ದೀನ್ ಓವೈಸಿಯವರ ಎಐಎಂಐಎಂ, ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿಯಾ ಮೈತ್ರಿಯೊಂದಿಗೆ ಕೈಜೋಡಿಸಲು ಸಕ್ರಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು TNIE ವರದಿ ಮಾಡಿದೆ.ಬಿಹಾರ | ಇಂಡಿಯಾ ಮೈತ್ರಿಗೆ

ಎಐಎಂಐಎಂನ ಬಿಹಾರ ಮುಖ್ಯಸ್ಥ ಮತ್ತು ಶಾಸಕ ಅಖ್ತರುಲ್ ಈಮಾನ್ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತಮ್ಮ ಪಕ್ಷವು ಕೆಲವು ಶಾಸಕರ ಮೂಲಕ ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರನ್ನು ಸಂಪರ್ಕಿಸಿದೆ. ವಿಶೇಷವಾಗಿ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ್ ಪ್ರದೇಶದಲ್ಲಿ ಒಟ್ಟಾಗಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಪ್ರಸ್ತಾಪವನ್ನು ಪಕ್ಷವು ಹೊಂದಿದೆ ಎಂದು ಹೇಳಿದ್ದಾರೆ.

ಎಐಎಂಐಎಂ ಬಿಜೆಪಿಯನ್ನು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಈಗ ಮೈತ್ರಿ ಪ್ರಸ್ತಾವನೆಗೆ ಪ್ರತಿಕ್ರಿಯಿಸುವುದು ತೇಜಸ್ವಿ ಅವರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ. “ಈ ಪ್ರಸ್ತಾಪವನ್ನು ಇಲ್ಲಿಯವರೆಗೆ ತಿರಸ್ಕರಿಸಲಾಗಿಲ್ಲ ಎಂದು ನಮ್ಮ ಶಾಸಕರು ನನಗೆ ಹೇಳಿದರು” ಎಂದು ಈಮಾನ್ ಹೇಳಿದ್ದಾರೆ.

ಬಿಹಾರದ ತಮ್ಮ ಕೊನೆಯ ಭೇಟಿಯ ಸಮಯದಲ್ಲಿ ಹೇಳಿಕೆ ನೀಡಿದ್ದ ಓವೈಸಿ, ತಮ್ಮ ಪಕ್ಷದ ಕಾರ್ಯಕರ್ತರನ್ನು ಆರ್‌ಜೆಡಿ ಪಕ್ಷಾಂತರಗಳನ್ನು ಮಾಡುತ್ತಿದೆ ಎಂದು ಆರೋಪಿಸಿದ್ದರು. ಮುಂಬರುವ ಚುನಾವಣೆಯಲ್ಲಿ ಎಐಎಂಐಎಂ ಕನಿಷ್ಠ 24 ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದ ಅವರು, ಪಕ್ಷವು ರಾಜ್ಯಾದ್ಯಂತ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸಿದೆ ಎಂದು ಹೇಳಿದ್ದರು.

ಎಐಎಂಐಎಂ ಪಕ್ಷವು ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕವಾಗಿದೆ ಎಂದು ಅಖ್ತರುಲ್ ಈಮಾನ್ ಹೇಳಿದ್ದಾರೆ. ಅದಾಗ್ಯೂ, ಮಾತುಕತೆ ವಿಫಲವಾದರೆ, ಯಾವುದೇ ಮತ ವಿಭಜನೆಗೆ ತಮ್ಮ ಪಕ್ಷವನ್ನು ಹೊಣೆಯಾಗಿಸಬಾರದು ಎಂದು ಅವರು ಎಚ್ಚರಿಸಿದ್ದಾರೆ. “ಏಕಾಂಗಿಯಾಗಿ ನಿಂತು ಯಾವುದೇ ಒಂದು ಪಕ್ಷವು ಕೋಮುವಾದಿ ಶಕ್ತಿಗಳನ್ನು ಸೋಲಿಸಲು ಸಾಧ್ಯವಿಲ್ಲ. ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟದ ಅಗತ್ಯವಿದೆ” ಎಂದು ಅವರು ಹೇಳಿದ್ದಾರೆ.

2020 ರ ವಿಧಾನಸಭಾ ಚುನಾವಣೆಯಲ್ಲಿ, ಎಐಎಂಐಎಂ ಸೀಮಾಂಚಲ್‌ನಲ್ಲಿ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿತ್ತು. ಆದಾಗ್ಯೂ, ಅದರ ನಾಲ್ವರು ಶಾಸಕರು ನಂತರ ಆರ್‌ಜೆಡಿಗೆ ಪಕ್ಷಾಂತರಗೊಂಡರು. ಈ ಚುನಾವಣೆಯಲ್ಲಿ ಎಐಎಂಐಎಂ ಉಪೇಂದ್ರ ಕುಶ್ವಾಹ ಅವರ RLSP ಮತ್ತು ಮಾಯಾವತಿಯವರ ಬಿಎಸ್‌ಪಿ ಜೊತೆಗೆ ಗ್ರ್ಯಾಂಡ್ ಡೆಮಾಕ್ರಟಿಕ್ ಸೆಕ್ಯುಲರ್ ಫ್ರಂಟ್‌ನ ಭಾಗವಾಗಿ ಸ್ಪರ್ಧಿಸಿತ್ತು.

ಈ ಚುನಾವಣೆಗಳಲ್ಲಿ ಎಐಎಂಐಎಂ ಐದು ಸ್ಥಾನಗಳನ್ನು ಗೆದ್ದರೆ, ಬಿಎಸ್‌ಪಿ ಒಂದನ್ನು ಕ್ಷೇತ್ರದಲ್ಲಿ ಗೆಲುವು ಕಂಡಿತ್ತು. ಆದರೆ ಶಾಸಕ ಜಮಾ ಖಾನ್ ನಂತರ ಜೆಡಿಯು ಸೇರಿ ಸಚಿವರಾದರು.

ಎಐಎಂಐಎಂ ಇಂಡಿಯಾ ಸೇರ್ಪಡೆಗೆ ಎಡಪಕ್ಷಗಳಿಂದ ತೀವ್ರ ವಿರೋಧ

ಎಐಎಂಐಎಂ ಪಕ್ಷವು ಇಂಡಿಯಾ ಮೈತ್ರಿಗೆ ಸೇರಲು ಮಾಡಿದ ವಿನಂತಿಗೆ ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ ಎಂದು ಆರ್‌ಜೆಡಿ ಮೂಲಗಳು ತಿಳಿಸಿವೆ. ಆದಾಗ್ಯೂ, ಸೀಮಾಂಚಲ್‌ನಲ್ಲಿ ಅದರ ಪ್ರಭಾವವನ್ನು ಗಮನದಲ್ಲಿಟ್ಟುಕೊಂಡು ಆರ್‌ಜೆಡಿ ಮತ್ತು ಕಾಂಗ್ರೆಸ್ ಎರಡೂ ಎಐಎಂಐಎಂ ಅನ್ನು ಸೇರಿಸಿಕೊಳ್ಳುವ ಪರವಾಗಿವೆ ಎಂದು ವರದಿಗಳು ಉಲ್ಲೇಖಿಸಿವೆ.

ಆರ್‌ಜೆಡಿ-ಕಾಂಗ್ರೆಸ್ ಎಐಎಂಐಎಂಗೆ 8–10 ಸ್ಥಾನಗಳನ್ನು ನೀಡುವುದಾಗಿ ಹೇಳಿದ್ದರೆ, ಪಕ್ಷವು ಕಿಶನ್‌ಗಂಜ್, ಅರಾರಿಯಾ, ಕಟಿಹಾರ್ ಮತ್ತು ಪೂರ್ಣಿಯಾ ಸೇರಿದಂತೆ ಈ ಪ್ರದೇಶದಲ್ಲಿ 24 ಸ್ಥಾನಗಳಿಗೆ ಒತ್ತಾಯಿಸುತ್ತಿದೆ ಎನ್ನಲಾಗಿದೆ. ಬಿಹಾರ | ಇಂಡಿಯಾ ಮೈತ್ರಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...