HomeUncategorizedಬಿಹಾರ | ಇಂಡಿಯಾ ಮೈತ್ರಿಗೆ ಸೇರಲು ಮುಂದಾದ ಎಐಎಂಐಎಂ; ಎಡಪಕ್ಷಗಳಿಂದ ತೀವ್ರ ವಿರೋಧ

ಬಿಹಾರ | ಇಂಡಿಯಾ ಮೈತ್ರಿಗೆ ಸೇರಲು ಮುಂದಾದ ಎಐಎಂಐಎಂ; ಎಡಪಕ್ಷಗಳಿಂದ ತೀವ್ರ ವಿರೋಧ

- Advertisement -
- Advertisement -

ಕಾಂಗ್ರೆಸ್ ಮತ್ತು ಆರ್‌ಜೆಡಿಯಿಂದ ಬಿಜೆಪಿಯ ‘ಬಿ-ಟೀಮ್’ ಎಂದು ಹೆಚ್ಚಾಗಿ ಟೀಕಿಸಲ್ಪಡುವ ಅಸಾದುದ್ದೀನ್ ಓವೈಸಿಯವರ ಎಐಎಂಐಎಂ, ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿಯಾ ಮೈತ್ರಿಯೊಂದಿಗೆ ಕೈಜೋಡಿಸಲು ಸಕ್ರಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು TNIE ವರದಿ ಮಾಡಿದೆ.ಬಿಹಾರ | ಇಂಡಿಯಾ ಮೈತ್ರಿಗೆ

ಎಐಎಂಐಎಂನ ಬಿಹಾರ ಮುಖ್ಯಸ್ಥ ಮತ್ತು ಶಾಸಕ ಅಖ್ತರುಲ್ ಈಮಾನ್ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತಮ್ಮ ಪಕ್ಷವು ಕೆಲವು ಶಾಸಕರ ಮೂಲಕ ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರನ್ನು ಸಂಪರ್ಕಿಸಿದೆ. ವಿಶೇಷವಾಗಿ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ್ ಪ್ರದೇಶದಲ್ಲಿ ಒಟ್ಟಾಗಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಪ್ರಸ್ತಾಪವನ್ನು ಪಕ್ಷವು ಹೊಂದಿದೆ ಎಂದು ಹೇಳಿದ್ದಾರೆ.

ಎಐಎಂಐಎಂ ಬಿಜೆಪಿಯನ್ನು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಈಗ ಮೈತ್ರಿ ಪ್ರಸ್ತಾವನೆಗೆ ಪ್ರತಿಕ್ರಿಯಿಸುವುದು ತೇಜಸ್ವಿ ಅವರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ. “ಈ ಪ್ರಸ್ತಾಪವನ್ನು ಇಲ್ಲಿಯವರೆಗೆ ತಿರಸ್ಕರಿಸಲಾಗಿಲ್ಲ ಎಂದು ನಮ್ಮ ಶಾಸಕರು ನನಗೆ ಹೇಳಿದರು” ಎಂದು ಈಮಾನ್ ಹೇಳಿದ್ದಾರೆ.

ಬಿಹಾರದ ತಮ್ಮ ಕೊನೆಯ ಭೇಟಿಯ ಸಮಯದಲ್ಲಿ ಹೇಳಿಕೆ ನೀಡಿದ್ದ ಓವೈಸಿ, ತಮ್ಮ ಪಕ್ಷದ ಕಾರ್ಯಕರ್ತರನ್ನು ಆರ್‌ಜೆಡಿ ಪಕ್ಷಾಂತರಗಳನ್ನು ಮಾಡುತ್ತಿದೆ ಎಂದು ಆರೋಪಿಸಿದ್ದರು. ಮುಂಬರುವ ಚುನಾವಣೆಯಲ್ಲಿ ಎಐಎಂಐಎಂ ಕನಿಷ್ಠ 24 ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದ ಅವರು, ಪಕ್ಷವು ರಾಜ್ಯಾದ್ಯಂತ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸಿದೆ ಎಂದು ಹೇಳಿದ್ದರು.

ಎಐಎಂಐಎಂ ಪಕ್ಷವು ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕವಾಗಿದೆ ಎಂದು ಅಖ್ತರುಲ್ ಈಮಾನ್ ಹೇಳಿದ್ದಾರೆ. ಅದಾಗ್ಯೂ, ಮಾತುಕತೆ ವಿಫಲವಾದರೆ, ಯಾವುದೇ ಮತ ವಿಭಜನೆಗೆ ತಮ್ಮ ಪಕ್ಷವನ್ನು ಹೊಣೆಯಾಗಿಸಬಾರದು ಎಂದು ಅವರು ಎಚ್ಚರಿಸಿದ್ದಾರೆ. “ಏಕಾಂಗಿಯಾಗಿ ನಿಂತು ಯಾವುದೇ ಒಂದು ಪಕ್ಷವು ಕೋಮುವಾದಿ ಶಕ್ತಿಗಳನ್ನು ಸೋಲಿಸಲು ಸಾಧ್ಯವಿಲ್ಲ. ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟದ ಅಗತ್ಯವಿದೆ” ಎಂದು ಅವರು ಹೇಳಿದ್ದಾರೆ.

2020 ರ ವಿಧಾನಸಭಾ ಚುನಾವಣೆಯಲ್ಲಿ, ಎಐಎಂಐಎಂ ಸೀಮಾಂಚಲ್‌ನಲ್ಲಿ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿತ್ತು. ಆದಾಗ್ಯೂ, ಅದರ ನಾಲ್ವರು ಶಾಸಕರು ನಂತರ ಆರ್‌ಜೆಡಿಗೆ ಪಕ್ಷಾಂತರಗೊಂಡರು. ಈ ಚುನಾವಣೆಯಲ್ಲಿ ಎಐಎಂಐಎಂ ಉಪೇಂದ್ರ ಕುಶ್ವಾಹ ಅವರ RLSP ಮತ್ತು ಮಾಯಾವತಿಯವರ ಬಿಎಸ್‌ಪಿ ಜೊತೆಗೆ ಗ್ರ್ಯಾಂಡ್ ಡೆಮಾಕ್ರಟಿಕ್ ಸೆಕ್ಯುಲರ್ ಫ್ರಂಟ್‌ನ ಭಾಗವಾಗಿ ಸ್ಪರ್ಧಿಸಿತ್ತು.

ಈ ಚುನಾವಣೆಗಳಲ್ಲಿ ಎಐಎಂಐಎಂ ಐದು ಸ್ಥಾನಗಳನ್ನು ಗೆದ್ದರೆ, ಬಿಎಸ್‌ಪಿ ಒಂದನ್ನು ಕ್ಷೇತ್ರದಲ್ಲಿ ಗೆಲುವು ಕಂಡಿತ್ತು. ಆದರೆ ಶಾಸಕ ಜಮಾ ಖಾನ್ ನಂತರ ಜೆಡಿಯು ಸೇರಿ ಸಚಿವರಾದರು.

ಎಐಎಂಐಎಂ ಇಂಡಿಯಾ ಸೇರ್ಪಡೆಗೆ ಎಡಪಕ್ಷಗಳಿಂದ ತೀವ್ರ ವಿರೋಧ

ಎಐಎಂಐಎಂ ಪಕ್ಷವು ಇಂಡಿಯಾ ಮೈತ್ರಿಗೆ ಸೇರಲು ಮಾಡಿದ ವಿನಂತಿಗೆ ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ ಎಂದು ಆರ್‌ಜೆಡಿ ಮೂಲಗಳು ತಿಳಿಸಿವೆ. ಆದಾಗ್ಯೂ, ಸೀಮಾಂಚಲ್‌ನಲ್ಲಿ ಅದರ ಪ್ರಭಾವವನ್ನು ಗಮನದಲ್ಲಿಟ್ಟುಕೊಂಡು ಆರ್‌ಜೆಡಿ ಮತ್ತು ಕಾಂಗ್ರೆಸ್ ಎರಡೂ ಎಐಎಂಐಎಂ ಅನ್ನು ಸೇರಿಸಿಕೊಳ್ಳುವ ಪರವಾಗಿವೆ ಎಂದು ವರದಿಗಳು ಉಲ್ಲೇಖಿಸಿವೆ.

ಆರ್‌ಜೆಡಿ-ಕಾಂಗ್ರೆಸ್ ಎಐಎಂಐಎಂಗೆ 8–10 ಸ್ಥಾನಗಳನ್ನು ನೀಡುವುದಾಗಿ ಹೇಳಿದ್ದರೆ, ಪಕ್ಷವು ಕಿಶನ್‌ಗಂಜ್, ಅರಾರಿಯಾ, ಕಟಿಹಾರ್ ಮತ್ತು ಪೂರ್ಣಿಯಾ ಸೇರಿದಂತೆ ಈ ಪ್ರದೇಶದಲ್ಲಿ 24 ಸ್ಥಾನಗಳಿಗೆ ಒತ್ತಾಯಿಸುತ್ತಿದೆ ಎನ್ನಲಾಗಿದೆ. ಬಿಹಾರ | ಇಂಡಿಯಾ ಮೈತ್ರಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

ಕ್ಷಮೆ ಕೇಳಲು ಕಮಲ್ ಹಾಸನ್‌ ನಕಾರ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಚಿತ್ರ ಬಿಡುಗಡೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...