Homeಮುಖಪುಟಬಿಹಾರ ವಿಧಾನಸಭೆ ಕಲಾಪ: 2ನೇ ದಿನವೂ ಅಗ್ನಿಪಥ ವಿರುದ್ಧದ ಪ್ರತಿಭಟನೆ ಮುಂದುವರಿಕೆ

ಬಿಹಾರ ವಿಧಾನಸಭೆ ಕಲಾಪ: 2ನೇ ದಿನವೂ ಅಗ್ನಿಪಥ ವಿರುದ್ಧದ ಪ್ರತಿಭಟನೆ ಮುಂದುವರಿಕೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೊಳಿಸುತ್ತಿರುವ ಅಗ್ನಿಪಥ ಯೋಜನೆ ಕುರಿತ ಚರ್ಚೆಗಾಗಿ ಎರಡನೇ ದಿನವೂ (ಮಂಗಳವಾರ) ಬಿಹಾರ ವಿಧಾನಸಭೆಯಲ್ಲಿ ಗದ್ದಲ ಮುಂದುವರೆದಿದೆ. ಯೋಜನೆ ಕುರಿತು ಚರ್ಚೆ ನಡೆಸಬೇಕು ಎಂಬ ಪ್ರತಿಪಕ್ಷಗಳ ನಿರಂತರ ಬೇಡಿಕೆಯನ್ನು ಸಭಾಪತಿ ತಿರಸ್ಕರಿಸಿದ್ದಾರೆ.

ಆರ್‌ಜೆಡಿ ನೇತೃತ್ವದ ವಿರೋಧ ಪಕ್ಷದ ಸದಸ್ಯರು ಸಶಸ್ತ್ರ ಪಡೆಗಳಲ್ಲಿ ನೇಮಕಾತಿಯ ಹೊಸ ಯೋಜನೆಯ ವಿರುದ್ಧ ಘೋಷಣೆಗಳನ್ನು ಕೂಗುವುದರೊಂದಿಗೆ ಬೆಳಿಗ್ಗೆ 11 ಗಂಟೆಗೆ ಕಲಾಪ ಪ್ರಾರಂಭವಾಯಿತು. ಸೋಮವಾರವೂ ಗದ್ದಲ ಹೆಚ್ಚಾಗಿ ವಿಧಾನಸಭೆ ಕಲಾಪವನ್ನು ಪದೇ ಪದೇ ಮುಂದೂಡಲಾಗುತ್ತಿತ್ತು.

ರಾಷ್ಟ್ರೀಯ ಜನತಾ ದಳ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) ಮತ್ತು ಕಾಂಗ್ರೆಸ್‌ನ ಹಲವಾರು ಸದಸ್ಯರು ಯೋಜನೆಯ ವಿರುದ್ಧ ಸದನದ ಬಾವಿಯಲ್ಲಿ ನಿಂತು ಘೋಷಣೆಗಳನ್ನು ಕೂಗಿದ್ದಾರೆ. ಸದನದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ವಿಷಯದ ಬಗ್ಗೆ ಮೌನ ಮುರಿಯುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ’ಅಗ್ನಿಪಥ್’ ಯೋಜನೆ; ’ಎಕ್ಸೆಕ್ಯುಟಿವ್’ ಆಡಳಿತ ಎಂಬುದು ಸರ್ವಾಧಿಕಾರದ ’ಪ್ರಾಕ್ಸಿ’

ಗಮನಾರ್ಹವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರ ಜೆಡಿಯುನ ಅನೇಕ ನಾಯಕರು ಅಗ್ನಿಪಥ್ ವಿರುದ್ಧದ ಪ್ರತಿಭಟನೆಗಳ ಬಗ್ಗೆ ಸಹಾನುಭೂತಿ ಹೊಂದಿದ್ದು, ಇದು ಮಿತ್ರಪಕ್ಷ ಬಿಜೆಪಿಗೆ ಕಿರಿಕಿರಿಯನ್ನುಂಟುಮಾಡಿದೆ.

ಗದ್ದಲಗಳ ನಡುವೆ ಸಭಾಪತಿ ವಿಜಯ್ ಕುಮಾರ್ ಸಿನ್ಹಾ ಸದನವನ್ನು ನಡೆಸಲು ಪ್ರಯತ್ನಿಸಿದ್ದರು. ಪ್ರತಿಪಕ್ಷಗಳ ಸದಸ್ಯರ ಗದ್ದಲದ ನಡುವೆಯೇ ಪ್ರಶ್ನೋತ್ತರ ಅವಧಿಯನ್ನು ನಡೆಸಿದರು, ಆಗ ಪ್ರತಿಭಟನಾ ನಿರತ ನಾಯಕರು ಸದನದ ಬಾವಿಯಲ್ಲಿ ಕುಳಿತು ಘೋಷಣೆ ಕೂಗಿದ್ದಾರೆ.

ಸುಮಾರು ಅರ್ಧಗಂಟೆಯ ಬಳಿಕ ಶಾಸಕಾಂಗ ಕಲಾಪಕ್ಕೆ ಅಡ್ಡಿಯಾಗುತ್ತಿದ್ದಂತೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿತ್ತು. ಸದನ ಮತ್ತೆ ಕಲಾಪ ಆರಂಭವಾದಾಗ ಪ್ರತಿಪಕ್ಷಗಳ ಸದಸ್ಯರ ಗದ್ದಲದಿಂದ ಮಧ್ಯಾಹ್ನ 2 ಗಂಟೆಯವರೆಗೆ ಮತ್ತೆ ಕಲಾಪ ಮುಂದೂಡಲಾಯಿತು.

ಮಧ್ಯಾಹ್ನ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ನೇತೃತ್ವದಲ್ಲಿ ಎಲ್ಲಾ ವಿಪಕ್ಷಗಳು ಸಭೆ ನಡೆಸಿವೆ. “ಕೇಂದ್ರ ಸರ್ಕಾರದ ಗುತ್ತಿಗೆ ಆಧಾರಿತ ಅಗ್ನಿಪಥ ಯೋಜನೆಯಿಂದ ಉಂಟಾಗಿರುವ ಪ್ರತಿಭಟನೆ ಸಂದರ್ಭಗಳಲ್ಲಿ ದಮನಕಾರಿ ಕ್ರಮ ಕೈಗೊಂಡು, ಯುವಕರ ಮೇಲೆ ದಾಖಲಾದ ಪ್ರಕರಣಗಳು ಹಾಗೂ ಯುವಕರ ಭವಿಷ್ಯವನ್ನು ಹಾಳು ಮಾಡಿದ ಈ ಯೋಜನೆ ವಾಪಸಾತಿಗೆ ಮುಂದಿನ ಕ್ರಿಯಾ ಯೋಜನೆ ಕುರಿತು ಎಲ್ಲಾ ವಿರೋಧ ಪಕ್ಷಗಳ ಜೊತೆ ನಡೆದ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ” ಎಂದು ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಅಗ್ನಿಪಥ ಯೋಜನೆ ಬೀರಬಹುದಾದ ಪರಿಣಾಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....