Homeಮುಖಪುಟಬಿಹಾರ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟ: ಎರಡು ಹಂತಗಳಲ್ಲಿ ಮತದಾನ

ಬಿಹಾರ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟ: ಎರಡು ಹಂತಗಳಲ್ಲಿ ಮತದಾನ

- Advertisement -
- Advertisement -

ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, 14ರಂದು ಮತ ಎಣಿಕೆ ಮಾಡಲಾಗುತ್ತದೆ.

ಸೋಮವಾರ (ಅ.6) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ನವೆಂಬರ್ 6ರಂದು ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಕುರಿತು ಅಕ್ಟೋಬರ್ 10ರಂದು ಅಧಿಸೂಚನೆ ಹೊರಡಿಸಲಾಗುವುದು. ಅಕ್ಟೋಬರ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಮತ್ತು ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 20 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.

ನವೆಂಬರ್ 11ರಂದು ಎರಡನೇ ಹಂತದಲ್ಲಿ, 122 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಬಗ್ಗೆ ಅಕ್ಟೋಬರ್ 13ರಂದು ಅಧಿಸೂಚನೆ ಹೊರಡಿಸಲಾಗುವುದು. ಎರಡನೇ ಹಂತದ ನಾಮಪತ್ರ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದೆ. ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ ಅಕ್ಟೋಬರ್ 23 ಆಗಿದೆ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.

ನವೆಂಬರ್ 14 ರಂದು ಮತಗಳ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

22 ವರ್ಷಗಳಲ್ಲಿ ಮೊದಲ ಬಾರಿಗೆ ನಡೆಸಲಾದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಶಸ್ವಿಯಾಗಿ ಪಟ್ಟಿಯನ್ನು ‘ಶುದ್ಧೀಕರಿಸಿದೆ’ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.

ಉಳಿದಿರುವ ಯಾವುದೇ ದೋಷಗಳಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಮೇಲ್ಮನವಿ ಸಲ್ಲಿಸಬಹುದು. ನಿಖರತೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಎಸ್‌ಐಆರ್ ಕುರಿತ ಆಕ್ಷೇಪಣೆಗಳಿಗೆ ಬಾಗಿಲು ತೆರೆದಿರುತ್ತದೆ ಎಂದಿದ್ದಾರೆ.

ಎಸ್ಐಆರ್ ನಂತರದ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ನಾಮಪತ್ರ ಸಲ್ಲಿಸುವ ದಿನಾಂಕದ ನಂತರ ಬಿಡುಗಡೆಯಾಗಲಿರುವ ಮತದಾರರ ಪಟ್ಟಿ ಅಂತಿಮವಾಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಾದ್ಯಂತ ಮುಕ್ತ, ನ್ಯಾಯಯುತ ಮತ್ತು ಶಾಂತಿಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಹಲವಾರು ನಿರ್ದೇಶನಗಳನ್ನು ಹೊರಡಿಸಿದೆ. ಯಾವುದೇ ರೀತಿಯ ಹಿಂಸಾಚಾರಕ್ಕೆ ಶೂನ್ಯ ಸಹಿಷ್ಣುತೆಯನ್ನು ಪಾಲಿಸುತ್ತೇವೆ. ಮತದಾರರು ಅಥವಾ ಅಭ್ಯರ್ಥಿಗಳ ವಿರುದ್ಧ ಯಾವುದೇ ಬೆದರಿಕೆಗಳಿಗೆ ಅವಕಾಶವಿಲ್ಲ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.

ಮತದಾರರಲ್ಲಿ ವಿಶ್ವಾಸ ಮೂಡಿಸಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ಮುಂಚಿತವಾಗಿಯೇ ನಿಯೋಜನೆ ಮಾಡಲಾಗುವುದು. ರಾಜಕೀಯ ಪಕ್ಷಗಳಿಂದ ಬರುವ ಯಾವುದೇ ಕುಂದುಕೊರತೆಗಳು ಅಥವಾ ದೂರುಗಳನ್ನು ತ್ವರಿತವಾಗಿ ಮತ್ತು ಪಾರದರ್ಶಕವಾಗಿ ಪರಿಹರಿಸಲು, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಲು ಮತ್ತು ಎಲ್ಲಾ ಪಕ್ಷಕಾರರಿಗೆ ಸುಲಭವಾಗಿ ಲಭ್ಯವಾಗಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ನಕಲಿ ಸುದ್ದಿಗಳ ಬಗ್ಗೆ ಸಮಯೋಚಿತವಾಗಿ ಪ್ರತಿಕ್ರಿಯಿಸುವಂತೆ ಜಿಲ್ಲಾ ಮಟ್ಟದ ಸಾಮಾಜಿಕ ಮಾಧ್ಯಮ ತಂಡಗಳಿಗೆ ನಿರ್ದೇಶಿಸಲಾಗಿದೆ. ಮಾದಕ ದ್ರವ್ಯಗಳು, ಮದ್ಯ ಅಥವಾ ಇತರ ನಿಷಿದ್ಧ ವಸ್ತುಗಳ ಅಕ್ರಮ ಸಾಗಣೆಯನ್ನು ತಡೆಗಟ್ಟಲು ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಎಂದು ತಿಳಿಸಿದ್ದಾರೆ.

ಬಿಹಾರದಲ್ಲಿ ಒಟ್ಟು 243 ವಿಧಾನಸಭಾ ಸ್ಥಾನಗಳಿವೆ. ಒಟ್ಟು ಮತದಾರರ ಸಂಖ್ಯೆ 7.43 ಕೋಟಿ ಇದ್ದು, ಇದರಲ್ಲಿ ಸುಮಾರು 14 ಲಕ್ಷ ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ನಾಲ್ಕು ಲಕ್ಷ ಹಿರಿಯ ನಾಗರಿಕರು ಮತ್ತು 14,000 ಜನರು 100 ವರ್ಷಗಳನ್ನು ಪೂರ್ಣಗೊಳಿಸಿದವರು ಇದ್ದಾರೆ ಎಂದು ವಿವರಿಸಿದ್ದಾರೆ.

ಪಾರದರ್ಶಕತೆಯನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಹಿಂದಿನ ಕುಂದುಕೊರತೆಗಳನ್ನು ಪರಿಹರಿಸಲು, ಹಿಂದಿನ ಚುನಾವಣೆಗಳ ಶೇ. 50ಕ್ಕಿಂತ ಬದಲಾಗಿ ಈ ಬಾರಿ ಶೇ. 100ರಷ್ಟು ಮತಗಟ್ಟೆಗಳ ವೆಬ್‌ಕಾಸ್ಟಿಕ್ ನಡೆಸಲಾಗುವುದು. ಈ ಹಿಂದೆ ಕಪ್ಪು ಮತ್ತು ಬಿಳಿ ಬಣ್ಣದಲ್ಲಿದ್ದ ಇವಿಎಂಗಳಲ್ಲಿನ ಅಭ್ಯರ್ಥಿಗಳ ಛಾಯಾಚಿತ್ರಗಳು ಈ ಬಾರಿ ದೊಡ್ಡ ಫಾಂಟ್ ಗಾತ್ರದೊಂದಿಗೆ ಬಣ್ಣದಲ್ಲಿ ಕಾಣಿಸಿಕೊಳ್ಳಲಿದೆ ಎಂದಿದ್ದಾರೆ.

ಇತ್ತೀಚೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಂಡ ವ್ಯಕ್ತಿಗಳಿಗೆ ಹೊಸ ಮತದಾರರ ಚೀಟಿಗಳನ್ನು ನೀಡಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಎಲ್ಲಾ ಚುನಾವಣಾ ಅಪ್ಲಿಕೇಶನ್‌ಗಳ ತಾಯಿ ಎನ್ನಲಾದ ಭಾರತೀಯ ಚುನಾವಣಾ ಆಯೋಗದ ಹೊಸ “ನೆಟ್-ಒನ್” ಸಿಂಗಲ್-ವಿಂಡೋ ಅಪ್ಲಿಕೇಶ ಬಿಹಾರ ಚುನಾವಣೆಯಿಂದ ಕಾರ್ಯಾರಾಂಭ ಮಾಡಲಿದೆ ಮತ್ತು ಈ ಚುನಾವಣೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದೆ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.

ಜಮ್ಮು ಕಾಶ್ಮೀರ, ರಾಜಸ್ಥಾನ, ಜಾರ್ಖಂಡ್, ತೆಲಂಗಾಣ, ಪಂಜಾಬ್, ಮಿಜೋರಾಂ ಮತ್ತು ಒಡಿಶಾ ಸೇರಿ ಏಳು ರಾಜ್ಯಗಳ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 11, 2025ರಂದು ಉಪಚುನಾವಣೆ ನಡೆಯಲಿದೆ ಎಂದು ಇದೇ ವೇಳೆ ಚುನಾವಣಾ ಆಯೋಗ ಘೋಷಿಸಿದೆ. ಇದರ ಮತ ಎಣಿಕೆಯೂ ನವೆಂಬರ್ 14 ರಂದು ನಡೆಯಲಿದೆ ಎಂದಿದೆ.

‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...