HomeಮುಖಪುಟBihar Election: ಅಕ್ಟೋಬರ್ 28 ರಿಂದ ಬಿಹಾರ ವಿಧಾನಸಭಾ ಚುನಾವಣೆ, ನವೆಂಬರ್ 10ಕ್ಕೆ ಫಲಿತಾಂಶ

Bihar Election: ಅಕ್ಟೋಬರ್ 28 ರಿಂದ ಬಿಹಾರ ವಿಧಾನಸಭಾ ಚುನಾವಣೆ, ನವೆಂಬರ್ 10ಕ್ಕೆ ಫಲಿತಾಂಶ

ಬಿಹಾರ ಚುನಾವಣೆಗಾಗಿ 46 ಲಕ್ಷ ಮಾಸ್ಕ್‌ಗಳು, 23 ಲಕ್ಷ ಕೈಗವಸುಗಳು, 7 ಲಕ್ಷ ಲೀಟರ್ ಸ್ಯಾನಿಟೈಸರ್, 6 ಲಕ್ಷ ಪಿಪಿಇ ಕಿಟ್‌ಗಳನ್ನು ಬಳಸಲು ನಿರ್ಧಿರಿಸಲಾಗಿದೆ ಎಂದು ಸುನೀಲ್ ಅರೋರಾ ತಿಳಿಸಿದ್ದಾರೆ.

- Advertisement -
- Advertisement -

ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಕೊನೆಗೂ ದಿನಾಂಕ ನಿಗಧಿ ಮಾಡಿದೆ. ಅಕ್ಟೋಬರ್ 28 ರಿಂದ ಚುನಾವಣೆ ಆರಂಭವಾಗಲಿದ್ದು 3 ಹಂತಗಳಲ್ಲಿ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ನಾಮಪತ್ರ ಸಲ್ಲಿಕೆ ಆರಂಭ: ಮೊದಲ ಹಂತಕ್ಕೆ ಅಕ್ಟೋಬರ್ 1 ರಿಂದ ಆರಂಭ

ಮೊದಲ ಹಂತ: ಅಕ್ಟೋಬರ್ 28.  (71 ಕ್ಷೇತ್ರಗಳಿಗೆ 16 ಜಿಲ್ಲೆಗಳಲ್ಲಿ)

ಎರಡನೇ ಹಂತ: ನವೆಂಬರ್ 03. (94 ಕ್ಷೇತ್ರಗಳಿಗೆ 17 ಜಿಲ್ಲೆಗಳಲ್ಲಿ)

ಮೂರನೇ ಹಂತ: ನವೆಂಬರ್ 07. (78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ)

ಫಲಿತಾಂಶ: ನವೆಂಬರ್ 10.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆ ಸುರಕ್ಷಿತವಾಗಿ ಚುನಾವಣೆ ನಡೆಸುವ ಭರವಸೆ ನೀಡಿದರು. ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚು ಮಾಡಿದ್ದು, ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ.

ವಿಶ್ವಾದಾದ್ಯಂತ ಹರಡಿರುವ ಕೊರೊನಾ ವೈರಸ್ ಸಾಂಕ್ರಾಮಿಕದ ನಡುವೆಯು ನಡೆಯುತ್ತಿರುವ ಬಹುದೊಡ್ಡ  ಚುನಾವಣೆ ಇದಾಗಿದೆ. ಹಾಗಾಗಿ ಚುನಾವಣಾ ಆಯೋಗವು ಚುನಾವಣೆ ನಡೆಸಲು ಹಲವು ನಿಬಂಧನೆಗಳ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೊರೊನಾ ಪಾಸಿಟಿವ್ ಇರುವವರು ಸಹ ಮತದಾನ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಬಿಹಾರ ಚುನಾವಣೆಗಾಗಿ 46 ಲಕ್ಷ ಮಾಸ್ಕ್‌ಗಳು, 23 ಲಕ್ಷ ಕೈಗವಸುಗಳು, 7 ಲಕ್ಷ ಲೀಟರ್ ಸ್ಯಾನಿಟೈಸರ್, 6 ಲಕ್ಷ ಪಿಪಿಇ ಕಿಟ್‌ಗಳನ್ನು ಬಳಸಲು ನಿರ್ಧಿರಿಸಲಾಗಿದೆ ಎಂದು ಸುನೀಲ್ ಅರೋರಾ ತಿಳಿಸಿದ್ದಾರೆ. ಆನ್‌ಲೈನ್‌ನಲ್ಲಿಯೂ ಸಹ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ.

ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎನ್‌ಡಿಎ ಮತ್ತು ಮಹಾಮೈತ್ರಿ ನಡುವೆ ನೇರ ಹಣಾಹಣಿ ನಡೆಯಲಿದೆ. ಎನ್‌ಡಿಯ ಮೈತ್ರಿಕೂಟದಲ್ಲಿ ನಿತೀಶ್‌ ಕುಮಾರ್‌ರವರ ಜೆಡಿಯು, ಬಿಜೆಪಿ, ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ ಮತ್ತು ಜತಿನ್ ರಾಮ್‌ ಮಾಂಝಿಯವರ ಹಿಂದೂಸ್ತಾನ್ ಅವಮ್ ಮೋರ್ಚಾ ಸೇರಿವೆ. ಇದರ ಪ್ರತಿಸ್ಪರ್ಧಿ ಮಹಾಮೈತ್ರಿಯಲ್ಲಿ ಲಾಲು ಪ್ರಸಾದ್ ಯಾದವ್‌ರವರ ಆರ್‌ಜೆಡಿ, ಕಾಂಗ್ರೆಸ್ ಪ್ರಮುಖ ಪಕ್ಷಗಳಾಗಿವೆ.

ಸದ್ಯಕ್ಕೆ ಲಾಲು ಪ್ರಸಾದ್ ಯಾದವ್‌ರವರು ಜೈಲಿನಲ್ಲಿರುವ ಕಾರಣ ಅವರ ಮಗ ತೇಜಸ್ವಿ ಯಾದವ್ ಆರ್‌ಜೆಡಿ ಮತ್ತು ಮಹಾಮೈತ್ರಿಯನ್ನು ಮುನ್ನಡೆಸುತ್ತಿದ್ದಾರೆ. ನಿತೀಶ್ ಕುಮಾರ್‌ರವರು ಕೊರೊನಾ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿರುವ ಅವರು ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತ ವಿರೋಧಿ ಸರ್ಕಾರ ಎಂದು ಟೀಕಿಸಿದ್ದಾರೆ.

ಹಾಲಿ ಮುಖ್ಯಮಂತ್ರಿ ಜೆಡಿಯುನ ನಿತೀಶ್ ಕುಮಾರ್ ನಾಲ್ಕನೇ ಬಾರಿಗೆ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. 2015 ರಲ್ಲಿ ಆರ್‌ಜೆಡಿ, ಕಾಂಗ್ರೆಸ್‌ ಜೊತೆ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಜಯಿಸಿ ಸಿಎಂ ಆಗಿದ್ದ ಅವರು 2017ರಲ್ಲಿ ಮೈತ್ರಿ ಮುರಿದು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ಕಾರಣಕ್ಕೆ ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಚುನಾವಣಾ ಚತುರ ಎಂದೇ ಖ್ಯಾತಿಯಾದ ಪ್ರಶಾಂತ್ ಕಿಶೋರ್ ಬಿಹಾರದಲ್ಲಿ ಯುವಜನರನ್ನು ಸಂಘಟಿಸುತ್ತಿದ್ದಾರೆ. ಅದೇ ರೀತಿಯಾಗಿ ಕಳೆದ ಲೋಕಸಭೆಯಲ್ಲಿ ಸ್ಪರ್ಧಿಸಿ ಗಮನಸೆಳೆದಿದ್ದ ಸಿಪಿಐ ಪಕ್ಷದ ಯುವ ಮುಖಂಡ ಕನ್ಹಯ್ಯ ಕುಮಾರ್ ಸಹ ಈ ಚುನಾವಣೆಯಲ್ಲ ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ.

ಅದೇ ರೀತಿಯಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದಿರುವ ಯುವ ದಲಿತ ಹೋರಾಟಗಾರ ಭೀಮ್‌ ಆರ್ಮಿಯ ಚಂದ್ರಶೇಖರ್ ಆಜಾದ್ ಕೂಡ ‘ಅಜಾದ್ ಸಮಾಜ ಪಕ್ಷ’ ಸ್ಥಾಪಿಸಿದ್ದು ಬಿಹಾರ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...